Homeಮುಖಪುಟಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

- Advertisement -
- Advertisement -

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ಓಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ.

‘ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು, prove ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾಗಿದೆ- ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೆ?

ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪು ಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ”. ಈ ರೀತಿ ನಡೀತಾ ಇದೆ ಮೋದಿಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ.

ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು 99% v/s 1% ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

  • ದೇವನೂರ ಮಹಾದೇವ
  • ಕೃಪೆ: ಸಂವಾದ ಮಾಸಪತ್ರಿಕೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...