Homeಮುಖಪುಟಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ...

ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ.

- Advertisement -
- Advertisement -

ಶಿವಸೇನೆಯ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಒಂಬತ್ತು ದಿನಗಳ ಬಂಡಾಯದ ನಂತರ ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಸಂದೇಶ ರವಾನಿಸಲು ಹೊರಟಿದ್ದಾರೆ.

ಪ್ರಮಾಣವಚನ ಸಮಾರಂಭದ ನಂತರ, ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ. ಹಿಂದುತ್ವ ಮತ್ತು ಮರಾಠಾ ರಾಜಕೀಯ ಸಂಕೇತವಾಗಿ ಬಾಳಾ ಸಾಹೇಬ್‌ ಜೊತೆಗಿನ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಬೆಂಬಲದೊಂದಿಗೆ ಶಿವಸೇನೆ ಬಂಡಾಯಗಾರರು ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈಗ ಪಕ್ಷದ ಮೇಲೆ ಹಿಡಿತ ಸಾಧಿಸುವ ಹೋರಾಟ ನಡೆಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯಗಾರರೇ ನಿಜವಾದ ಶಿವಸೇನಾ ನಾಯಕರು ಎಂದು ಶಿಂಧೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಘೋಷಿಸಿದೆ. ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಜೊತೆ ಒಕ್ಕೂಟವನ್ನು ರಚಿಸುವ ಮೂಲಕ ಉದ್ಧವ್‌ ಠಾಕ್ರೆ ಅವರು ಬಾಳ್ ಠಾಕ್ರೆಯವರ ಹಿಂದುತ್ವ ಸಿದ್ಧಾಂತವನ್ನು ದುರ್ಬಲಗೊಳಿಸಿದ್ದಾರೆ. “ಇದು ಅಸ್ವಾಭಾವಿಕ ಮೈತ್ರಿ” ಎಂಬುದು ಬಂಡಾಯಗಾರರ ವಾದವಾಗಿದೆ.

ದಾಖಲೆ ಪ್ರಕಾರ ಹೇಳುವುದಾದರೆ ಶಿಂಧೆ ಅವರಿಗೆ 39 (55ರಲ್ಲಿ) ಶಿವಸೇನಾ ಶಾಸಕರ ಬೆಂಬಲವಿದೆ. ಉದ್ಧವ್ ಠಾಕ್ರೆ ಅವರ ಜೊತೆ 15 ಮಂದಿ ಶಾಸಕರಿದ್ದಾರೆ.

‘ದ್ರೋಹ ಬಗೆದಿದ್ದಾರೆ’ ಎಂಬ ಬೇಸರದೊಂದಿಗೆ ರಾಜೀನಾಮೆ ನೀಡಿದ ಉದ್ಧವ್‌, ಬಂಡಾಯ ನಾಯಕ ಶಿಂಧೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಶಿವಸೇನೆಯು ಆಟೋ ರಿಕ್ಷಾ ಚಾಲಕರು, ಕೈಗಾಡಿ ಎಳೆಯುವವರನ್ನು ಸಂಸದರು ಮತ್ತು ಶಾಸಕರನ್ನಾಗಿ ಮಾಡಿದೆ” ಎಂದಿದ್ದಾರೆ ಉದ್ಧವ್‌. ಶಿಂಧೆಯವರು ಈ ಹಿಂದೆ ಥಾಣೆಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದದ್ದು ಇಲ್ಲಿ ಗಮನಾರ್ಹ.

ಠಾಕ್ರೆಯವರ ರಾಜೀನಾಮೆಯು ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿತು. ಅನಿರೀಕ್ಷಿತವಾಗಿ ಶಿಂಧೆ ಮುಖ್ಯಮಂತ್ರಿ ಪದವಿಗೇರಿದರು. ಬಿಜೆಪಿ ಆಡಳಿತವಿರುವ ಅಸ್ಸಾಂನ ಹೋಟೆಲ್‌ನಲ್ಲಿ ಬಂಡಾಯ ಶಾಸಕರನ್ನು ನೋಡಿಕೊಂಡ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಫಡ್ನವೀಸ್‌ ಮುಖ್ಯಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ.

ರಿಕ್ಷಾ ಚಾಲಕರಾಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ರಿಕ್ಷಾ ಚಾಲಕರಾಗಿದ್ದ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವವರೆಗೆ ಬೆಳೆದರು. ಕಟ್ಟಾ ಶಿವಸೇನೆಯವರಾಗಿದ್ದ ಏಕನಾಥ್ ಸಂಭಾಜಿ ಶಿಂಧೆ, ರಾಜಕೀಯವಾಗಿ ಪ್ರಭಾವಿಯಾಗಿರುವ ಮರಾಠಾ ಸಮುದಾಯಕ್ಕೆ ಸೇರಿದವರು. ಸತಾರಾ ಜಿಲ್ಲೆಯವರಾದ ವೈ.ಬಿ.ಚವ್ಹಾಣ್, ಬಾಬಾಸಾಹೇಬ್ ಭೋಸಲೆ ಮತ್ತು ಪೃಥ್ವಿರಾಜ್ ಚವಾಣ್ ನಂತರದಲ್ಲಿ ಉನ್ನತ ಹುದ್ದೆಗೇರಿದ ಕೀರ್ತಿಗೆ ಶಿಂಧೆ ಭಾಜನರಾಗಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಸಾಧ್ಯವಾಗದ ಬಿಜೆಪಿ, ಎಂವಿಎ ಸರ್ಕಾರವನ್ನು ಉರುಳಿಸಲು ಶಿಂಧೆ ಅವರನ್ನು ತನ್ನ ಗುರಾಣಿಯಾಗಿ ಬಳಸಿಕೊಂಡಿತು.

