Homeಮುಖಪುಟಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

- Advertisement -
- Advertisement -

ಆಂಧ್ರಪ್ರದೇಶದ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ 15 ವರ್ಷಗಳಿಂದ ತೆಲುಗು ಭಾಷಾ ಬೋಧನೆ ಮಾಡುತ್ತಿರುವ ಶಿಕ್ಷಕ ವೆಂಕಟಸುಬ್ಬಯ್ಯ ಅವರು ಈಗ ಕೆಲಸ ಕಳೆದುಕೊಂಡಿದ್ದಾರೆ. ಏಕೆಂದರೆ ಇಂತಿಷ್ಟು ವಿದ್ಯಾರ್ಥಿಗಳನ್ನು ನೀವು ಈ ವರ್ಷ ದಾಖಲಾತಿ ಮಾಡಲೇಬೇಕೆಂಬ ಟಾರ್ಗೆಟ್‌ ಅನ್ನು ಅವರು ಪೂರೈಸಲು ವಿಫಲರಾಗಿದ್ದಾರೆ. ಅದಕ್ಕೆ ಮತ್ತೂ ಕಾರಣ ಜನರ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಕುಸಿಯುತ್ತಿರುವುದು. ಇದಕ್ಕೆ ಕಾರಣರಾರು?

ವೆಂಕಟಸುಬ್ಬಯ್ಯ ಸುಮಾರು 15 ವರ್ಷಗಳಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತೆಲುಗು ಕಲಿಸಿದ್ದಾರೆ. ಲಾಕ್‌ಡೌನ್ ಪ್ರಾರಂಭವಾದಾಗಲೂ ಸಹ ಅವರು ಆನ್‌ಲೈನ್ ತರಗತಿಗಳ ಮೂಲಕ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ ತಮ್ಮ ವಿದ್ಯಾರ್ಥಿಗಳಿಗೆ ಬೋಧನೆ ಮುಂದುವರೆಸಿದ್ದರು. ಆದರೆ ಯಾವಾಗ ದಾಖಲಾಗಿತ ಕಡಿಮೆಯಾಯಿತೊ ಅವರನ್ನು ಮನೆಗೆ ಕಳಿಸಲಾಯಿತು. ತಮ್ಮ ಮಗನ ವೈದ್ಯಕೀಯ ವೆಚ್ಚಕ್ಕಾಗಿ ಸಾಲ ಮಾಡಿಕೊಂಡಿದ್ದ ಅವರು ಕೆಲಸ ಕಳೆದುಕೊಂದು ಅಕ್ಷರಶಃ ಬೀದಿಗೆ ಬಿದ್ದರು. ಬದುಕಿನ ಬಂಡಿ ಸಾಗಿಸಲು ಅವರು ಈಗ ಬಾಳೆಹಣ್ಣು ಮಾರಾಟವನ್ನು ಆರಂಭಿಸಿದ್ದಾರೆ.

ಆಸರೆಗೆ ಬಂದ ಹಳೇ ವಿದ್ಯಾರ್ಥಿಗಳು

ವೆಂಕಟಸುಬ್ಬಯ್ಯನವರ ಪರಿಸ್ಥಿತಿ ನೋಡಿದ ಅವರ ಮಾಜಿ ವಿದ್ಯಾರ್ಥಿಗಳು ಕರಗಿದ್ದಾರೆ. ಎಷ್ಟೇ ಬಾಳೆಹಣ್ಣು ಮಾರಿದರೂ ಸಹ ಸದ್ಯದ ಅವರ ಸಾಲ ತೀರಿ, ಅವರ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುವುದು ಕಷ್ಟವಿದೆ. ಇದನ್ನು ಅರಿತ ಅವರ 150 ಹಳೆಯ ವಿದ್ಯಾರ್ಥಿಗಳು ಸೇರಿ 86,300 ರೂಗಳನ್ನು ಒಟ್ಟುಗೂಡಿಸಿ ಕೊಟ್ಟಿದ್ದಾರೆ. ಆದರೆ ವೆಂಕಟಸುಬ್ಬಯ್ಯನವರು ಅದನ್ನು ಪಡೆಯಲು ನಿರಾಕರಿಸಿ, ಪರಿಸ್ಥಿತಿ ಭೀಕರವಾಗಿದೆ ಇದು ನಿಮಗೆ ಉಪಯೋಗಕ್ಕೆ ಬರುತ್ತದೆ ಇಟ್ಟುಕೊಳ್ಳಿ ಎಂದರೆ ಒಪ್ಪದ ವಿದ್ಯಾರ್ಥಿಗಳು ಬಲವಂತವಾಗಿ ತಮ್ಮ ಶಿಕ್ಷಕರಿಗೆ ನೀಡಿದ್ದಾರೆ.

