Homeಮುಖಪುಟಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ...

ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ.

- Advertisement -
- Advertisement -

ಶಿವಸೇನೆಯ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಒಂಬತ್ತು ದಿನಗಳ ಬಂಡಾಯದ ನಂತರ ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಸಂದೇಶ ರವಾನಿಸಲು ಹೊರಟಿದ್ದಾರೆ.

ಪ್ರಮಾಣವಚನ ಸಮಾರಂಭದ ನಂತರ, ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ. ಹಿಂದುತ್ವ ಮತ್ತು ಮರಾಠಾ ರಾಜಕೀಯ ಸಂಕೇತವಾಗಿ ಬಾಳಾ ಸಾಹೇಬ್‌ ಜೊತೆಗಿನ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಬೆಂಬಲದೊಂದಿಗೆ ಶಿವಸೇನೆ ಬಂಡಾಯಗಾರರು ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈಗ ಪಕ್ಷದ ಮೇಲೆ ಹಿಡಿತ ಸಾಧಿಸುವ ಹೋರಾಟ ನಡೆಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯಗಾರರೇ ನಿಜವಾದ ಶಿವಸೇನಾ ನಾಯಕರು ಎಂದು ಶಿಂಧೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಘೋಷಿಸಿದೆ. ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಜೊತೆ ಒಕ್ಕೂಟವನ್ನು ರಚಿಸುವ ಮೂಲಕ ಉದ್ಧವ್‌ ಠಾಕ್ರೆ ಅವರು ಬಾಳ್ ಠಾಕ್ರೆಯವರ ಹಿಂದುತ್ವ ಸಿದ್ಧಾಂತವನ್ನು ದುರ್ಬಲಗೊಳಿಸಿದ್ದಾರೆ. “ಇದು ಅಸ್ವಾಭಾವಿಕ ಮೈತ್ರಿ” ಎಂಬುದು ಬಂಡಾಯಗಾರರ ವಾದವಾಗಿದೆ.

ದಾಖಲೆ ಪ್ರಕಾರ ಹೇಳುವುದಾದರೆ ಶಿಂಧೆ ಅವರಿಗೆ 39 (55ರಲ್ಲಿ) ಶಿವಸೇನಾ ಶಾಸಕರ ಬೆಂಬಲವಿದೆ. ಉದ್ಧವ್ ಠಾಕ್ರೆ ಅವರ ಜೊತೆ 15 ಮಂದಿ ಶಾಸಕರಿದ್ದಾರೆ.

‘ದ್ರೋಹ ಬಗೆದಿದ್ದಾರೆ’ ಎಂಬ ಬೇಸರದೊಂದಿಗೆ ರಾಜೀನಾಮೆ ನೀಡಿದ ಉದ್ಧವ್‌, ಬಂಡಾಯ ನಾಯಕ ಶಿಂಧೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಶಿವಸೇನೆಯು ಆಟೋ ರಿಕ್ಷಾ ಚಾಲಕರು, ಕೈಗಾಡಿ ಎಳೆಯುವವರನ್ನು ಸಂಸದರು ಮತ್ತು ಶಾಸಕರನ್ನಾಗಿ ಮಾಡಿದೆ” ಎಂದಿದ್ದಾರೆ ಉದ್ಧವ್‌. ಶಿಂಧೆಯವರು ಈ ಹಿಂದೆ ಥಾಣೆಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದದ್ದು ಇಲ್ಲಿ ಗಮನಾರ್ಹ.

ಠಾಕ್ರೆಯವರ ರಾಜೀನಾಮೆಯು ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿತು. ಅನಿರೀಕ್ಷಿತವಾಗಿ ಶಿಂಧೆ ಮುಖ್ಯಮಂತ್ರಿ ಪದವಿಗೇರಿದರು. ಬಿಜೆಪಿ ಆಡಳಿತವಿರುವ ಅಸ್ಸಾಂನ ಹೋಟೆಲ್‌ನಲ್ಲಿ ಬಂಡಾಯ ಶಾಸಕರನ್ನು ನೋಡಿಕೊಂಡ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಫಡ್ನವೀಸ್‌ ಮುಖ್ಯಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ.

ರಿಕ್ಷಾ ಚಾಲಕರಾಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ರಿಕ್ಷಾ ಚಾಲಕರಾಗಿದ್ದ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವವರೆಗೆ ಬೆಳೆದರು. ಕಟ್ಟಾ ಶಿವಸೇನೆಯವರಾಗಿದ್ದ ಏಕನಾಥ್ ಸಂಭಾಜಿ ಶಿಂಧೆ, ರಾಜಕೀಯವಾಗಿ ಪ್ರಭಾವಿಯಾಗಿರುವ ಮರಾಠಾ ಸಮುದಾಯಕ್ಕೆ ಸೇರಿದವರು. ಸತಾರಾ ಜಿಲ್ಲೆಯವರಾದ ವೈ.ಬಿ.ಚವ್ಹಾಣ್, ಬಾಬಾಸಾಹೇಬ್ ಭೋಸಲೆ ಮತ್ತು ಪೃಥ್ವಿರಾಜ್ ಚವಾಣ್ ನಂತರದಲ್ಲಿ ಉನ್ನತ ಹುದ್ದೆಗೇರಿದ ಕೀರ್ತಿಗೆ ಶಿಂಧೆ ಭಾಜನರಾಗಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಸಾಧ್ಯವಾಗದ ಬಿಜೆಪಿ, ಎಂವಿಎ ಸರ್ಕಾರವನ್ನು ಉರುಳಿಸಲು ಶಿಂಧೆ ಅವರನ್ನು ತನ್ನ ಗುರಾಣಿಯಾಗಿ ಬಳಸಿಕೊಂಡಿತು.

