Homeಮುಖಪುಟಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

- Advertisement -
- Advertisement -

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ಓಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ.

‘ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು, prove ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾಗಿದೆ- ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೆ?

ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪು ಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ”. ಈ ರೀತಿ ನಡೀತಾ ಇದೆ ಮೋದಿಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ.

ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು 99% v/s 1% ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

  • ದೇವನೂರ ಮಹಾದೇವ
  • ಕೃಪೆ: ಸಂವಾದ ಮಾಸಪತ್ರಿಕೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...