Homeಮುಖಪುಟಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ...

ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ.

- Advertisement -
- Advertisement -

ಶಿವಸೇನೆಯ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಒಂಬತ್ತು ದಿನಗಳ ಬಂಡಾಯದ ನಂತರ ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಸಂದೇಶ ರವಾನಿಸಲು ಹೊರಟಿದ್ದಾರೆ.

ಪ್ರಮಾಣವಚನ ಸಮಾರಂಭದ ನಂತರ, ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ. ಹಿಂದುತ್ವ ಮತ್ತು ಮರಾಠಾ ರಾಜಕೀಯ ಸಂಕೇತವಾಗಿ ಬಾಳಾ ಸಾಹೇಬ್‌ ಜೊತೆಗಿನ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಬೆಂಬಲದೊಂದಿಗೆ ಶಿವಸೇನೆ ಬಂಡಾಯಗಾರರು ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈಗ ಪಕ್ಷದ ಮೇಲೆ ಹಿಡಿತ ಸಾಧಿಸುವ ಹೋರಾಟ ನಡೆಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯಗಾರರೇ ನಿಜವಾದ ಶಿವಸೇನಾ ನಾಯಕರು ಎಂದು ಶಿಂಧೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಘೋಷಿಸಿದೆ. ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಜೊತೆ ಒಕ್ಕೂಟವನ್ನು ರಚಿಸುವ ಮೂಲಕ ಉದ್ಧವ್‌ ಠಾಕ್ರೆ ಅವರು ಬಾಳ್ ಠಾಕ್ರೆಯವರ ಹಿಂದುತ್ವ ಸಿದ್ಧಾಂತವನ್ನು ದುರ್ಬಲಗೊಳಿಸಿದ್ದಾರೆ. “ಇದು ಅಸ್ವಾಭಾವಿಕ ಮೈತ್ರಿ” ಎಂಬುದು ಬಂಡಾಯಗಾರರ ವಾದವಾಗಿದೆ.

ದಾಖಲೆ ಪ್ರಕಾರ ಹೇಳುವುದಾದರೆ ಶಿಂಧೆ ಅವರಿಗೆ 39 (55ರಲ್ಲಿ) ಶಿವಸೇನಾ ಶಾಸಕರ ಬೆಂಬಲವಿದೆ. ಉದ್ಧವ್ ಠಾಕ್ರೆ ಅವರ ಜೊತೆ 15 ಮಂದಿ ಶಾಸಕರಿದ್ದಾರೆ.

‘ದ್ರೋಹ ಬಗೆದಿದ್ದಾರೆ’ ಎಂಬ ಬೇಸರದೊಂದಿಗೆ ರಾಜೀನಾಮೆ ನೀಡಿದ ಉದ್ಧವ್‌, ಬಂಡಾಯ ನಾಯಕ ಶಿಂಧೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಶಿವಸೇನೆಯು ಆಟೋ ರಿಕ್ಷಾ ಚಾಲಕರು, ಕೈಗಾಡಿ ಎಳೆಯುವವರನ್ನು ಸಂಸದರು ಮತ್ತು ಶಾಸಕರನ್ನಾಗಿ ಮಾಡಿದೆ” ಎಂದಿದ್ದಾರೆ ಉದ್ಧವ್‌. ಶಿಂಧೆಯವರು ಈ ಹಿಂದೆ ಥಾಣೆಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದದ್ದು ಇಲ್ಲಿ ಗಮನಾರ್ಹ.

ಠಾಕ್ರೆಯವರ ರಾಜೀನಾಮೆಯು ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿತು. ಅನಿರೀಕ್ಷಿತವಾಗಿ ಶಿಂಧೆ ಮುಖ್ಯಮಂತ್ರಿ ಪದವಿಗೇರಿದರು. ಬಿಜೆಪಿ ಆಡಳಿತವಿರುವ ಅಸ್ಸಾಂನ ಹೋಟೆಲ್‌ನಲ್ಲಿ ಬಂಡಾಯ ಶಾಸಕರನ್ನು ನೋಡಿಕೊಂಡ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಫಡ್ನವೀಸ್‌ ಮುಖ್ಯಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ.

ರಿಕ್ಷಾ ಚಾಲಕರಾಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ರಿಕ್ಷಾ ಚಾಲಕರಾಗಿದ್ದ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವವರೆಗೆ ಬೆಳೆದರು. ಕಟ್ಟಾ ಶಿವಸೇನೆಯವರಾಗಿದ್ದ ಏಕನಾಥ್ ಸಂಭಾಜಿ ಶಿಂಧೆ, ರಾಜಕೀಯವಾಗಿ ಪ್ರಭಾವಿಯಾಗಿರುವ ಮರಾಠಾ ಸಮುದಾಯಕ್ಕೆ ಸೇರಿದವರು. ಸತಾರಾ ಜಿಲ್ಲೆಯವರಾದ ವೈ.ಬಿ.ಚವ್ಹಾಣ್, ಬಾಬಾಸಾಹೇಬ್ ಭೋಸಲೆ ಮತ್ತು ಪೃಥ್ವಿರಾಜ್ ಚವಾಣ್ ನಂತರದಲ್ಲಿ ಉನ್ನತ ಹುದ್ದೆಗೇರಿದ ಕೀರ್ತಿಗೆ ಶಿಂಧೆ ಭಾಜನರಾಗಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಸಾಧ್ಯವಾಗದ ಬಿಜೆಪಿ, ಎಂವಿಎ ಸರ್ಕಾರವನ್ನು ಉರುಳಿಸಲು ಶಿಂಧೆ ಅವರನ್ನು ತನ್ನ ಗುರಾಣಿಯಾಗಿ ಬಳಸಿಕೊಂಡಿತು.

