Homeಕರ್ನಾಟಕಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

- Advertisement -
- Advertisement -

ಈ ವರ್ಷದ ಸೆಪ್ಟೆಂಬರ್ 30ರಂದು ಅಧಿಸೂಚನೆ ಹೊರಡಿಸಲಾದ ‘ಮತಾಂತರ ವಿರೋಧಿ ಕಾನೂನು’ ಎಂದೇ ಕರೆಯಲ್ಪಡುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯಡಿ ರಾಜ್ಯ ಪೊಲೀಸರು ಮೊದಲ ಪ್ರಕರಣವನ್ನು ದಾಖಲಿಸಿದ್ದಾರೆ.

ಯಶವಂತಪುರ ಪೊಲೀಸರು ಅಕ್ಟೋಬರ್ 13ರಂದು ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಬೆಂಗಳೂರಿನ ಬಿ.ಕೆ.ನಗರದ ನಿವಾಸಿ ಸೈಯದ್ ಮುಯಿನ್ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕನ್ ಸ್ಟಾಲ್ ನಡೆಸುತ್ತಿರುವ ಮುಯಿನ್, 18 ವರ್ಷದ ಖುಷ್ಬೂ ಎಂಬವರನ್ನು ಮದುವೆಯಾಗುವುದಾಗಿ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಯುವತಿಯು ಬಲವಂತದ ಮತಾಂತರವನ್ನು ನಿರಾಕರಿಸಿದ್ದಾಳೆ.

ಖುಷ್ಬೂ ಕುಟುಂಬ ಉತ್ತರ ಪ್ರದೇಶದ ಗೋರಖ್‌ಪುರ ಮೂಲದ್ದಾಗಿದ್ದು, ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಆಕೆಯ ತಂದೆ ಸುರೇಂದ್ರ ಯಾದವ್ ವೃತ್ತಿಯಲ್ಲಿ ಪೇಂಟರ್. ತಾಯಿ ಜ್ಞಾನಿದೇವಿ ಗೃಹಿಣಿ. ದಂಪತಿಗೆ ಇನ್ನೂ ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ.

ಖುಷ್ಬೂ ನಾಪತ್ತೆಯಾದ ಕೆಲವೇ ಗಂಟೆಗಳ ನಂತರ ಜ್ಞಾನಿದೇವಿಯವರು ಅಕ್ಟೋಬರ್ 5 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಆರು ತಿಂಗಳಿಂದ ಖುಷ್ಬೂಳನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಮುಯಿನ್‌ನೊಂದಿಗೆ ಮಗಳು ಓಡಿಹೋಗಿದ್ದಾಳೆ ಎಂದು ಜ್ಞಾನಿದೇವಿ ಶಂಕೆ ವ್ಯಕ್ತಪಡಿಸಿದ್ದರು.

ಈ ದೂರಿನಲ್ಲಿ ಧಾರ್ಮಿಕ ಮತಾಂತರವನ್ನು ಆರೋಪಿಸಿರಲಿಲ್ಲ. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಖುಷ್ಬೂಗಾಗಿ ಹುಡುಕಾಟ ಆರಂಭಿಸಿದ್ದರು. ಮೂರು ದಿನಗಳ ನಂತರ ಅಕ್ಟೋಬರ್ 8ರಂದು ಖುಷ್ಬೂ ಹಿಂತಿರುಗಿದ್ದರು. ತಾನು ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಕುಟುಂಬಕ್ಕೆ ತಿಳಿಸಿದ್ದರು.

