Homeಕರ್ನಾಟಕಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

- Advertisement -
- Advertisement -

ಈ ವರ್ಷದ ಸೆಪ್ಟೆಂಬರ್ 30ರಂದು ಅಧಿಸೂಚನೆ ಹೊರಡಿಸಲಾದ ‘ಮತಾಂತರ ವಿರೋಧಿ ಕಾನೂನು’ ಎಂದೇ ಕರೆಯಲ್ಪಡುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯಡಿ ರಾಜ್ಯ ಪೊಲೀಸರು ಮೊದಲ ಪ್ರಕರಣವನ್ನು ದಾಖಲಿಸಿದ್ದಾರೆ.

ಯಶವಂತಪುರ ಪೊಲೀಸರು ಅಕ್ಟೋಬರ್ 13ರಂದು ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಬೆಂಗಳೂರಿನ ಬಿ.ಕೆ.ನಗರದ ನಿವಾಸಿ ಸೈಯದ್ ಮುಯಿನ್ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕನ್ ಸ್ಟಾಲ್ ನಡೆಸುತ್ತಿರುವ ಮುಯಿನ್, 18 ವರ್ಷದ ಖುಷ್ಬೂ ಎಂಬವರನ್ನು ಮದುವೆಯಾಗುವುದಾಗಿ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಯುವತಿಯು ಬಲವಂತದ ಮತಾಂತರವನ್ನು ನಿರಾಕರಿಸಿದ್ದಾಳೆ.

ಖುಷ್ಬೂ ಕುಟುಂಬ ಉತ್ತರ ಪ್ರದೇಶದ ಗೋರಖ್‌ಪುರ ಮೂಲದ್ದಾಗಿದ್ದು, ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಆಕೆಯ ತಂದೆ ಸುರೇಂದ್ರ ಯಾದವ್ ವೃತ್ತಿಯಲ್ಲಿ ಪೇಂಟರ್. ತಾಯಿ ಜ್ಞಾನಿದೇವಿ ಗೃಹಿಣಿ. ದಂಪತಿಗೆ ಇನ್ನೂ ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ.

ಖುಷ್ಬೂ ನಾಪತ್ತೆಯಾದ ಕೆಲವೇ ಗಂಟೆಗಳ ನಂತರ ಜ್ಞಾನಿದೇವಿಯವರು ಅಕ್ಟೋಬರ್ 5 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಆರು ತಿಂಗಳಿಂದ ಖುಷ್ಬೂಳನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಮುಯಿನ್‌ನೊಂದಿಗೆ ಮಗಳು ಓಡಿಹೋಗಿದ್ದಾಳೆ ಎಂದು ಜ್ಞಾನಿದೇವಿ ಶಂಕೆ ವ್ಯಕ್ತಪಡಿಸಿದ್ದರು.

ಈ ದೂರಿನಲ್ಲಿ ಧಾರ್ಮಿಕ ಮತಾಂತರವನ್ನು ಆರೋಪಿಸಿರಲಿಲ್ಲ. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಖುಷ್ಬೂಗಾಗಿ ಹುಡುಕಾಟ ಆರಂಭಿಸಿದ್ದರು. ಮೂರು ದಿನಗಳ ನಂತರ ಅಕ್ಟೋಬರ್ 8ರಂದು ಖುಷ್ಬೂ ಹಿಂತಿರುಗಿದ್ದರು. ತಾನು ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಕುಟುಂಬಕ್ಕೆ ತಿಳಿಸಿದ್ದರು.

