Homeಮುಖಪುಟಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ...

ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ.

- Advertisement -
- Advertisement -

ಶಿವಸೇನೆಯ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಒಂಬತ್ತು ದಿನಗಳ ಬಂಡಾಯದ ನಂತರ ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಸಂದೇಶ ರವಾನಿಸಲು ಹೊರಟಿದ್ದಾರೆ.

ಪ್ರಮಾಣವಚನ ಸಮಾರಂಭದ ನಂತರ, ಶಿಂಧೆ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರ ಬದಲಿಸಿದ್ದು, ಬಾಳಾಸಾಹೇಬ್ ಠಾಕ್ರೆಯವರೊಂದಿಗೆ ಇರುವ ಫೋಟೋವನ್ನು ಅಪ್‌ಲೋಡ್ ಮಾಡಿದ್ದಾರೆ. ಹಿಂದುತ್ವ ಮತ್ತು ಮರಾಠಾ ರಾಜಕೀಯ ಸಂಕೇತವಾಗಿ ಬಾಳಾ ಸಾಹೇಬ್‌ ಜೊತೆಗಿನ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಬೆಂಬಲದೊಂದಿಗೆ ಶಿವಸೇನೆ ಬಂಡಾಯಗಾರರು ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈಗ ಪಕ್ಷದ ಮೇಲೆ ಹಿಡಿತ ಸಾಧಿಸುವ ಹೋರಾಟ ನಡೆಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯಗಾರರೇ ನಿಜವಾದ ಶಿವಸೇನಾ ನಾಯಕರು ಎಂದು ಶಿಂಧೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಘೋಷಿಸಿದೆ. ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಜೊತೆ ಒಕ್ಕೂಟವನ್ನು ರಚಿಸುವ ಮೂಲಕ ಉದ್ಧವ್‌ ಠಾಕ್ರೆ ಅವರು ಬಾಳ್ ಠಾಕ್ರೆಯವರ ಹಿಂದುತ್ವ ಸಿದ್ಧಾಂತವನ್ನು ದುರ್ಬಲಗೊಳಿಸಿದ್ದಾರೆ. “ಇದು ಅಸ್ವಾಭಾವಿಕ ಮೈತ್ರಿ” ಎಂಬುದು ಬಂಡಾಯಗಾರರ ವಾದವಾಗಿದೆ.

ದಾಖಲೆ ಪ್ರಕಾರ ಹೇಳುವುದಾದರೆ ಶಿಂಧೆ ಅವರಿಗೆ 39 (55ರಲ್ಲಿ) ಶಿವಸೇನಾ ಶಾಸಕರ ಬೆಂಬಲವಿದೆ. ಉದ್ಧವ್ ಠಾಕ್ರೆ ಅವರ ಜೊತೆ 15 ಮಂದಿ ಶಾಸಕರಿದ್ದಾರೆ.

‘ದ್ರೋಹ ಬಗೆದಿದ್ದಾರೆ’ ಎಂಬ ಬೇಸರದೊಂದಿಗೆ ರಾಜೀನಾಮೆ ನೀಡಿದ ಉದ್ಧವ್‌, ಬಂಡಾಯ ನಾಯಕ ಶಿಂಧೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಶಿವಸೇನೆಯು ಆಟೋ ರಿಕ್ಷಾ ಚಾಲಕರು, ಕೈಗಾಡಿ ಎಳೆಯುವವರನ್ನು ಸಂಸದರು ಮತ್ತು ಶಾಸಕರನ್ನಾಗಿ ಮಾಡಿದೆ” ಎಂದಿದ್ದಾರೆ ಉದ್ಧವ್‌. ಶಿಂಧೆಯವರು ಈ ಹಿಂದೆ ಥಾಣೆಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದದ್ದು ಇಲ್ಲಿ ಗಮನಾರ್ಹ.

ಠಾಕ್ರೆಯವರ ರಾಜೀನಾಮೆಯು ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿತು. ಅನಿರೀಕ್ಷಿತವಾಗಿ ಶಿಂಧೆ ಮುಖ್ಯಮಂತ್ರಿ ಪದವಿಗೇರಿದರು. ಬಿಜೆಪಿ ಆಡಳಿತವಿರುವ ಅಸ್ಸಾಂನ ಹೋಟೆಲ್‌ನಲ್ಲಿ ಬಂಡಾಯ ಶಾಸಕರನ್ನು ನೋಡಿಕೊಂಡ ಶಿಂಧೆ ಅವರಿಗೆ ಮುಖ್ಯಮಂತ್ರಿ ಹುದ್ದೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಫಡ್ನವೀಸ್‌ ಮುಖ್ಯಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ.