2004ರಿಂದ ಥಾಣೆಯ ಕಪ್ರಿ-ಪಚ್ಪಖಾಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಅವಧಿಯ ಶಾಸಕರಾಗಿದ್ದ ಶಿಂಧೆ ಅವರು ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ, ನಂತರ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ಯೋಜನೆಗಳ ಅನುಷ್ಠಾನಕಾರರಾಗಿ ತಮ್ಮ ಛಾಪು ಮೂಡಿಸಿದರು. ಕೋವಿಡ್ ಕಾರಣದಿಂದಾಗಿ ಉದ್ಧವ್‌ ಠಾಕ್ರೆ ಹೆಚ್ಚಾಗಿ ತಮ್ಮ ನಿವಾಸದಿಂದಲೇ ಕಾರ್ಯನಿರ್ವಹಿಸುತ್ತಿದ್ದಾಗ ಶಿಂಧೆ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು. ಸಾಂಕ್ರಾಮಿಕ ಬಿಕ್ಕಟ್ಟು, ನೈಸರ್ಗಿಕ ಅವಘಡ ಮೊದಲಾದ ಸಂದರ್ಭಗಳಲ್ಲಿ ಶಿಂಧೆ ಮುಂದೆ ನುಗ್ಗುತ್ತಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಹಣಕಾಸಿನ ಮುಗ್ಗಟ್ಟು ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಡಬೇಕಾಗಿ ಬಂದ ಶಿಂಧೆ, ಶಿವಸೇನೆಯ ಭದ್ರಕೋಟೆಯಾಗಿದ್ದ ಥಾಣೆಗೆ ತೆರಳಿ ಮೀನು ಮಾರಾಟದಲ್ಲಿ ತೊಡಗಿದ್ದ ಕಂಪನಿಗೆ ಸೇರಿಕೊಂಡರು. ಆದರೆ, ಸಂಬಳ ಸಾಲದೆ ಕೆಲಸ ಬಿಟ್ಟು ರಿಕ್ಷಾ ಚಾಲಕರಾದರು. 1970ರ ದಶಕದಲ್ಲಿ ಶಿಂಧೆ, ಶಿವಸೇನೆಯ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆಯವರ ಮರಾಠಿ ರಾಜಕಾರಣದ ಮನವಿಗೆ ಆಕರ್ಷಿತರಾದರು. ಕೇಸರಿ ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಶಿವಸೇನೆಯ ಫೈರ್‌ಬ್ರಾಂಡ್ ಥಾಣೆ ಜಿಲ್ಲಾ ಮುಖ್ಯಸ್ಥ ಆನಂದ್ ದಿಘೆ ಅವರ ಸಂಪರ್ಕಕ್ಕೆ ಶಿಂಧೆ ಬರುತ್ತಾರೆ. ಶಿವಸೇನೆಯ ಬಲವರ್ಧನೆಗೆ ಕೆಲಸ ಮಾಡಿದ ಶಿಂಧೆ, ದಿಘೆ ಅವರ ಆಪ್ತರಾಗುತ್ತಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಹೋರಾಟ ಸೇರಿದಂತೆ ವಿವಿಧ ಆಂದೋಲನಗಳಲ್ಲಿ ಶಿಂಧೆ ಭಾಗವಹಿಸಿದ್ದರು. ಶಿಂಧೆಯವರ ಉತ್ಸಾಹ, ಪಕ್ಷಕ್ಕಾಗಿ ಸಮರ್ಪಣಾ ಭಾವ, ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವ ಗುಣ ಅನೇಕರನ್ನು ಆಕರ್ಷಿಸಿತು. ಶಿಂಧೆಯವರ ಕೆಲಸದಿಂದ ಪ್ರಭಾವಿತರಾದ ದಿಘೆ, 1997ರಲ್ಲಿ ಪಕ್ಷದ ಟಿಕೆಟ್ ದೊರಕಿಸುವ ಮೂಲಕ ಚುನಾವಣಾ ರಾಜಕಾರಣಕ್ಕೆ ಎಳೆ ತರುತ್ತಾರೆ. ಹೀಗೆ ರಾಜಕೀಯ ಬದುಕು ಆರಂಭಿಸಿದ ಶಿಂಧೆ, ಮಹಾರಾಷ್ಟ್ರದ ಸಿಎಂ ಕುರ್ಚಿ ಹಿಡಿಯುವವರೆಗೆ ಬೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...