Homeಮುಖಪುಟಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

- Advertisement -
- Advertisement -

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ಓಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ.

‘ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು, prove ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾಗಿದೆ- ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೆ?

ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪು ಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ”. ಈ ರೀತಿ ನಡೀತಾ ಇದೆ ಮೋದಿಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ.

ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು 99% v/s 1% ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

  • ದೇವನೂರ ಮಹಾದೇವ
  • ಕೃಪೆ: ಸಂವಾದ ಮಾಸಪತ್ರಿಕೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...