Homeಮುಖಪುಟಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

- Advertisement -
- Advertisement -

ಆಂಧ್ರಪ್ರದೇಶದ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ 15 ವರ್ಷಗಳಿಂದ ತೆಲುಗು ಭಾಷಾ ಬೋಧನೆ ಮಾಡುತ್ತಿರುವ ಶಿಕ್ಷಕ ವೆಂಕಟಸುಬ್ಬಯ್ಯ ಅವರು ಈಗ ಕೆಲಸ ಕಳೆದುಕೊಂಡಿದ್ದಾರೆ. ಏಕೆಂದರೆ ಇಂತಿಷ್ಟು ವಿದ್ಯಾರ್ಥಿಗಳನ್ನು ನೀವು ಈ ವರ್ಷ ದಾಖಲಾತಿ ಮಾಡಲೇಬೇಕೆಂಬ ಟಾರ್ಗೆಟ್‌ ಅನ್ನು ಅವರು ಪೂರೈಸಲು ವಿಫಲರಾಗಿದ್ದಾರೆ. ಅದಕ್ಕೆ ಮತ್ತೂ ಕಾರಣ ಜನರ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಕುಸಿಯುತ್ತಿರುವುದು. ಇದಕ್ಕೆ ಕಾರಣರಾರು?

ವೆಂಕಟಸುಬ್ಬಯ್ಯ ಸುಮಾರು 15 ವರ್ಷಗಳಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತೆಲುಗು ಕಲಿಸಿದ್ದಾರೆ. ಲಾಕ್‌ಡೌನ್ ಪ್ರಾರಂಭವಾದಾಗಲೂ ಸಹ ಅವರು ಆನ್‌ಲೈನ್ ತರಗತಿಗಳ ಮೂಲಕ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ ತಮ್ಮ ವಿದ್ಯಾರ್ಥಿಗಳಿಗೆ ಬೋಧನೆ ಮುಂದುವರೆಸಿದ್ದರು. ಆದರೆ ಯಾವಾಗ ದಾಖಲಾಗಿತ ಕಡಿಮೆಯಾಯಿತೊ ಅವರನ್ನು ಮನೆಗೆ ಕಳಿಸಲಾಯಿತು. ತಮ್ಮ ಮಗನ ವೈದ್ಯಕೀಯ ವೆಚ್ಚಕ್ಕಾಗಿ ಸಾಲ ಮಾಡಿಕೊಂಡಿದ್ದ ಅವರು ಕೆಲಸ ಕಳೆದುಕೊಂದು ಅಕ್ಷರಶಃ ಬೀದಿಗೆ ಬಿದ್ದರು. ಬದುಕಿನ ಬಂಡಿ ಸಾಗಿಸಲು ಅವರು ಈಗ ಬಾಳೆಹಣ್ಣು ಮಾರಾಟವನ್ನು ಆರಂಭಿಸಿದ್ದಾರೆ.

ಆಸರೆಗೆ ಬಂದ ಹಳೇ ವಿದ್ಯಾರ್ಥಿಗಳು

ವೆಂಕಟಸುಬ್ಬಯ್ಯನವರ ಪರಿಸ್ಥಿತಿ ನೋಡಿದ ಅವರ ಮಾಜಿ ವಿದ್ಯಾರ್ಥಿಗಳು ಕರಗಿದ್ದಾರೆ. ಎಷ್ಟೇ ಬಾಳೆಹಣ್ಣು ಮಾರಿದರೂ ಸಹ ಸದ್ಯದ ಅವರ ಸಾಲ ತೀರಿ, ಅವರ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುವುದು ಕಷ್ಟವಿದೆ. ಇದನ್ನು ಅರಿತ ಅವರ 150 ಹಳೆಯ ವಿದ್ಯಾರ್ಥಿಗಳು ಸೇರಿ 86,300 ರೂಗಳನ್ನು ಒಟ್ಟುಗೂಡಿಸಿ ಕೊಟ್ಟಿದ್ದಾರೆ. ಆದರೆ ವೆಂಕಟಸುಬ್ಬಯ್ಯನವರು ಅದನ್ನು ಪಡೆಯಲು ನಿರಾಕರಿಸಿ, ಪರಿಸ್ಥಿತಿ ಭೀಕರವಾಗಿದೆ ಇದು ನಿಮಗೆ ಉಪಯೋಗಕ್ಕೆ ಬರುತ್ತದೆ ಇಟ್ಟುಕೊಳ್ಳಿ ಎಂದರೆ ಒಪ್ಪದ ವಿದ್ಯಾರ್ಥಿಗಳು ಬಲವಂತವಾಗಿ ತಮ್ಮ ಶಿಕ್ಷಕರಿಗೆ ನೀಡಿದ್ದಾರೆ.

