Homeಕರ್ನಾಟಕಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

- Advertisement -
- Advertisement -

ಈ ವರ್ಷದ ಸೆಪ್ಟೆಂಬರ್ 30ರಂದು ಅಧಿಸೂಚನೆ ಹೊರಡಿಸಲಾದ ‘ಮತಾಂತರ ವಿರೋಧಿ ಕಾನೂನು’ ಎಂದೇ ಕರೆಯಲ್ಪಡುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯಡಿ ರಾಜ್ಯ ಪೊಲೀಸರು ಮೊದಲ ಪ್ರಕರಣವನ್ನು ದಾಖಲಿಸಿದ್ದಾರೆ.

ಯಶವಂತಪುರ ಪೊಲೀಸರು ಅಕ್ಟೋಬರ್ 13ರಂದು ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಬೆಂಗಳೂರಿನ ಬಿ.ಕೆ.ನಗರದ ನಿವಾಸಿ ಸೈಯದ್ ಮುಯಿನ್ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕನ್ ಸ್ಟಾಲ್ ನಡೆಸುತ್ತಿರುವ ಮುಯಿನ್, 18 ವರ್ಷದ ಖುಷ್ಬೂ ಎಂಬವರನ್ನು ಮದುವೆಯಾಗುವುದಾಗಿ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಯುವತಿಯು ಬಲವಂತದ ಮತಾಂತರವನ್ನು ನಿರಾಕರಿಸಿದ್ದಾಳೆ.

ಖುಷ್ಬೂ ಕುಟುಂಬ ಉತ್ತರ ಪ್ರದೇಶದ ಗೋರಖ್‌ಪುರ ಮೂಲದ್ದಾಗಿದ್ದು, ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಆಕೆಯ ತಂದೆ ಸುರೇಂದ್ರ ಯಾದವ್ ವೃತ್ತಿಯಲ್ಲಿ ಪೇಂಟರ್. ತಾಯಿ ಜ್ಞಾನಿದೇವಿ ಗೃಹಿಣಿ. ದಂಪತಿಗೆ ಇನ್ನೂ ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ.

ಖುಷ್ಬೂ ನಾಪತ್ತೆಯಾದ ಕೆಲವೇ ಗಂಟೆಗಳ ನಂತರ ಜ್ಞಾನಿದೇವಿಯವರು ಅಕ್ಟೋಬರ್ 5 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಆರು ತಿಂಗಳಿಂದ ಖುಷ್ಬೂಳನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಮುಯಿನ್‌ನೊಂದಿಗೆ ಮಗಳು ಓಡಿಹೋಗಿದ್ದಾಳೆ ಎಂದು ಜ್ಞಾನಿದೇವಿ ಶಂಕೆ ವ್ಯಕ್ತಪಡಿಸಿದ್ದರು.

ಈ ದೂರಿನಲ್ಲಿ ಧಾರ್ಮಿಕ ಮತಾಂತರವನ್ನು ಆರೋಪಿಸಿರಲಿಲ್ಲ. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಖುಷ್ಬೂಗಾಗಿ ಹುಡುಕಾಟ ಆರಂಭಿಸಿದ್ದರು. ಮೂರು ದಿನಗಳ ನಂತರ ಅಕ್ಟೋಬರ್ 8ರಂದು ಖುಷ್ಬೂ ಹಿಂತಿರುಗಿದ್ದರು. ತಾನು ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಕುಟುಂಬಕ್ಕೆ ತಿಳಿಸಿದ್ದರು.

