Homeಮುಖಪುಟಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

- Advertisement -
- Advertisement -

ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದು, 38 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ, ಪಾಕಿಸ್ತಾನದ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ನಾಗರಿಕ ಮೇಲೆ ದಾಳಿ ಮಾಡಿವೆ.

ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಹತ್ತು ಜನರು ಗಾಯಗೊಂಡಿದ್ದಾರೆ ಮತ್ತು ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“2025ರ ಮೇ 6-7ರ ರಾತ್ರಿ, ಪಾಕಿಸ್ತಾನ ಸೇನೆಯು ಗಡಿ ನಿಯಂತ್ರಣ ರೇಖೆಯಾದ್ಯಂತ ಮತ್ತು ಜಮ್ಮು ಮತ್ತು ಕಾಶ್ಮೀರದ ಐಬಿ ಪೋಸ್ಟ್‌ಗಳಿಂದ ಫಿರಂಗಿ ಶೆಲ್ ಸೇರಿದಂತೆ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದೆ” ಎಂದು ಭಾರತೀಯ ಸೇನೆ ತಿಳಿಸಿದೆ.

“ಅನಿಯಂತ್ರಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ ಮೂವರು ಅಮಾಯಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಸೇನೆಯ ಅಧಿಕಾರಿಗಳು ಹೇಳಿದ್ದಾರೆ.

ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ವಾಯು ದಾಳಿ ನಡೆಸಿದೆ. ಭಯೋತ್ಪಾದಕ ತಾಣಗಳ ಮೇಲಿನ ಈ ನಿಖರವಾದ ದಾಳಿಗೆ ‘ಕ್ಷಿಪಣಿ’ಗಳನ್ನು ಬಳಸಲಾಗಿದೆ ಎಂದು ಸೇನೆ ಹೇಳಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್ಪುರ, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಕೇಂದ್ರ ಮತ್ತು ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿ ಮುರಿಡ್ಕೆ ಸೇರಿದಂತೆ ಆರು ಸ್ಥಳಗಳನ್ನು ಗುರಿಯಾಗಿರಿಸಿ ಭಾರತ ದಾಳಿ ನಡೆಸಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.

ಭಾರತವು ಪಾಕ್ ಮೇಲೆ ದಾಳಿ ಮಾಡಿದರೆ, ಚೀನಾದೊಂದಿಗೆ ಸೇರಿ ಈಶಾನ್ಯ ರಾಜ್ಯಗಳನ್ನು ಆಕ್ರಮಿಸಿಕೊಳ್ಳುತ್ತೇವೆ: ಬಾಂಗ್ಲಾದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...