Homeಮುಖಪುಟಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ...

ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ.

- Advertisement -
- Advertisement -

ಶಿವಸೇನೆಯ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಒಂಬತ್ತು ದಿನಗಳ ಬಂಡಾಯದ ನಂತರ ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಸಂದೇಶ ರವಾನಿಸಲು ಹೊರಟಿದ್ದಾರೆ.

ಪ್ರಮಾಣವಚನ ಸಮಾರಂಭದ ನಂತರ, ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ. ಹಿಂದುತ್ವ ಮತ್ತು ಮರಾಠಾ ರಾಜಕೀಯ ಸಂಕೇತವಾಗಿ ಬಾಳಾ ಸಾಹೇಬ್‌ ಜೊತೆಗಿನ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಬೆಂಬಲದೊಂದಿಗೆ ಶಿವಸೇನೆ ಬಂಡಾಯಗಾರರು ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈಗ ಪಕ್ಷದ ಮೇಲೆ ಹಿಡಿತ ಸಾಧಿಸುವ ಹೋರಾಟ ನಡೆಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯಗಾರರೇ ನಿಜವಾದ ಶಿವಸೇನಾ ನಾಯಕರು ಎಂದು ಶಿಂಧೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಘೋಷಿಸಿದೆ. ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಜೊತೆ ಒಕ್ಕೂಟವನ್ನು ರಚಿಸುವ ಮೂಲಕ ಉದ್ಧವ್‌ ಠಾಕ್ರೆ ಅವರು ಬಾಳ್ ಠಾಕ್ರೆಯವರ ಹಿಂದುತ್ವ ಸಿದ್ಧಾಂತವನ್ನು ದುರ್ಬಲಗೊಳಿಸಿದ್ದಾರೆ. “ಇದು ಅಸ್ವಾಭಾವಿಕ ಮೈತ್ರಿ” ಎಂಬುದು ಬಂಡಾಯಗಾರರ ವಾದವಾಗಿದೆ.

ದಾಖಲೆ ಪ್ರಕಾರ ಹೇಳುವುದಾದರೆ ಶಿಂಧೆ ಅವರಿಗೆ 39 (55ರಲ್ಲಿ) ಶಿವಸೇನಾ ಶಾಸಕರ ಬೆಂಬಲವಿದೆ. ಉದ್ಧವ್ ಠಾಕ್ರೆ ಅವರ ಜೊತೆ 15 ಮಂದಿ ಶಾಸಕರಿದ್ದಾರೆ.

‘ದ್ರೋಹ ಬಗೆದಿದ್ದಾರೆ’ ಎಂಬ ಬೇಸರದೊಂದಿಗೆ ರಾಜೀನಾಮೆ ನೀಡಿದ ಉದ್ಧವ್‌, ಬಂಡಾಯ ನಾಯಕ ಶಿಂಧೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಶಿವಸೇನೆಯು ಆಟೋ ರಿಕ್ಷಾ ಚಾಲಕರು, ಕೈಗಾಡಿ ಎಳೆಯುವವರನ್ನು ಸಂಸದರು ಮತ್ತು ಶಾಸಕರನ್ನಾಗಿ ಮಾಡಿದೆ” ಎಂದಿದ್ದಾರೆ ಉದ್ಧವ್‌. ಶಿಂಧೆಯವರು ಈ ಹಿಂದೆ ಥಾಣೆಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದದ್ದು ಇಲ್ಲಿ ಗಮನಾರ್ಹ.

ಠಾಕ್ರೆಯವರ ರಾಜೀನಾಮೆಯು ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿತು. ಅನಿರೀಕ್ಷಿತವಾಗಿ ಶಿಂಧೆ ಮುಖ್ಯಮಂತ್ರಿ ಪದವಿಗೇರಿದರು. ಬಿಜೆಪಿ ಆಡಳಿತವಿರುವ ಅಸ್ಸಾಂನ ಹೋಟೆಲ್‌ನಲ್ಲಿ ಬಂಡಾಯ ಶಾಸಕರನ್ನು ನೋಡಿಕೊಂಡ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಫಡ್ನವೀಸ್‌ ಮುಖ್ಯಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ.

ರಿಕ್ಷಾ ಚಾಲಕರಾಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ರಿಕ್ಷಾ ಚಾಲಕರಾಗಿದ್ದ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವವರೆಗೆ ಬೆಳೆದರು. ಕಟ್ಟಾ ಶಿವಸೇನೆಯವರಾಗಿದ್ದ ಏಕನಾಥ್ ಸಂಭಾಜಿ ಶಿಂಧೆ, ರಾಜಕೀಯವಾಗಿ ಪ್ರಭಾವಿಯಾಗಿರುವ ಮರಾಠಾ ಸಮುದಾಯಕ್ಕೆ ಸೇರಿದವರು. ಸತಾರಾ ಜಿಲ್ಲೆಯವರಾದ ವೈ.ಬಿ.ಚವ್ಹಾಣ್, ಬಾಬಾಸಾಹೇಬ್ ಭೋಸಲೆ ಮತ್ತು ಪೃಥ್ವಿರಾಜ್ ಚವಾಣ್ ನಂತರದಲ್ಲಿ ಉನ್ನತ ಹುದ್ದೆಗೇರಿದ ಕೀರ್ತಿಗೆ ಶಿಂಧೆ ಭಾಜನರಾಗಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಸಾಧ್ಯವಾಗದ ಬಿಜೆಪಿ, ಎಂವಿಎ ಸರ್ಕಾರವನ್ನು ಉರುಳಿಸಲು ಶಿಂಧೆ ಅವರನ್ನು ತನ್ನ ಗುರಾಣಿಯಾಗಿ ಬಳಸಿಕೊಂಡಿತು.