“ಬಾಳೆಹಣ್ಣುಗಳನ್ನು ಮಾರಾಟ ಮಾಡುವುದು ತಾತ್ಕಾಲಿಕ ಕೆಲಸ. ವರ್ಷಗಳ ಹಿಂದಿನ ಅನೇಕ ಮಾಜಿ ವಿದ್ಯಾರ್ಥಿಗಳು ನನಗೆ ಸಹಾಯ ಮಾಡಲು ಬಯಸಿದರೆ, ನಾನು ಶಿಕ್ಷಕನಾಗಿ ಅವರ ಮೇಲೆ ಪ್ರಭಾವ ಬೀರಿರಬೇಕು. ಕಡಿಮೆ ಸಂಬಳ ಸಿಕ್ಕರೂ ಸರಿಯೇ ನಾನು ಅಂತಿಮವಾಗಿ ಬೋಧನೆಗೆ ಹಿಂತಿರುಗಲು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ.

ಲಾಕ್‌ಡೌನ್‌ ತಂದಿಟ್ಟ ಸಂಕಷ್ಟ

COVID-19 ಲಾಕ್‌ಡೌನ್ ಪ್ರಾರಂಭವಾದಾಗ, ಮಾರ್ಚ್ 29 ರಿಂದ ನಾರಾಯಣ ಶಾಲೆಯಲ್ಲಿ ಆನ್‌ಲೈನ್ ತರಗತಿಗಳು ಪ್ರಾರಂಭವಾದವು ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ. ತರಗತಿಗಳು ಮುಗಿಯುವ ಕೆಲವು ದಿನಗಳ ಮೊದಲು ಮೇ 14 ರಂದು ಶಾಲಾ ಆಡಳಿತ ಮಂಡಳಿ ವೆಂಕಟಸುಬ್ಬಯ್ಯ ಮತ್ತು ಅವರ ಐದು ಸಹೋದ್ಯೋಗಿಗಳೊಂದಿಗೆ ಆನ್‌ಲೈನ್‌ನಲ್ಲಿ ಸಭೆ ನಡೆಸಿತು. ಅವರ “ಕಾರ್ಯಕ್ಷಮತೆ ಅತೃಪ್ತಿಕರವಾಗಿರುವುದರಿಂದ” ಅವರು ಇನ್ನು ಮುಂದೆ ಕೆಲಸ ಮಾಡುವುದನ್ನು ಮುಂದುವರಿಸಬೇಕಾಗಿಲ್ಲ ಎಂದು ಅವರಿಗೆ ತಿಳಿಸಲಾಯಿತು.

ಅಂದರೆ ಇಲ್ಲಿ ಶಾಲೆಯ ಆಡಳಿತ ಮಂಡಳಿ ಇವರ ಬೋಧನಾ ಸಾಮರ್ಥ್ಯಗಳನ್ನು ಉಲ್ಲೇಖಿಸಿಲ್ಲ. ಬದಲಾಗಿ ಶಾಲೆಗೆ ಹೊಸ ದಾಖಲಾತಿ ಮಾಡಿಸುವಲ್ಲಿ ಇವರು ತಮ್ಮ ಟಾರ್ಗೆಟ್‌ ಮುಟ್ಟಿಲ್ಲ ಎಂಬುದು ಆಡಳಿತ ಮಂಡಳಿಯ ಆಕ್ಷೇಪಣೆ. ಲಾಕ್‌ಡೌನ್‌ ಸಮಯದಲ್ಲಿ ನಾವು ಮನೆ ಮನೆಗೆ ಹೋಗಿ ಪೋಷಕರ ಮನವೊಲಿಸಲು ಸಾಧ್ಯವಾಗುತ್ತಿಲ್ಲ, ಹೊಸ ದಾಖಲಾತಿ ಮಾಡಿಸಲು ಹೇಗೆ ಸಾಧ್ಯ, ಹಾಗಾದರೆ ನಾವು ಅಸಮರ್ಥರೆ? ಎಂಬುದು ವೆಂಕಟಸುಬ್ಬಯ್ಯನವರ ಪ್ರಶ್ನೆಯಾಗಿದೆ.