ಜ್ಞಾನಿದೇವಿ ಮತ್ತು ಸುರೇಂದ್ರ ಯಾದವ್‌ ತನ್ನ ಮಗಳೊಂದಿಗೆ ಚರ್ಚೆಗಿಳಿದರು. ಪೋಷಕರ ಮಾತಿಗೆ ಖುಷ್ಬೂ ಅಸಮ್ಮತಿ ಸೂಚಿಸಿದರು. ಬಲವಂತದ ಮತಾಂತರವನ್ನು ಆರೋಪಿಸಿ ಜ್ಞಾನಿದೇವಿ ಅಕ್ಟೋಬರ್ 13ರಂದು ಮತ್ತೊಂದು ಪೊಲೀಸ್ ದೂರು ದಾಖಲಿಸಿದ್ದಾರೆ. ಹೊಸ ದೂರಿನ ಅನ್ವಯ ಪೊಲೀಸರು ಹೊಸ ಕಾಯ್ದೆಯ ಸೆಕ್ಷನ್ 5ಅನ್ನು ಪ್ರಯೋಗಿಸಿ ಪ್ರಕರಣ ದಾಖಲಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಉತ್ತರ) ವಿನಾಯಕ ಪಾಟೀಲ್ ಡೆಕ್ಕನ್‌ ಹೆರಾಲ್ಡ್‌ಗೆ ಪ್ರತಿಕ್ರಿಯಿಸಿ, “ನಾವು ಹೊಸ ಕಾನೂನಿನ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಇದು ಮದುವೆಯ ಭರವಸೆಯ ಮೇಲೆ ಧಾರ್ಮಿಕ ಮತಾಂತರ ಮಾಡಿದ ಪ್ರಕರಣವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಹುಡುಗಿ ತನ್ನ ಸ್ವಂತ ಇಚ್ಛೆಯ ಮೇರೆಗೆ ಇಸ್ಲಾಂಗೆ ಮತಾಂತರಗೊಂಡಂತೆ ತೋರುತ್ತಿದೆ. ಆದರೆ ಹೊಸ ಕಾನೂನಿನ ಅಡಿಯಲ್ಲಿ ನಿಗದಿಪಡಿಸಿದ ವಿಧಾನವನ್ನು ಮತಾಂತರಕ್ಕೂ ಮುನ್ನ ಅನುಸರಿಸಲಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿರುವುದುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

ಹೊಸ ಕಾನೂನಿನ ಪ್ರಕಾರ, ”ಧರ್ಮವನ್ನು ಬದಲಾಯಿಸಲು ಬಯಸುವ ಯಾವುದೇ ವ್ಯಕ್ತಿ ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್-1ರಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ನೀಡಬೇಕಾಗುತ್ತದೆ.”

ಮತಾಂತರವಾಗುವ ವ್ಯಕ್ತಿಯು ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್ II ಅನ್ನು ಸಲ್ಲಿಸಬೇಕು. ಪ್ರಸ್ತಾವಿತ ಧಾರ್ಮಿಕ ಮತಾಂತರಕ್ಕೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕರೆ ಮಾಡಬೇಕಿರುತ್ತದೆ.

30 ದಿನಗಳೊಳಗೆ ಆಕ್ಷೇಪಣೆಗಳು ಬಂದಲ್ಲಿ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಬೇಕು. ಈ ವಿಚಾರಣೆಯು ಉದ್ದೇಶಿತ ಪರಿವರ್ತನೆಯ ನಿಜವಾದ ಉದ್ದೇಶ ಮತ್ತು ಕಾರಣವನ್ನು ಪರಿಶೀಲಿಸುತ್ತದೆ.

