Homeಮುಖಪುಟಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

- Advertisement -
- Advertisement -

ಜನಪ್ರತಿನಿಧಿಗಳು ಅಂದರೆ ಎಂಪಿ, ಎಂಎಲ್‌ಎ ಇಂಥವರು ಹೇಗೆ ಆಯ್ಕೆ ಆಗ್ತಾರೆ ಅಂತ ಎಲ್ಲರಿಗೂ ಗೊತ್ತು. ಮತದಾರರು ಅಂದರೆ ನಾವು ನೀವು ಜನಪ್ರತಿನಿಧಿಗಳನ್ನು ಆಯ್ಕೆ ಮಾಡ್ತೇವೆ. ಅದನ್ನೇನು ವಿವರಿಸಿ ಹೇಳಬೇಕಾಗಿಲ್ಲ. ಜನಪ್ರತಿನಿಧಿಗಳನ್ನೇ ಆಯ್ಕೆ ಮಾಡುವ ನಮ್ಮ ನಿಮ್ಮ ಕತೆ ಏನಾಗಿದೆ ನೋಡಿ. ನಾವು ನೀವು ಆಯ್ಕೆ ಮಾಡಿದ ಜನಪ್ರತಿನಿಧಿಯೇ ಇಂದು ಅವನನ್ನು ಆಯ್ಕೆ ಮಾಡಿದ ಮತದಾರರನ್ನೇ ನೀನು ಈ ದೇಶದವನು ಅಂತ ಸಾಬೀತು ಪಡಿಸು ಅಂತ ಕೇಳ್ತಾ ಇದ್ದಾನೆ. ಇಂದು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಜಾರಿಗೆ ತಂದು ನಮ್ಮ ಪ್ರಧಾನಿಯವರು ನಿನ್ನ ಪೌರತ್ವ ಸಾಬೀತು ಪಡಿಸು ಎಂದು ಅಪ್ಪಣೆ ಮಾಡಿದ್ದಾರೆ. ಇಡೀ ಭಾರತದ ಜನ ಒಕ್ಕೊರಲಿನಿಂದ ಪ್ರಧಾನಿಯವರನ್ನು ಕೇಳಬೇಕಾಗಿದೆ- ಅಲ್ಲಪ್ಪಾ, ನಾವು ನಿಮಗೆ ಓಟು ಕೊಡದಿದ್ದರೆ, ಓಟು ಕೊಟ್ಟು ನಿಮ್ಮನ್ನು ಆಯ್ಕೆ ಮಾಡದಿದ್ದರೆ ನೀವು ಎಲ್ಲಪ್ಪ ಪ್ರಧಾನಿ ಆಗ್ತಾ ಇದ್ದಿರಿ? ಹಾಗೇನೆ ಕೇಳಬೇಕಾಗಿದೆ.

‘ನಾವೇ ಆಯ್ಕೆ ಮಾಡಿದ ನೀವು, ನಿಮ್ಮನ್ನು ಆಯ್ಕೆ ಮಾಡಿದ ನಮ್ಮನ್ನೇ ಈಗ ನೀವು ಈ ದೇಶಕ್ಕೆ ಸೇರಿದವನು ಅಂತ ಸಾಬೀತು ಪಡಿಸು, prove ಮಾಡು ಅಂತ ಕೇಳ್ತಾ ಇದ್ದೀರಲ್ಲ? ಇದು ಸರೀನಾ? ನ್ಯಾಯನಾ?

ಮತ್ತೂ ಕೇಳಬೇಕಾಗಿದೆ- ನೀವು ನಮ್ಮ ಮತ ಪಡೆಯಲು ಮತದಾರರಿಗೆ ಏನೇನು ಕನಸುಗಳನ್ನು ಮುಂದಿಟ್ಟಿರಿ! ಬಣ್ಣ ಬಣ್ಣದ ಕನಸುಗಳನ್ನು ಮುಂದಿಟ್ಟರಿ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸ್ತೀನಿ ಅಂದಿರಿ! ಮಾಡಿದ್ದೇನು? ಇರೋ ಬರೋ ಉದ್ಯೋಗಗಳನ್ನೇ ಮುಳುಗಿಸಿದ್ದೀರಿ. ರೈತರಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡ್ತೀನಿ ಅಂದಿರಿ. ಅದರ ಸುಳಿವೇ ಇಲ್ಲ. ರೈತರು ಮತ್ತು ಗ್ರಾಮೀಣ ಜನತೆ ಮಾತ್ರವಲ್ಲ ಎಲ್ಲರ ಬದುಕು ಬೆಂಕಿಗೆ ಬಿದ್ದಂತೆ ಆಗಿದೆ. ನೆರೆ ಬರದಿಂದ ನಾಡು ಕೊಚ್ಚಿ ಹೋಗುತ್ತಿದ್ದಾಗ ತಾವು ಪರಿಹಾರ ನೀಡದೆ ಕಠೋರವಾಗಿ ನಡೆದುಕೊಂಡಿರಿ. ಇದು ಜನ ನಾಯಕನಿಗೆ ಯೋಗ್ಯ ನಡೆಯೆ?