ರಿಕ್ಷಾ ಚಾಲಕರಾಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ರಿಕ್ಷಾ ಚಾಲಕರಾಗಿದ್ದ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವವರೆಗೆ ಬೆಳೆದರು. ಕಟ್ಟಾ ಶಿವಸೇನೆಯವರಾಗಿದ್ದ ಏಕನಾಥ್ ಸಂಭಾಜಿ ಶಿಂಧೆ, ರಾಜಕೀಯವಾಗಿ ಪ್ರಭಾವಿಯಾಗಿರುವ ಮರಾಠಾ ಸಮುದಾಯಕ್ಕೆ ಸೇರಿದವರು. ಸತಾರಾ ಜಿಲ್ಲೆಯವರಾದ ವೈ.ಬಿ.ಚವ್ಹಾಣ್, ಬಾಬಾಸಾಹೇಬ್ ಭೋಸಲೆ ಮತ್ತು ಪೃಥ್ವಿರಾಜ್ ಚವಾಣ್ ನಂತರದಲ್ಲಿ ಉನ್ನತ ಹುದ್ದೆಗೇರಿದ ಕೀರ್ತಿಗೆ ಶಿಂಧೆ ಭಾಜನರಾಗಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಸಾಧ್ಯವಾಗದ ಬಿಜೆಪಿ, ಎಂವಿಎ ಸರ್ಕಾರವನ್ನು ಉರುಳಿಸಲು ಶಿಂಧೆ ಅವರನ್ನು ತನ್ನ ಗುರಾಣಿಯಾಗಿ ಬಳಸಿಕೊಂಡಿತು.

2004ರಿಂದ ಥಾಣೆಯ ಕಪ್ರಿ-ಪಚ್ಪಖಾಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಅವಧಿಯ ಶಾಸಕರಾಗಿದ್ದ ಶಿಂಧೆ ಅವರು ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ, ನಂತರ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ಯೋಜನೆಗಳ ಅನುಷ್ಠಾನಕಾರರಾಗಿ ತಮ್ಮ ಛಾಪು ಮೂಡಿಸಿದರು. ಕೋವಿಡ್ ಕಾರಣದಿಂದಾಗಿ ಉದ್ಧವ್‌ ಠಾಕ್ರೆ ಹೆಚ್ಚಾಗಿ ತಮ್ಮ ನಿವಾಸದಿಂದಲೇ ಕಾರ್ಯನಿರ್ವಹಿಸುತ್ತಿದ್ದಾಗ ಶಿಂಧೆ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು. ಸಾಂಕ್ರಾಮಿಕ ಬಿಕ್ಕಟ್ಟು, ನೈಸರ್ಗಿಕ ಅವಘಡ ಮೊದಲಾದ ಸಂದರ್ಭಗಳಲ್ಲಿ ಶಿಂಧೆ ಮುಂದೆ ನುಗ್ಗುತ್ತಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಹಣಕಾಸಿನ ಮುಗ್ಗಟ್ಟು ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಡಬೇಕಾಗಿ ಬಂದ ಶಿಂಧೆ, ಶಿವಸೇನೆಯ ಭದ್ರಕೋಟೆಯಾಗಿದ್ದ ಥಾಣೆಗೆ ತೆರಳಿ ಮೀನು ಮಾರಾಟದಲ್ಲಿ ತೊಡಗಿದ್ದ ಕಂಪನಿಗೆ ಸೇರಿಕೊಂಡರು. ಆದರೆ, ಸಂಬಳ ಸಾಲದೆ ಕೆಲಸ ಬಿಟ್ಟು ರಿಕ್ಷಾ ಚಾಲಕರಾದರು. 1970ರ ದಶಕದಲ್ಲಿ ಶಿಂಧೆ, ಶಿವಸೇನೆಯ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆಯವರ ಮರಾಠಿ ರಾಜಕಾರಣದ ಮನವಿಗೆ ಆಕರ್ಷಿತರಾದರು. ಕೇಸರಿ ಪಕ್ಷಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ಶಿವಸೇನೆಯ ಫೈರ್‌ಬ್ರಾಂಡ್ ಥಾಣೆ ಜಿಲ್ಲಾ ಮುಖ್ಯಸ್ಥ ಆನಂದ್ ದಿಘೆ ಅವರ ಸಂಪರ್ಕಕ್ಕೆ ಶಿಂಧೆ ಬರುತ್ತಾರೆ. ಶಿವಸೇನೆಯ ಬಲವರ್ಧನೆಗೆ ಕೆಲಸ ಮಾಡಿದ ಶಿಂಧೆ, ದಿಘೆ ಅವರ ಆಪ್ತರಾಗುತ್ತಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಹೋರಾಟ ಸೇರಿದಂತೆ ವಿವಿಧ ಆಂದೋಲನಗಳಲ್ಲಿ ಶಿಂಧೆ ಭಾಗವಹಿಸಿದ್ದರು. ಶಿಂಧೆಯವರ ಉತ್ಸಾಹ, ಪಕ್ಷಕ್ಕಾಗಿ ಸಮರ್ಪಣಾ ಭಾವ, ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವ ಗುಣ ಅನೇಕರನ್ನು ಆಕರ್ಷಿಸಿತು. ಶಿಂಧೆಯವರ ಕೆಲಸದಿಂದ ಪ್ರಭಾವಿತರಾದ ದಿಘೆ, 1997ರಲ್ಲಿ ಪಕ್ಷದ ಟಿಕೆಟ್ ದೊರಕಿಸುವ ಮೂಲಕ ಚುನಾವಣಾ ರಾಜಕಾರಣಕ್ಕೆ ಎಳೆ ತರುತ್ತಾರೆ. ಹೀಗೆ ರಾಜಕೀಯ ಬದುಕು ಆರಂಭಿಸಿದ ಶಿಂಧೆ, ಮಹಾರಾಷ್ಟ್ರದ ಸಿಎಂ ಕುರ್ಚಿ ಹಿಡಿಯುವವರೆಗೆ ಬೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...