ಜ್ಞಾನಿದೇವಿ ಮತ್ತು ಸುರೇಂದ್ರ ಯಾದವ್‌ ತನ್ನ ಮಗಳೊಂದಿಗೆ ಚರ್ಚೆಗಿಳಿದರು. ಪೋಷಕರ ಮಾತಿಗೆ ಖುಷ್ಬೂ ಅಸಮ್ಮತಿ ಸೂಚಿಸಿದರು. ಬಲವಂತದ ಮತಾಂತರವನ್ನು ಆರೋಪಿಸಿ ಜ್ಞಾನಿದೇವಿ ಅಕ್ಟೋಬರ್ 13ರಂದು ಮತ್ತೊಂದು ಪೊಲೀಸ್ ದೂರು ದಾಖಲಿಸಿದ್ದಾರೆ. ಹೊಸ ದೂರಿನ ಅನ್ವಯ ಪೊಲೀಸರು ಹೊಸ ಕಾಯ್ದೆಯ ಸೆಕ್ಷನ್ 5ಅನ್ನು ಪ್ರಯೋಗಿಸಿ ಪ್ರಕರಣ ದಾಖಲಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಉತ್ತರ) ವಿನಾಯಕ ಪಾಟೀಲ್ ಡೆಕ್ಕನ್‌ ಹೆರಾಲ್ಡ್‌ಗೆ ಪ್ರತಿಕ್ರಿಯಿಸಿ, “ನಾವು ಹೊಸ ಕಾನೂನಿನ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಇದು ಮದುವೆಯ ಭರವಸೆಯ ಮೇಲೆ ಧಾರ್ಮಿಕ ಮತಾಂತರ ಮಾಡಿದ ಪ್ರಕರಣವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಹುಡುಗಿ ತನ್ನ ಸ್ವಂತ ಇಚ್ಛೆಯ ಮೇರೆಗೆ ಇಸ್ಲಾಂಗೆ ಮತಾಂತರಗೊಂಡಂತೆ ತೋರುತ್ತಿದೆ. ಆದರೆ ಹೊಸ ಕಾನೂನಿನ ಅಡಿಯಲ್ಲಿ ನಿಗದಿಪಡಿಸಿದ ವಿಧಾನವನ್ನು ಮತಾಂತರಕ್ಕೂ ಮುನ್ನ ಅನುಸರಿಸಲಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿರುವುದುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

ಹೊಸ ಕಾನೂನಿನ ಪ್ರಕಾರ, ”ಧರ್ಮವನ್ನು ಬದಲಾಯಿಸಲು ಬಯಸುವ ಯಾವುದೇ ವ್ಯಕ್ತಿ ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್-1ರಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ನೀಡಬೇಕಾಗುತ್ತದೆ.”

ಮತಾಂತರವಾಗುವ ವ್ಯಕ್ತಿಯು ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್ II ಅನ್ನು ಸಲ್ಲಿಸಬೇಕು. ಪ್ರಸ್ತಾವಿತ ಧಾರ್ಮಿಕ ಮತಾಂತರಕ್ಕೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕರೆ ಮಾಡಬೇಕಿರುತ್ತದೆ.

30 ದಿನಗಳೊಳಗೆ ಆಕ್ಷೇಪಣೆಗಳು ಬಂದಲ್ಲಿ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಬೇಕು. ಈ ವಿಚಾರಣೆಯು ಉದ್ದೇಶಿತ ಪರಿವರ್ತನೆಯ ನಿಜವಾದ ಉದ್ದೇಶ ಮತ್ತು ಕಾರಣವನ್ನು ಪರಿಶೀಲಿಸುತ್ತದೆ.

