Homeಮುಖಪುಟಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

- Advertisement -
- Advertisement -

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ಓಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ.

‘ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು, prove ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾಗಿದೆ- ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೆ?

ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪು ಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ”. ಈ ರೀತಿ ನಡೀತಾ ಇದೆ ಮೋದಿಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ.

ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು 99% v/s 1% ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

  • ದೇವನೂರ ಮಹಾದೇವ
  • ಕೃಪೆ: ಸಂವಾದ ಮಾಸಪತ್ರಿಕೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...