“ಬಾಳೆಹಣ್ಣುಗಳನ್ನು ಮಾರಾಟ ಮಾಡುವುದು ತಾತ್ಕಾಲಿಕ ಕೆಲಸ. ವರ್ಷಗಳ ಹಿಂದಿನ ಅನೇಕ ಮಾಜಿ ವಿದ್ಯಾರ್ಥಿಗಳು ನನಗೆ ಸಹಾಯ ಮಾಡಲು ಬಯಸಿದರೆ, ನಾನು ಶಿಕ್ಷಕನಾಗಿ ಅವರ ಮೇಲೆ ಪ್ರಭಾವ ಬೀರಿರಬೇಕು. ಕಡಿಮೆ ಸಂಬಳ ಸಿಕ್ಕರೂ ಸರಿಯೇ ನಾನು ಅಂತಿಮವಾಗಿ ಬೋಧನೆಗೆ ಹಿಂತಿರುಗಲು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ.

ಲಾಕ್‌ಡೌನ್‌ ತಂದಿಟ್ಟ ಸಂಕಷ್ಟ

COVID-19 ಲಾಕ್‌ಡೌನ್ ಪ್ರಾರಂಭವಾದಾಗ, ಮಾರ್ಚ್ 29 ರಿಂದ ನಾರಾಯಣ ಶಾಲೆಯಲ್ಲಿ ಆನ್‌ಲೈನ್ ತರಗತಿಗಳು ಪ್ರಾರಂಭವಾದವು ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ. ತರಗತಿಗಳು ಮುಗಿಯುವ ಕೆಲವು ದಿನಗಳ ಮೊದಲು ಮೇ 14 ರಂದು ಶಾಲಾ ಆಡಳಿತ ಮಂಡಳಿ ವೆಂಕಟಸುಬ್ಬಯ್ಯ ಮತ್ತು ಅವರ ಐದು ಸಹೋದ್ಯೋಗಿಗಳೊಂದಿಗೆ ಆನ್‌ಲೈನ್‌ನಲ್ಲಿ ಸಭೆ ನಡೆಸಿತು. ಅವರ “ಕಾರ್ಯಕ್ಷಮತೆ ಅತೃಪ್ತಿಕರವಾಗಿರುವುದರಿಂದ” ಅವರು ಇನ್ನು ಮುಂದೆ ಕೆಲಸ ಮಾಡುವುದನ್ನು ಮುಂದುವರಿಸಬೇಕಾಗಿಲ್ಲ ಎಂದು ಅವರಿಗೆ ತಿಳಿಸಲಾಯಿತು.

ಅಂದರೆ ಇಲ್ಲಿ ಶಾಲೆಯ ಆಡಳಿತ ಮಂಡಳಿ ಇವರ ಬೋಧನಾ ಸಾಮರ್ಥ್ಯಗಳನ್ನು ಉಲ್ಲೇಖಿಸಿಲ್ಲ. ಬದಲಾಗಿ ಶಾಲೆಗೆ ಹೊಸ ದಾಖಲಾತಿ ಮಾಡಿಸುವಲ್ಲಿ ಇವರು ತಮ್ಮ ಟಾರ್ಗೆಟ್‌ ಮುಟ್ಟಿಲ್ಲ ಎಂಬುದು ಆಡಳಿತ ಮಂಡಳಿಯ ಆಕ್ಷೇಪಣೆ. ಲಾಕ್‌ಡೌನ್‌ ಸಮಯದಲ್ಲಿ ನಾವು ಮನೆ ಮನೆಗೆ ಹೋಗಿ ಪೋಷಕರ ಮನವೊಲಿಸಲು ಸಾಧ್ಯವಾಗುತ್ತಿಲ್ಲ, ಹೊಸ ದಾಖಲಾತಿ ಮಾಡಿಸಲು ಹೇಗೆ ಸಾಧ್ಯ, ಹಾಗಾದರೆ ನಾವು ಅಸಮರ್ಥರೆ? ಎಂಬುದು ವೆಂಕಟಸುಬ್ಬಯ್ಯನವರ ಪ್ರಶ್ನೆಯಾಗಿದೆ.

