Homeಮುಖಪುಟಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

- Advertisement -
- Advertisement -

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ಓಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ.

‘ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು, prove ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾಗಿದೆ- ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೆ?

ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪು ಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ”. ಈ ರೀತಿ ನಡೀತಾ ಇದೆ ಮೋದಿಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ.

ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು 99% v/s 1% ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

  • ದೇವನೂರ ಮಹಾದೇವ
  • ಕೃಪೆ: ಸಂವಾದ ಮಾಸಪತ್ರಿಕೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...