ಅಷ್ಟೇಕೆ ನಿಮಗೆ ನೆನಪಿದೆಯೋ ನೆನಪಿಲ್ಲವೊ ನಮಗೆ ಗೊತ್ತಿಲ್ಲ. ಆದರೆ ನಮಗೆ ನೆನಪಿದೆ. ಕಪ್ಪು ಹಣ ತಂದು ಎಲ್ಲರ ಅಕೌಂಟ್‌ಗೆ 15 ಲಕ್ಷ ಹಾಕುತ್ತೇನೆ ಎಂದು ನೋಟ್ ಬ್ಯಾನ್ ಮಾಡಿ ಜನರು ತಾವು ಇಟ್ಟಿದ್ದ ಹಣಕ್ಕಾಗಿ ಕ್ಯೂನಲ್ಲಿ ನಿಂತು ಎಷ್ಟೊ ಜನ ಸತ್ತರು. ಸಾಲದು ಎಂಬಂತೆ ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ಬಂದರೆ ಆಗ ಜನರು ತಮ್ಮ ಪೌರತ್ವ ಸಾಬೀತು ಪಡಿಸಲು ವರ್ಷಾನುಗಟ್ಟಲೆ ಅಲೆಯುವಂತಹ ಧಾರುಣ ವಾತಾವರಣ ದೇಶದ ತುಂಬ ಉಂಟಾಗುತ್ತದೆ. ಇದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೆ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಮೋದಿಯವರು ಜನರ ಮನಸ್ಸಿಗೆ ಕೊಟ್ಟಿದ್ದು ಕನಸು. ಆದರೆ ಜನರ ಬದುಕಿಗೆ ನೀಡಿದ್ದು ದುಃಸ್ವಪ್ನ.

ಒಂದು ಜಾನಪದ ಗೀತೆ ಇದೆ- ‘ಜವರಾಯ ಬಂದರೆ ಬರಿಗೈಲಿ ಬರಲಿಲ್ಲ, ಕುಡುಗೋಲು ಕೈಲಿ ಹಿಡಿದು ಬಂದ, ಒಳ್ಳೊಳ್ಳೆ ಮರವ ಕಡಿತಾ ತಾ ಬಂದ”. ಈ ರೀತಿ ನಡೀತಾ ಇದೆ ಮೋದಿಶಾ ಆಳ್ವಿಕೆ. ಸ್ವಾತಂತ್ರ್ಯ ಪಡೆದ ನಂತರ ಕಟ್ಟಿದ್ದ ಒಳ್ಳೊಳ್ಳೆ ಸಂಸ್ಥೆಗಳು, ಸಾರ್ವಜನಿಕ ಆಸ್ತಿಪಾಸ್ತಿ, ನೈಸರ್ಗಿಕ ಸಂಪತ್ತು, ಮತಧರ್ಮಗಳ ನಡುವೆ ಇದ್ದ ಸೌಹಾರ್ದಯುತ ಸಂಬಂಧ ಎಲ್ಲವನ್ನೂ ಕೆಡವಲಾಗುತ್ತಿದೆ. ಕಟ್ಟುವ ಬದಲು ಕಟ್ಟಿರುವುದನ್ನೇ ಕೆಡವಲಾಗುತ್ತಿದೆ.

ಈಗ ಎನ್‌ಪಿಆರ್, ಎನ್‌ಆರ್‌ಸಿ, ಸಿಎಎ ಜಾರಿಗೆ ತಂದು ಪೌರತ್ವ ನಿರ್ಧಾರಕ್ಕೆ ಧರ್ಮವನ್ನು ಪರಿಗಣಿಸಿ ಸಂವಿಧಾನದ ಧರ್ಮ ನಿರಪೇಕ್ಷ ಆಶಯಕ್ಕೆ ಚ್ಯುತಿ ತರಲಾಗಿದೆ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕರಿಸಿ, ಆಮೇಲೆ ಗಾಂಧಿ ಹೃದಯಕ್ಕೆ ಗುಂಡು ಹೊಡೆಯುತ್ತಾನೆ. ಮೋದಿಯವರೂ ಪ್ರಧಾನಿಯಾದಾಗ ಸಂವಿಧಾನಕ್ಕೆ ವಿನಮ್ರವಾಗಿ ಬಗ್ಗಿ ನಮಸ್ಕರಿಸುತ್ತಾರೆ. ನಮಸ್ಕರಿಸಿ, ಸಂವಿಧಾನದ ಆಶಯಕ್ಕೆ ಗುಂಡು ಹೊಡೆದುಬಿಟ್ಟರು.

ಈಗ ಸಂವಿಧಾನದ ಮೌಲ್ಯವನ್ನು ಉಳಿಸಿಕೊಳ್ಳುವುದಕ್ಕಾಗಿ, ನಾಳೆ ಬದುಕಿ ಬಾಳಬೇಕಾದ ವಿದ್ಯಾರ್ಥಿ ಯುವಜನತೆ ಮುನ್ನೆಲೆಗೆ ಬಂದಿದೆ. We, the People of India ಅಂದರೆ ನಾವು ಭಾರತೀಯರು 99% v/s 1% ಕೋಮುವಾದಿಗಳ ನಡುವೆ ಸಂಘರ್ಷ ಎಂದು ಕೂಗಿ ಕೂಗಿ ಹೇಳುತ್ತಿದೆ. ಇಂದು ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಾಮರಸ್ಯ, ಸಹನೆ, ಪ್ರೀತಿ ಬೆಳೆಸಬೇಕಾಗಿದೆ. ದೇಶವನ್ನು ಮತ್ತೆ ಕಟ್ಟಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿ ಯುವಜನತೆ ಪಣ ತೊಟ್ಟಿದ್ದಾರೆ. ನಾವೀಗ ಜೊತೆಗೂಡಬೇಕಾಗಿದೆ.

  • ದೇವನೂರ ಮಹಾದೇವ
  • ಕೃಪೆ: ಸಂವಾದ ಮಾಸಪತ್ರಿಕೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...