ಜ್ಞಾನಿದೇವಿ ಮತ್ತು ಸುರೇಂದ್ರ ಯಾದವ್‌ ತನ್ನ ಮಗಳೊಂದಿಗೆ ಚರ್ಚೆಗಿಳಿದರು. ಪೋಷಕರ ಮಾತಿಗೆ ಖುಷ್ಬೂ ಅಸಮ್ಮತಿ ಸೂಚಿಸಿದರು. ಬಲವಂತದ ಮತಾಂತರವನ್ನು ಆರೋಪಿಸಿ ಜ್ಞಾನಿದೇವಿ ಅಕ್ಟೋಬರ್ 13ರಂದು ಮತ್ತೊಂದು ಪೊಲೀಸ್ ದೂರು ದಾಖಲಿಸಿದ್ದಾರೆ. ಹೊಸ ದೂರಿನ ಅನ್ವಯ ಪೊಲೀಸರು ಹೊಸ ಕಾಯ್ದೆಯ ಸೆಕ್ಷನ್ 5ಅನ್ನು ಪ್ರಯೋಗಿಸಿ ಪ್ರಕರಣ ದಾಖಲಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಉತ್ತರ) ವಿನಾಯಕ ಪಾಟೀಲ್ ಡೆಕ್ಕನ್‌ ಹೆರಾಲ್ಡ್‌ಗೆ ಪ್ರತಿಕ್ರಿಯಿಸಿ, “ನಾವು ಹೊಸ ಕಾನೂನಿನ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಇದು ಮದುವೆಯ ಭರವಸೆಯ ಮೇಲೆ ಧಾರ್ಮಿಕ ಮತಾಂತರ ಮಾಡಿದ ಪ್ರಕರಣವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಹುಡುಗಿ ತನ್ನ ಸ್ವಂತ ಇಚ್ಛೆಯ ಮೇರೆಗೆ ಇಸ್ಲಾಂಗೆ ಮತಾಂತರಗೊಂಡಂತೆ ತೋರುತ್ತಿದೆ. ಆದರೆ ಹೊಸ ಕಾನೂನಿನ ಅಡಿಯಲ್ಲಿ ನಿಗದಿಪಡಿಸಿದ ವಿಧಾನವನ್ನು ಮತಾಂತರಕ್ಕೂ ಮುನ್ನ ಅನುಸರಿಸಲಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿರುವುದುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

ಹೊಸ ಕಾನೂನಿನ ಪ್ರಕಾರ, ”ಧರ್ಮವನ್ನು ಬದಲಾಯಿಸಲು ಬಯಸುವ ಯಾವುದೇ ವ್ಯಕ್ತಿ ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್-1ರಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ನೀಡಬೇಕಾಗುತ್ತದೆ.”

ಮತಾಂತರವಾಗುವ ವ್ಯಕ್ತಿಯು ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್ II ಅನ್ನು ಸಲ್ಲಿಸಬೇಕು. ಪ್ರಸ್ತಾವಿತ ಧಾರ್ಮಿಕ ಮತಾಂತರಕ್ಕೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕರೆ ಮಾಡಬೇಕಿರುತ್ತದೆ.

30 ದಿನಗಳೊಳಗೆ ಆಕ್ಷೇಪಣೆಗಳು ಬಂದಲ್ಲಿ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಬೇಕು. ಈ ವಿಚಾರಣೆಯು ಉದ್ದೇಶಿತ ಪರಿವರ್ತನೆಯ ನಿಜವಾದ ಉದ್ದೇಶ ಮತ್ತು ಕಾರಣವನ್ನು ಪರಿಶೀಲಿಸುತ್ತದೆ.