ವಿಚಾರಣೆಯು ಈ ಕಾಯಿದೆಯಡಿ ಪ್ರಕರಣವನ್ನು ಗುರುತಿಸಿದರೆ, ಜಿಲ್ಲಾಧಿಕಾರಿಗಳು ಕ್ರಿಮಿನಲ್ ಕ್ರಮವನ್ನು ಪ್ರಾರಂಭಿಸಲು ಪೊಲೀಸರಿಗೆ ಸೂಚಿಸುತ್ತಾರೆ. ಪ್ರಸ್ತುತ ಪ್ರಕರಣದಲ್ಲಿ ಮತಾಂತರಗೊಳ್ಳುವ ಮೊದಲು ದಂಪತಿ ಮದುವೆಯಾಗಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿರಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ಮುಯಿನ್ ಹುಡುಗಿಯನ್ನು ಆಂಧ್ರಪ್ರದೇಶದ ಪೆನುಕೊಂಡ ದರ್ಗಾಕ್ಕೆ ಕರೆದೊಯ್ದಿದ್ದು, ಅಲ್ಲಿ ಧಾರ್ಮಿಕ ಮತಾಂತರ ಸಮಾರಂಭ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಧರ್ಮವನ್ನು ಬದಲಿಸಿರುವುದು ಏತಕ್ಕೆ ಎಂದು ಪೊಲೀಸರು ಯುವತಿಯನ್ನು ಪ್ರಶ್ನಿಸಿದ್ದಾರೆ. ಆಕೆ ಬಲವಂತದ ಮತಾಂತರ ಆರೋಪವನ್ನು ನಿರಾಕರಿಸಿದ್ದಾಳೆ. ಯುವಕನ ಪೋಷಕರು ಪೊಲೀಸರಿಗೆ, “ಹೊಸ ಕಾನೂನಿನ ಬಗ್ಗೆ ತಿಳಿದಿಲ್ಲ ಮತ್ತು ಘಟನೆ ವಿಷಾದನೀಯ” ಎಂದಿದ್ದಾರೆ.

ಹೊಸ ಕಾನೂನಿನ ಸೆಕ್ಷನ್ 5 ರ ಪ್ರಕಾರ ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡವನ್ನು ವಿಧಿಸಲಾಗುತ್ತದೆ. ನ್ಯಾಯಾಲಯವು ಮುಯಿನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರವಾಗಿಲ್ಲವೇ ಕರ್ನಾಟಕ ಪೊಲೀಸ್ ಎಚ್ಚರದಿಂದ ಇದ್ದಾರೆ.. ಆದರೆ ಅವರಿಗೆ ಒಂದು ಸಾಮಾನ್ಯ ಜ್ಞಾನ ಇಲ್ಲ ಅನ್ನೋದು ತಿಳಿಯಿತು. ಸರ್ಕಾರದ ಈ ಕಾಯ್ದೆ ಏಷ್ಟು ಜನ ಸಾಮಾನ್ಯರಿಗೆ ಗೊತ್ತಿದೆ. ಅಂತ ಕೇಳಿ ಅವರಲ್ಲಿ ಉತ್ತರ ಇಲ್ಲ.. ಈ ಕಾಯ್ದೆ ಕೇವಲ ಒಮ್ಮೆ ಟಿವಿ ಅಲ್ಲಿ ಪ್ರಸಾರಕ್ಕೆ ಸೀಮಿತ. ಕಾಯ್ದೆ ಬಗ್ಗೆ ಜನ ಸಾಮಾನ್ಯರಲ್ಲಿ ಏಷ್ಟು ಅರಿವು ಮೂಡಿಸಿದರೆ ಎಂದು ತಿಳಿಯಬೇಕಿದೆ. ಮಾನ್ಯ ಗೌರಿ. ಕಾಂ ಸಂಸ್ಥೆ ಅವರೇ ದಯಮಾಡಿ ಒಮ್ಮೆ ನಮ್ಮ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂದರ್ಶನ ಮಾಡಿ ಈ ಮತಾಂತರ ಕಾಯ್ದೆ ಬಗ್ಗೆ ಸಾಮಾನ್ಯರಲ್ಲಿ ಎಷ್ಟರ ಮಟ್ಟಿಗೆ ಅರಿವು, ಮಾಹಿತಿ, ಜ್ಞಾನ ನೀಡಿದ್ದಾರೆ ಎಂದು ಪ್ರಶ್ನಿಸಿ ದಯವಿಟ್ಟು ತಿಳಿಸಲು ಕೇಳಿ ನನ್ನ ಒಂದು ಪುಟ್ಟ ಮನವಿ 🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...