2004ರಿಂದ ಥಾಣೆಯ ಕಪ್ರಿ-ಪಚ್ಪಖಾಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಅವಧಿಯ ಶಾಸಕರಾಗಿದ್ದ ಶಿಂಧೆ ಅವರು ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ, ನಂತರ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ಯೋಜನೆಗಳ ಅನುಷ್ಠಾನಕಾರರಾಗಿ ತಮ್ಮ ಛಾಪು ಮೂಡಿಸಿದರು. ಕೋವಿಡ್ ಕಾರಣದಿಂದಾಗಿ ಉದ್ಧವ್‌ ಠಾಕ್ರೆ ಹೆಚ್ಚಾಗಿ ತಮ್ಮ ನಿವಾಸದಿಂದಲೇ ಕಾರ್ಯನಿರ್ವಹಿಸುತ್ತಿದ್ದಾಗ ಶಿಂಧೆ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು. ಸಾಂಕ್ರಾಮಿಕ ಬಿಕ್ಕಟ್ಟು, ನೈಸರ್ಗಿಕ ಅವಘಡ ಮೊದಲಾದ ಸಂದರ್ಭಗಳಲ್ಲಿ ಶಿಂಧೆ ಮುಂದೆ ನುಗ್ಗುತ್ತಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಹಣಕಾಸಿನ ಮುಗ್ಗಟ್ಟು ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಡಬೇಕಾಗಿ ಬಂದ ಶಿಂಧೆ, ಶಿವಸೇನೆಯ ಭದ್ರಕೋಟೆಯಾಗಿದ್ದ ಥಾಣೆಗೆ ತೆರಳಿ ಮೀನು ಮಾರಾಟದಲ್ಲಿ ತೊಡಗಿದ್ದ ಕಂಪನಿಗೆ ಸೇರಿಕೊಂಡರು. ಆದರೆ, ಸಂಬಳ ಸಾಲದೆ ಕೆಲಸ ಬಿಟ್ಟು ರಿಕ್ಷಾ ಚಾಲಕರಾದರು. 1970ರ ದಶಕದಲ್ಲಿ ಶಿಂಧೆ, ಶಿವಸೇನೆಯ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆಯವರ ಮರಾಠಿ ರಾಜಕಾರಣದ ಮನವಿಗೆ ಆಕರ್ಷಿತರಾದರು. ಕೇಸರಿ ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಶಿವಸೇನೆಯ ಫೈರ್‌ಬ್ರಾಂಡ್ ಥಾಣೆ ಜಿಲ್ಲಾ ಮುಖ್ಯಸ್ಥ ಆನಂದ್ ದಿಘೆ ಅವರ ಸಂಪರ್ಕಕ್ಕೆ ಶಿಂಧೆ ಬರುತ್ತಾರೆ. ಶಿವಸೇನೆಯ ಬಲವರ್ಧನೆಗೆ ಕೆಲಸ ಮಾಡಿದ ಶಿಂಧೆ, ದಿಘೆ ಅವರ ಆಪ್ತರಾಗುತ್ತಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಹೋರಾಟ ಸೇರಿದಂತೆ ವಿವಿಧ ಆಂದೋಲನಗಳಲ್ಲಿ ಶಿಂಧೆ ಭಾಗವಹಿಸಿದ್ದರು. ಶಿಂಧೆಯವರ ಉತ್ಸಾಹ, ಪಕ್ಷಕ್ಕಾಗಿ ಸಮರ್ಪಣಾ ಭಾವ, ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವ ಗುಣ ಅನೇಕರನ್ನು ಆಕರ್ಷಿಸಿತು. ಶಿಂಧೆಯವರ ಕೆಲಸದಿಂದ ಪ್ರಭಾವಿತರಾದ ದಿಘೆ, 1997ರಲ್ಲಿ ಪಕ್ಷದ ಟಿಕೆಟ್ ದೊರಕಿಸುವ ಮೂಲಕ ಚುನಾವಣಾ ರಾಜಕಾರಣಕ್ಕೆ ಎಳೆ ತರುತ್ತಾರೆ. ಹೀಗೆ ರಾಜಕೀಯ ಬದುಕು ಆರಂಭಿಸಿದ ಶಿಂಧೆ, ಮಹಾರಾಷ್ಟ್ರದ ಸಿಎಂ ಕುರ್ಚಿ ಹಿಡಿಯುವವರೆಗೆ ಬೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...