Homeಮುಖಪುಟಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

- Advertisement -
- Advertisement -

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ಓಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ.

‘ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು, prove ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾಗಿದೆ- ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೆ?

ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪು ಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ”. ಈ ರೀತಿ ನಡೀತಾ ಇದೆ ಮೋದಿಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ.

ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು 99% v/s 1% ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

  • ದೇವನೂರ ಮಹಾದೇವ
  • ಕೃಪೆ: ಸಂವಾದ ಮಾಸಪತ್ರಿಕೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...