“2007 ರಲ್ಲಿ ನಾನು ಕಲಿಸಿದ್ದ ಹಳೆಯ ವಿದ್ಯಾರ್ಥಿಯ ತಂದೆ ತನ್ನ ಬಾಳೆಹಣ್ಣಗಳನ್ನು ಮಾರಾಟ ಮಾಡಲು ನನಗೆ ಅವಕಾಶ ಮಾಡಿಕೊಡುವ ಮೂಲಕ ನನಗೆ ಸಹಾಯ ಮಾಡಿದರು” ಎಂದು ತೆಲುಗು ಮತ್ತು ಸಾರ್ವಜನಿಕ ಆಡಳಿತದಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ವೆಂಕಟಸುಬ್ಬಯ್ಯ ಹೇಳುತ್ತಾರೆ. ಅವರೊಂದಿಗೆ ಕೆಲಸ ಕಳೆದುಕೊಂಡ ಅವರ ಕೆಲವು ಸಹೋದ್ಯೋಗಿಗಳು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ ಎಂದು ಅವರು ಹೇಳುತ್ತಾರೆ.

ಖಾಸಗಿ ಶಾಲೆಗಳ ಧನದಾಹಿತನ

ಶ್ರೀ ಚೈತನ್ಯ, ನಾರಾಯಣ ಮತ್ತು ಭಾಷ್ಯಾಮ್ ಶಾಲೆಗಳು ಎಂಬ ಹೆಸರಿನ ಕೆಲವೇ ಮಾಲೀಕರು ಸಾವಿರಾರು ಶಾಳೆಗಳು ಆಂಧ್ರ ತೆಲಂಗಾಣದಲ್ಲಿ ತಲೆಎತ್ತಿವೆ. ಹೆಚ್ಚಿನ ಲಾಭ ಮಾಡುವುದೇ ಈ ಶಾಲೆಗಳ ಏಕೈಕ ಗುರಿಯಾಗಿದೆ. ಹಾಗಾಗಿ ಹೆಚ್ಚಿನ ಮಕ್ಕಳ ದಾಖಲಾತಿ ಮಾಡಿಸುವಂತೆ ಶಿಕ್ಷಕರ ಮೇಲೆ ಒತ್ತಡ ಹೇರಲಾಗುತ್ತದೆ. ಟಾರ್ಗೆಟ್‌ ಮುಟ್ಟದ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗುತ್ತದೆ ಎಂದು ಎಂದು ಆಂಧ್ರಪ್ರದೇಶದ ಖಾಸಗಿ ಶಾಲಾ ಶಿಕ್ಷಕರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಂದ ಅತಿ ಹೆಚ್ಚು ಶುಲ್ಕ ವಸೂಲಿ ಮಾಡುವ ಈ ಶಾಲೆಗಳು ಶಿಕ್ಷಕರಿಗೆ ಪೂರ್ಣ ವೇತನ ನೀಡದೇ ಸತಾಯಿಸುತ್ತಿದ್ದಾರೆ. ಶಿಕ್ಷಕ ರು ಶಾಲೆಯಲ್ಲಿ ಪಾಠ ಮಾಡುವುದಲ್ಲದೇ ಮನೆ ಮನೆಗೆ ತೆರಳಿ ದಾಖಲಾತಿ ಮಾಡಿಸುವುದೇ ಪ್ರಧಾನ ಕೆಲಸವಾಗಿದೆ ಎಂಬ ದೊಡ್ಡ ಆರೋಪ ಈ ಶಾಲೆಗಳ ಮೇಲಿದೆ. ಲಾಕ್‌ಡೌನ್‌ನಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಶಾಲೆಗಳು ಧನದಾಹಿತನಕ್ಕೆ ಬಿದ್ದು ಶಿಕ್ಷಕರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿವೆ.

ಇಂತಹ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಕ ಸಂಘಗಳು ರಾಜ್ಯ ಸರ್ಕಾರದ ಸಹಾಯವನ್ನು ಕೋರಿವೆ. ಈ ಸಮಯದಲ್ಲಿ ಹೆಚ್ಚಿನ ಬೋಧನಾ ಉದ್ಯೋಗಗಳು ಲಭ್ಯವಿಲ್ಲದ ಕಾರಣ ಸರ್ಕಾರವು ಕೆಲವು ಜೀವನೋಪಾಯ ಆಯ್ಕೆಗಳನ್ನು ನೀಡುವ ಮೂಲಕ ನಮಗೆ ಬೆಂಬಲ ನೀಡಬೇಕೆಂದು ನಾನು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಒತ್ತಾಯಿಸುತ್ತಾರೆ.


ಮತ್ತಷ್ಟು ಸುದ್ದಿಗಳು

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...