Homeಮುಖಪುಟಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ...

ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ.

- Advertisement -
- Advertisement -

ಶಿವಸೇನೆಯ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಒಂಬತ್ತು ದಿನಗಳ ಬಂಡಾಯದ ನಂತರ ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಸಂದೇಶ ರವಾನಿಸಲು ಹೊರಟಿದ್ದಾರೆ.

ಪ್ರಮಾಣವಚನ ಸಮಾರಂಭದ ನಂತರ, ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ. ಹಿಂದುತ್ವ ಮತ್ತು ಮರಾಠಾ ರಾಜಕೀಯ ಸಂಕೇತವಾಗಿ ಬಾಳಾ ಸಾಹೇಬ್‌ ಜೊತೆಗಿನ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಬೆಂಬಲದೊಂದಿಗೆ ಶಿವಸೇನೆ ಬಂಡಾಯಗಾರರು ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈಗ ಪಕ್ಷದ ಮೇಲೆ ಹಿಡಿತ ಸಾಧಿಸುವ ಹೋರಾಟ ನಡೆಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯಗಾರರೇ ನಿಜವಾದ ಶಿವಸೇನಾ ನಾಯಕರು ಎಂದು ಶಿಂಧೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಘೋಷಿಸಿದೆ. ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಜೊತೆ ಒಕ್ಕೂಟವನ್ನು ರಚಿಸುವ ಮೂಲಕ ಉದ್ಧವ್‌ ಠಾಕ್ರೆ ಅವರು ಬಾಳ್ ಠಾಕ್ರೆಯವರ ಹಿಂದುತ್ವ ಸಿದ್ಧಾಂತವನ್ನು ದುರ್ಬಲಗೊಳಿಸಿದ್ದಾರೆ. “ಇದು ಅಸ್ವಾಭಾವಿಕ ಮೈತ್ರಿ” ಎಂಬುದು ಬಂಡಾಯಗಾರರ ವಾದವಾಗಿದೆ.

ದಾಖಲೆ ಪ್ರಕಾರ ಹೇಳುವುದಾದರೆ ಶಿಂಧೆ ಅವರಿಗೆ 39 (55ರಲ್ಲಿ) ಶಿವಸೇನಾ ಶಾಸಕರ ಬೆಂಬಲವಿದೆ. ಉದ್ಧವ್ ಠಾಕ್ರೆ ಅವರ ಜೊತೆ 15 ಮಂದಿ ಶಾಸಕರಿದ್ದಾರೆ.

‘ದ್ರೋಹ ಬಗೆದಿದ್ದಾರೆ’ ಎಂಬ ಬೇಸರದೊಂದಿಗೆ ರಾಜೀನಾಮೆ ನೀಡಿದ ಉದ್ಧವ್‌, ಬಂಡಾಯ ನಾಯಕ ಶಿಂಧೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಶಿವಸೇನೆಯು ಆಟೋ ರಿಕ್ಷಾ ಚಾಲಕರು, ಕೈಗಾಡಿ ಎಳೆಯುವವರನ್ನು ಸಂಸದರು ಮತ್ತು ಶಾಸಕರನ್ನಾಗಿ ಮಾಡಿದೆ” ಎಂದಿದ್ದಾರೆ ಉದ್ಧವ್‌. ಶಿಂಧೆಯವರು ಈ ಹಿಂದೆ ಥಾಣೆಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದದ್ದು ಇಲ್ಲಿ ಗಮನಾರ್ಹ.

ಠಾಕ್ರೆಯವರ ರಾಜೀನಾಮೆಯು ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿತು. ಅನಿರೀಕ್ಷಿತವಾಗಿ ಶಿಂಧೆ ಮುಖ್ಯಮಂತ್ರಿ ಪದವಿಗೇರಿದರು. ಬಿಜೆಪಿ ಆಡಳಿತವಿರುವ ಅಸ್ಸಾಂನ ಹೋಟೆಲ್‌ನಲ್ಲಿ ಬಂಡಾಯ ಶಾಸಕರನ್ನು ನೋಡಿಕೊಂಡ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಫಡ್ನವೀಸ್‌ ಮುಖ್ಯಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ.

ರಿಕ್ಷಾ ಚಾಲಕರಾಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ರಿಕ್ಷಾ ಚಾಲಕರಾಗಿದ್ದ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವವರೆಗೆ ಬೆಳೆದರು. ಕಟ್ಟಾ ಶಿವಸೇನೆಯವರಾಗಿದ್ದ ಏಕನಾಥ್ ಸಂಭಾಜಿ ಶಿಂಧೆ, ರಾಜಕೀಯವಾಗಿ ಪ್ರಭಾವಿಯಾಗಿರುವ ಮರಾಠಾ ಸಮುದಾಯಕ್ಕೆ ಸೇರಿದವರು. ಸತಾರಾ ಜಿಲ್ಲೆಯವರಾದ ವೈ.ಬಿ.ಚವ್ಹಾಣ್, ಬಾಬಾಸಾಹೇಬ್ ಭೋಸಲೆ ಮತ್ತು ಪೃಥ್ವಿರಾಜ್ ಚವಾಣ್ ನಂತರದಲ್ಲಿ ಉನ್ನತ ಹುದ್ದೆಗೇರಿದ ಕೀರ್ತಿಗೆ ಶಿಂಧೆ ಭಾಜನರಾಗಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಸಾಧ್ಯವಾಗದ ಬಿಜೆಪಿ, ಎಂವಿಎ ಸರ್ಕಾರವನ್ನು ಉರುಳಿಸಲು ಶಿಂಧೆ ಅವರನ್ನು ತನ್ನ ಗುರಾಣಿಯಾಗಿ ಬಳಸಿಕೊಂಡಿತು.