ವಿಚಾರಣೆಯು ಈ ಕಾಯಿದೆಯಡಿ ಪ್ರಕರಣವನ್ನು ಗುರುತಿಸಿದರೆ, ಜಿಲ್ಲಾಧಿಕಾರಿಗಳು ಕ್ರಿಮಿನಲ್ ಕ್ರಮವನ್ನು ಪ್ರಾರಂಭಿಸಲು ಪೊಲೀಸರಿಗೆ ಸೂಚಿಸುತ್ತಾರೆ. ಪ್ರಸ್ತುತ ಪ್ರಕರಣದಲ್ಲಿ ಮತಾಂತರಗೊಳ್ಳುವ ಮೊದಲು ದಂಪತಿ ಮದುವೆಯಾಗಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿರಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ಮುಯಿನ್ ಹುಡುಗಿಯನ್ನು ಆಂಧ್ರಪ್ರದೇಶದ ಪೆನುಕೊಂಡ ದರ್ಗಾಕ್ಕೆ ಕರೆದೊಯ್ದಿದ್ದು, ಅಲ್ಲಿ ಧಾರ್ಮಿಕ ಮತಾಂತರ ಸಮಾರಂಭ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಧರ್ಮವನ್ನು ಬದಲಿಸಿರುವುದು ಏತಕ್ಕೆ ಎಂದು ಪೊಲೀಸರು ಯುವತಿಯನ್ನು ಪ್ರಶ್ನಿಸಿದ್ದಾರೆ. ಆಕೆ ಬಲವಂತದ ಮತಾಂತರ ಆರೋಪವನ್ನು ನಿರಾಕರಿಸಿದ್ದಾಳೆ. ಯುವಕನ ಪೋಷಕರು ಪೊಲೀಸರಿಗೆ, “ಹೊಸ ಕಾನೂನಿನ ಬಗ್ಗೆ ತಿಳಿದಿಲ್ಲ ಮತ್ತು ಘಟನೆ ವಿಷಾದನೀಯ” ಎಂದಿದ್ದಾರೆ.

ಹೊಸ ಕಾನೂನಿನ ಸೆಕ್ಷನ್ 5 ರ ಪ್ರಕಾರ ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡವನ್ನು ವಿಧಿಸಲಾಗುತ್ತದೆ. ನ್ಯಾಯಾಲಯವು ಮುಯಿನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರವಾಗಿಲ್ಲವೇ ಕರ್ನಾಟಕ ಪೊಲೀಸ್ ಎಚ್ಚರದಿಂದ ಇದ್ದಾರೆ.. ಆದರೆ ಅವರಿಗೆ ಒಂದು ಸಾಮಾನ್ಯ ಜ್ಞಾನ ಇಲ್ಲ ಅನ್ನೋದು ತಿಳಿಯಿತು. ಸರ್ಕಾರದ ಈ ಕಾಯ್ದೆ ಏಷ್ಟು ಜನ ಸಾಮಾನ್ಯರಿಗೆ ಗೊತ್ತಿದೆ. ಅಂತ ಕೇಳಿ ಅವರಲ್ಲಿ ಉತ್ತರ ಇಲ್ಲ.. ಈ ಕಾಯ್ದೆ ಕೇವಲ ಒಮ್ಮೆ ಟಿವಿ ಅಲ್ಲಿ ಪ್ರಸಾರಕ್ಕೆ ಸೀಮಿತ. ಕಾಯ್ದೆ ಬಗ್ಗೆ ಜನ ಸಾಮಾನ್ಯರಲ್ಲಿ ಏಷ್ಟು ಅರಿವು ಮೂಡಿಸಿದರೆ ಎಂದು ತಿಳಿಯಬೇಕಿದೆ. ಮಾನ್ಯ ಗೌರಿ. ಕಾಂ ಸಂಸ್ಥೆ ಅವರೇ ದಯಮಾಡಿ ಒಮ್ಮೆ ನಮ್ಮ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂದರ್ಶನ ಮಾಡಿ ಈ ಮತಾಂತರ ಕಾಯ್ದೆ ಬಗ್ಗೆ ಸಾಮಾನ್ಯರಲ್ಲಿ ಎಷ್ಟರ ಮಟ್ಟಿಗೆ ಅರಿವು, ಮಾಹಿತಿ, ಜ್ಞಾನ ನೀಡಿದ್ದಾರೆ ಎಂದು ಪ್ರಶ್ನಿಸಿ ದಯವಿಟ್ಟು ತಿಳಿಸಲು ಕೇಳಿ ನನ್ನ ಒಂದು ಪುಟ್ಟ ಮನವಿ 🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...