Homeಮುಖಪುಟಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

- Advertisement -
- Advertisement -

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ಓಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ.

‘ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು, prove ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾಗಿದೆ- ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೆ?

ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪು ಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ”. ಈ ರೀತಿ ನಡೀತಾ ಇದೆ ಮೋದಿಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ.

ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು 99% v/s 1% ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

  • ದೇವನೂರ ಮಹಾದೇವ
  • ಕೃಪೆ: ಸಂವಾದ ಮಾಸಪತ್ರಿಕೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...