“2007 ರಲ್ಲಿ ನಾನು ಕಲಿಸಿದ್ದ ಹಳೆಯ ವಿದ್ಯಾರ್ಥಿಯ ತಂದೆ ತನ್ನ ಬಾಳೆಹಣ್ಣಗಳನ್ನು ಮಾರಾಟ ಮಾಡಲು ನನಗೆ ಅವಕಾಶ ಮಾಡಿಕೊಡುವ ಮೂಲಕ ನನಗೆ ಸಹಾಯ ಮಾಡಿದರು” ಎಂದು ತೆಲುಗು ಮತ್ತು ಸಾರ್ವಜನಿಕ ಆಡಳಿತದಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ವೆಂಕಟಸುಬ್ಬಯ್ಯ ಹೇಳುತ್ತಾರೆ. ಅವರೊಂದಿಗೆ ಕೆಲಸ ಕಳೆದುಕೊಂಡ ಅವರ ಕೆಲವು ಸಹೋದ್ಯೋಗಿಗಳು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ ಎಂದು ಅವರು ಹೇಳುತ್ತಾರೆ.

ಖಾಸಗಿ ಶಾಲೆಗಳ ಧನದಾಹಿತನ

ಶ್ರೀ ಚೈತನ್ಯ, ನಾರಾಯಣ ಮತ್ತು ಭಾಷ್ಯಾಮ್ ಶಾಲೆಗಳು ಎಂಬ ಹೆಸರಿನ ಕೆಲವೇ ಮಾಲೀಕರು ಸಾವಿರಾರು ಶಾಳೆಗಳು ಆಂಧ್ರ ತೆಲಂಗಾಣದಲ್ಲಿ ತಲೆಎತ್ತಿವೆ. ಹೆಚ್ಚಿನ ಲಾಭ ಮಾಡುವುದೇ ಈ ಶಾಲೆಗಳ ಏಕೈಕ ಗುರಿಯಾಗಿದೆ. ಹಾಗಾಗಿ ಹೆಚ್ಚಿನ ಮಕ್ಕಳ ದಾಖಲಾತಿ ಮಾಡಿಸುವಂತೆ ಶಿಕ್ಷಕರ ಮೇಲೆ ಒತ್ತಡ ಹೇರಲಾಗುತ್ತದೆ. ಟಾರ್ಗೆಟ್‌ ಮುಟ್ಟದ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗುತ್ತದೆ ಎಂದು ಎಂದು ಆಂಧ್ರಪ್ರದೇಶದ ಖಾಸಗಿ ಶಾಲಾ ಶಿಕ್ಷಕರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಂದ ಅತಿ ಹೆಚ್ಚು ಶುಲ್ಕ ವಸೂಲಿ ಮಾಡುವ ಈ ಶಾಲೆಗಳು ಶಿಕ್ಷಕರಿಗೆ ಪೂರ್ಣ ವೇತನ ನೀಡದೇ ಸತಾಯಿಸುತ್ತಿದ್ದಾರೆ. ಶಿಕ್ಷಕ ರು ಶಾಲೆಯಲ್ಲಿ ಪಾಠ ಮಾಡುವುದಲ್ಲದೇ ಮನೆ ಮನೆಗೆ ತೆರಳಿ ದಾಖಲಾತಿ ಮಾಡಿಸುವುದೇ ಪ್ರಧಾನ ಕೆಲಸವಾಗಿದೆ ಎಂಬ ದೊಡ್ಡ ಆರೋಪ ಈ ಶಾಲೆಗಳ ಮೇಲಿದೆ. ಲಾಕ್‌ಡೌನ್‌ನಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಶಾಲೆಗಳು ಧನದಾಹಿತನಕ್ಕೆ ಬಿದ್ದು ಶಿಕ್ಷಕರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿವೆ.

ಇಂತಹ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಕ ಸಂಘಗಳು ರಾಜ್ಯ ಸರ್ಕಾರದ ಸಹಾಯವನ್ನು ಕೋರಿವೆ. ಈ ಸಮಯದಲ್ಲಿ ಹೆಚ್ಚಿನ ಬೋಧನಾ ಉದ್ಯೋಗಗಳು ಲಭ್ಯವಿಲ್ಲದ ಕಾರಣ ಸರ್ಕಾರವು ಕೆಲವು ಜೀವನೋಪಾಯ ಆಯ್ಕೆಗಳನ್ನು ನೀಡುವ ಮೂಲಕ ನಮಗೆ ಬೆಂಬಲ ನೀಡಬೇಕೆಂದು ನಾನು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಒತ್ತಾಯಿಸುತ್ತಾರೆ.


ಮತ್ತಷ್ಟು ಸುದ್ದಿಗಳು

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...