2004ರಿಂದ ಥಾಣೆಯ ಕಪ್ರಿ-ಪಚ್ಪಖಾಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಅವಧಿಯ ಶಾಸಕರಾಗಿದ್ದ ಶಿಂಧೆ ಅವರು ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ, ನಂತರ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ಯೋಜನೆಗಳ ಅನುಷ್ಠಾನಕಾರರಾಗಿ ತಮ್ಮ ಛಾಪು ಮೂಡಿಸಿದರು. ಕೋವಿಡ್ ಕಾರಣದಿಂದಾಗಿ ಉದ್ಧವ್‌ ಠಾಕ್ರೆ ಹೆಚ್ಚಾಗಿ ತಮ್ಮ ನಿವಾಸದಿಂದಲೇ ಕಾರ್ಯನಿರ್ವಹಿಸುತ್ತಿದ್ದಾಗ ಶಿಂಧೆ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು. ಸಾಂಕ್ರಾಮಿಕ ಬಿಕ್ಕಟ್ಟು, ನೈಸರ್ಗಿಕ ಅವಘಡ ಮೊದಲಾದ ಸಂದರ್ಭಗಳಲ್ಲಿ ಶಿಂಧೆ ಮುಂದೆ ನುಗ್ಗುತ್ತಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಹಣಕಾಸಿನ ಮುಗ್ಗಟ್ಟು ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಡಬೇಕಾಗಿ ಬಂದ ಶಿಂಧೆ, ಶಿವಸೇನೆಯ ಭದ್ರಕೋಟೆಯಾಗಿದ್ದ ಥಾಣೆಗೆ ತೆರಳಿ ಮೀನು ಮಾರಾಟದಲ್ಲಿ ತೊಡಗಿದ್ದ ಕಂಪನಿಗೆ ಸೇರಿಕೊಂಡರು. ಆದರೆ, ಸಂಬಳ ಸಾಲದೆ ಕೆಲಸ ಬಿಟ್ಟು ರಿಕ್ಷಾ ಚಾಲಕರಾದರು. 1970ರ ದಶಕದಲ್ಲಿ ಶಿಂಧೆ, ಶಿವಸೇನೆಯ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆಯವರ ಮರಾಠಿ ರಾಜಕಾರಣದ ಮನವಿಗೆ ಆಕರ್ಷಿತರಾದರು. ಕೇಸರಿ ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಶಿವಸೇನೆಯ ಫೈರ್‌ಬ್ರಾಂಡ್ ಥಾಣೆ ಜಿಲ್ಲಾ ಮುಖ್ಯಸ್ಥ ಆನಂದ್ ದಿಘೆ ಅವರ ಸಂಪರ್ಕಕ್ಕೆ ಶಿಂಧೆ ಬರುತ್ತಾರೆ. ಶಿವಸೇನೆಯ ಬಲವರ್ಧನೆಗೆ ಕೆಲಸ ಮಾಡಿದ ಶಿಂಧೆ, ದಿಘೆ ಅವರ ಆಪ್ತರಾಗುತ್ತಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಹೋರಾಟ ಸೇರಿದಂತೆ ವಿವಿಧ ಆಂದೋಲನಗಳಲ್ಲಿ ಶಿಂಧೆ ಭಾಗವಹಿಸಿದ್ದರು. ಶಿಂಧೆಯವರ ಉತ್ಸಾಹ, ಪಕ್ಷಕ್ಕಾಗಿ ಸಮರ್ಪಣಾ ಭಾವ, ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವ ಗುಣ ಅನೇಕರನ್ನು ಆಕರ್ಷಿಸಿತು. ಶಿಂಧೆಯವರ ಕೆಲಸದಿಂದ ಪ್ರಭಾವಿತರಾದ ದಿಘೆ, 1997ರಲ್ಲಿ ಪಕ್ಷದ ಟಿಕೆಟ್ ದೊರಕಿಸುವ ಮೂಲಕ ಚುನಾವಣಾ ರಾಜಕಾರಣಕ್ಕೆ ಎಳೆ ತರುತ್ತಾರೆ. ಹೀಗೆ ರಾಜಕೀಯ ಬದುಕು ಆರಂಭಿಸಿದ ಶಿಂಧೆ, ಮಹಾರಾಷ್ಟ್ರದ ಸಿಎಂ ಕುರ್ಚಿ ಹಿಡಿಯುವವರೆಗೆ ಬೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...