2004ರಿಂದ ಥಾಣೆಯ ಕಪ್ರಿ-ಪಚ್ಪಖಾಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಅವಧಿಯ ಶಾಸಕರಾಗಿದ್ದ ಶಿಂಧೆ ಅವರು ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ, ನಂತರ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ಯೋಜನೆಗಳ ಅನುಷ್ಠಾನಕಾರರಾಗಿ ತಮ್ಮ ಛಾಪು ಮೂಡಿಸಿದರು. ಕೋವಿಡ್ ಕಾರಣದಿಂದಾಗಿ ಉದ್ಧವ್‌ ಠಾಕ್ರೆ ಹೆಚ್ಚಾಗಿ ತಮ್ಮ ನಿವಾಸದಿಂದಲೇ ಕಾರ್ಯನಿರ್ವಹಿಸುತ್ತಿದ್ದಾಗ ಶಿಂಧೆ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು. ಸಾಂಕ್ರಾಮಿಕ ಬಿಕ್ಕಟ್ಟು, ನೈಸರ್ಗಿಕ ಅವಘಡ ಮೊದಲಾದ ಸಂದರ್ಭಗಳಲ್ಲಿ ಶಿಂಧೆ ಮುಂದೆ ನುಗ್ಗುತ್ತಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಹಣಕಾಸಿನ ಮುಗ್ಗಟ್ಟು ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಡಬೇಕಾಗಿ ಬಂದ ಶಿಂಧೆ, ಶಿವಸೇನೆಯ ಭದ್ರಕೋಟೆಯಾಗಿದ್ದ ಥಾಣೆಗೆ ತೆರಳಿ ಮೀನು ಮಾರಾಟದಲ್ಲಿ ತೊಡಗಿದ್ದ ಕಂಪನಿಗೆ ಸೇರಿಕೊಂಡರು. ಆದರೆ, ಸಂಬಳ ಸಾಲದೆ ಕೆಲಸ ಬಿಟ್ಟು ರಿಕ್ಷಾ ಚಾಲಕರಾದರು. 1970ರ ದಶಕದಲ್ಲಿ ಶಿಂಧೆ, ಶಿವಸೇನೆಯ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆಯವರ ಮರಾಠಿ ರಾಜಕಾರಣದ ಮನವಿಗೆ ಆಕರ್ಷಿತರಾದರು. ಕೇಸರಿ ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಶಿವಸೇನೆಯ ಫೈರ್‌ಬ್ರಾಂಡ್ ಥಾಣೆ ಜಿಲ್ಲಾ ಮುಖ್ಯಸ್ಥ ಆನಂದ್ ದಿಘೆ ಅವರ ಸಂಪರ್ಕಕ್ಕೆ ಶಿಂಧೆ ಬರುತ್ತಾರೆ. ಶಿವಸೇನೆಯ ಬಲವರ್ಧನೆಗೆ ಕೆಲಸ ಮಾಡಿದ ಶಿಂಧೆ, ದಿಘೆ ಅವರ ಆಪ್ತರಾಗುತ್ತಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಹೋರಾಟ ಸೇರಿದಂತೆ ವಿವಿಧ ಆಂದೋಲನಗಳಲ್ಲಿ ಶಿಂಧೆ ಭಾಗವಹಿಸಿದ್ದರು. ಶಿಂಧೆಯವರ ಉತ್ಸಾಹ, ಪಕ್ಷಕ್ಕಾಗಿ ಸಮರ್ಪಣಾ ಭಾವ, ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವ ಗುಣ ಅನೇಕರನ್ನು ಆಕರ್ಷಿಸಿತು. ಶಿಂಧೆಯವರ ಕೆಲಸದಿಂದ ಪ್ರಭಾವಿತರಾದ ದಿಘೆ, 1997ರಲ್ಲಿ ಪಕ್ಷದ ಟಿಕೆಟ್ ದೊರಕಿಸುವ ಮೂಲಕ ಚುನಾವಣಾ ರಾಜಕಾರಣಕ್ಕೆ ಎಳೆ ತರುತ್ತಾರೆ. ಹೀಗೆ ರಾಜಕೀಯ ಬದುಕು ಆರಂಭಿಸಿದ ಶಿಂಧೆ, ಮಹಾರಾಷ್ಟ್ರದ ಸಿಎಂ ಕುರ್ಚಿ ಹಿಡಿಯುವವರೆಗೆ ಬೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...