2004ರಿಂದ ಥಾಣೆಯ ಕಪ್ರಿ-ಪಚ್ಪಖಾಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಅವಧಿಯ ಶಾಸಕರಾಗಿದ್ದ ಶಿಂಧೆ ಅವರು ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ, ನಂತರ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ಯೋಜನೆಗಳ ಅನುಷ್ಠಾನಕಾರರಾಗಿ ತಮ್ಮ ಛಾಪು ಮೂಡಿಸಿದರು. ಕೋವಿಡ್ ಕಾರಣದಿಂದಾಗಿ ಉದ್ಧವ್‌ ಠಾಕ್ರೆ ಹೆಚ್ಚಾಗಿ ತಮ್ಮ ನಿವಾಸದಿಂದಲೇ ಕಾರ್ಯನಿರ್ವಹಿಸುತ್ತಿದ್ದಾಗ ಶಿಂಧೆ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು. ಸಾಂಕ್ರಾಮಿಕ ಬಿಕ್ಕಟ್ಟು, ನೈಸರ್ಗಿಕ ಅವಘಡ ಮೊದಲಾದ ಸಂದರ್ಭಗಳಲ್ಲಿ ಶಿಂಧೆ ಮುಂದೆ ನುಗ್ಗುತ್ತಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಹಣಕಾಸಿನ ಮುಗ್ಗಟ್ಟು ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಡಬೇಕಾಗಿ ಬಂದ ಶಿಂಧೆ, ಶಿವಸೇನೆಯ ಭದ್ರಕೋಟೆಯಾಗಿದ್ದ ಥಾಣೆಗೆ ತೆರಳಿ ಮೀನು ಮಾರಾಟದಲ್ಲಿ ತೊಡಗಿದ್ದ ಕಂಪನಿಗೆ ಸೇರಿಕೊಂಡರು. ಆದರೆ, ಸಂಬಳ ಸಾಲದೆ ಕೆಲಸ ಬಿಟ್ಟು ರಿಕ್ಷಾ ಚಾಲಕರಾದರು. 1970ರ ದಶಕದಲ್ಲಿ ಶಿಂಧೆ, ಶಿವಸೇನೆಯ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆಯವರ ಮರಾಠಿ ರಾಜಕಾರಣದ ಮನವಿಗೆ ಆಕರ್ಷಿತರಾದರು. ಕೇಸರಿ ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಶಿವಸೇನೆಯ ಫೈರ್‌ಬ್ರಾಂಡ್ ಥಾಣೆ ಜಿಲ್ಲಾ ಮುಖ್ಯಸ್ಥ ಆನಂದ್ ದಿಘೆ ಅವರ ಸಂಪರ್ಕಕ್ಕೆ ಶಿಂಧೆ ಬರುತ್ತಾರೆ. ಶಿವಸೇನೆಯ ಬಲವರ್ಧನೆಗೆ ಕೆಲಸ ಮಾಡಿದ ಶಿಂಧೆ, ದಿಘೆ ಅವರ ಆಪ್ತರಾಗುತ್ತಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಹೋರಾಟ ಸೇರಿದಂತೆ ವಿವಿಧ ಆಂದೋಲನಗಳಲ್ಲಿ ಶಿಂಧೆ ಭಾಗವಹಿಸಿದ್ದರು. ಶಿಂಧೆಯವರ ಉತ್ಸಾಹ, ಪಕ್ಷಕ್ಕಾಗಿ ಸಮರ್ಪಣಾ ಭಾವ, ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವ ಗುಣ ಅನೇಕರನ್ನು ಆಕರ್ಷಿಸಿತು. ಶಿಂಧೆಯವರ ಕೆಲಸದಿಂದ ಪ್ರಭಾವಿತರಾದ ದಿಘೆ, 1997ರಲ್ಲಿ ಪಕ್ಷದ ಟಿಕೆಟ್ ದೊರಕಿಸುವ ಮೂಲಕ ಚುನಾವಣಾ ರಾಜಕಾರಣಕ್ಕೆ ಎಳೆ ತರುತ್ತಾರೆ. ಹೀಗೆ ರಾಜಕೀಯ ಬದುಕು ಆರಂಭಿಸಿದ ಶಿಂಧೆ, ಮಹಾರಾಷ್ಟ್ರದ ಸಿಎಂ ಕುರ್ಚಿ ಹಿಡಿಯುವವರೆಗೆ ಬೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...