ವಿಚಾರಣೆಯು ಈ ಕಾಯಿದೆಯಡಿ ಪ್ರಕರಣವನ್ನು ಗುರುತಿಸಿದರೆ, ಜಿಲ್ಲಾಧಿಕಾರಿಗಳು ಕ್ರಿಮಿನಲ್ ಕ್ರಮವನ್ನು ಪ್ರಾರಂಭಿಸಲು ಪೊಲೀಸರಿಗೆ ಸೂಚಿಸುತ್ತಾರೆ. ಪ್ರಸ್ತುತ ಪ್ರಕರಣದಲ್ಲಿ ಮತಾಂತರಗೊಳ್ಳುವ ಮೊದಲು ದಂಪತಿ ಮದುವೆಯಾಗಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿರಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ಮುಯಿನ್ ಹುಡುಗಿಯನ್ನು ಆಂಧ್ರಪ್ರದೇಶದ ಪೆನುಕೊಂಡ ದರ್ಗಾಕ್ಕೆ ಕರೆದೊಯ್ದಿದ್ದು, ಅಲ್ಲಿ ಧಾರ್ಮಿಕ ಮತಾಂತರ ಸಮಾರಂಭ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಧರ್ಮವನ್ನು ಬದಲಿಸಿರುವುದು ಏತಕ್ಕೆ ಎಂದು ಪೊಲೀಸರು ಯುವತಿಯನ್ನು ಪ್ರಶ್ನಿಸಿದ್ದಾರೆ. ಆಕೆ ಬಲವಂತದ ಮತಾಂತರ ಆರೋಪವನ್ನು ನಿರಾಕರಿಸಿದ್ದಾಳೆ. ಯುವಕನ ಪೋಷಕರು ಪೊಲೀಸರಿಗೆ, “ಹೊಸ ಕಾನೂನಿನ ಬಗ್ಗೆ ತಿಳಿದಿಲ್ಲ ಮತ್ತು ಘಟನೆ ವಿಷಾದನೀಯ” ಎಂದಿದ್ದಾರೆ.

ಹೊಸ ಕಾನೂನಿನ ಸೆಕ್ಷನ್ 5 ರ ಪ್ರಕಾರ ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡವನ್ನು ವಿಧಿಸಲಾಗುತ್ತದೆ. ನ್ಯಾಯಾಲಯವು ಮುಯಿನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರವಾಗಿಲ್ಲವೇ ಕರ್ನಾಟಕ ಪೊಲೀಸ್ ಎಚ್ಚರದಿಂದ ಇದ್ದಾರೆ.. ಆದರೆ ಅವರಿಗೆ ಒಂದು ಸಾಮಾನ್ಯ ಜ್ಞಾನ ಇಲ್ಲ ಅನ್ನೋದು ತಿಳಿಯಿತು. ಸರ್ಕಾರದ ಈ ಕಾಯ್ದೆ ಏಷ್ಟು ಜನ ಸಾಮಾನ್ಯರಿಗೆ ಗೊತ್ತಿದೆ. ಅಂತ ಕೇಳಿ ಅವರಲ್ಲಿ ಉತ್ತರ ಇಲ್ಲ.. ಈ ಕಾಯ್ದೆ ಕೇವಲ ಒಮ್ಮೆ ಟಿವಿ ಅಲ್ಲಿ ಪ್ರಸಾರಕ್ಕೆ ಸೀಮಿತ. ಕಾಯ್ದೆ ಬಗ್ಗೆ ಜನ ಸಾಮಾನ್ಯರಲ್ಲಿ ಏಷ್ಟು ಅರಿವು ಮೂಡಿಸಿದರೆ ಎಂದು ತಿಳಿಯಬೇಕಿದೆ. ಮಾನ್ಯ ಗೌರಿ. ಕಾಂ ಸಂಸ್ಥೆ ಅವರೇ ದಯಮಾಡಿ ಒಮ್ಮೆ ನಮ್ಮ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂದರ್ಶನ ಮಾಡಿ ಈ ಮತಾಂತರ ಕಾಯ್ದೆ ಬಗ್ಗೆ ಸಾಮಾನ್ಯರಲ್ಲಿ ಎಷ್ಟರ ಮಟ್ಟಿಗೆ ಅರಿವು, ಮಾಹಿತಿ, ಜ್ಞಾನ ನೀಡಿದ್ದಾರೆ ಎಂದು ಪ್ರಶ್ನಿಸಿ ದಯವಿಟ್ಟು ತಿಳಿಸಲು ಕೇಳಿ ನನ್ನ ಒಂದು ಪುಟ್ಟ ಮನವಿ 🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...