Homeಮುಖಪುಟಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

- Advertisement -
- Advertisement -

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ಓಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ.

‘ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು, prove ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾಗಿದೆ- ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೆ?

ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪು ಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ”. ಈ ರೀತಿ ನಡೀತಾ ಇದೆ ಮೋದಿಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ.

ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು 99% v/s 1% ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

  • ದೇವನೂರ ಮಹಾದೇವ
  • ಕೃಪೆ: ಸಂವಾದ ಮಾಸಪತ್ರಿಕೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...