Homeಕರ್ನಾಟಕಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

- Advertisement -
- Advertisement -

ಈ ವರ್ಷದ ಸೆಪ್ಟೆಂಬರ್ 30ರಂದು ಅಧಿಸೂಚನೆ ಹೊರಡಿಸಲಾದ ‘ಮತಾಂತರ ವಿರೋಧಿ ಕಾನೂನು’ ಎಂದೇ ಕರೆಯಲ್ಪಡುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯಡಿ ರಾಜ್ಯ ಪೊಲೀಸರು ಮೊದಲ ಪ್ರಕರಣವನ್ನು ದಾಖಲಿಸಿದ್ದಾರೆ.

ಯಶವಂತಪುರ ಪೊಲೀಸರು ಅಕ್ಟೋಬರ್ 13ರಂದು ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಬೆಂಗಳೂರಿನ ಬಿ.ಕೆ.ನಗರದ ನಿವಾಸಿ ಸೈಯದ್ ಮುಯಿನ್ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕನ್ ಸ್ಟಾಲ್ ನಡೆಸುತ್ತಿರುವ ಮುಯಿನ್, 18 ವರ್ಷದ ಖುಷ್ಬೂ ಎಂಬವರನ್ನು ಮದುವೆಯಾಗುವುದಾಗಿ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಯುವತಿಯು ಬಲವಂತದ ಮತಾಂತರವನ್ನು ನಿರಾಕರಿಸಿದ್ದಾಳೆ.

ಖುಷ್ಬೂ ಕುಟುಂಬ ಉತ್ತರ ಪ್ರದೇಶದ ಗೋರಖ್‌ಪುರ ಮೂಲದ್ದಾಗಿದ್ದು, ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಆಕೆಯ ತಂದೆ ಸುರೇಂದ್ರ ಯಾದವ್ ವೃತ್ತಿಯಲ್ಲಿ ಪೇಂಟರ್. ತಾಯಿ ಜ್ಞಾನಿದೇವಿ ಗೃಹಿಣಿ. ದಂಪತಿಗೆ ಇನ್ನೂ ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ.

ಖುಷ್ಬೂ ನಾಪತ್ತೆಯಾದ ಕೆಲವೇ ಗಂಟೆಗಳ ನಂತರ ಜ್ಞಾನಿದೇವಿಯವರು ಅಕ್ಟೋಬರ್ 5 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಆರು ತಿಂಗಳಿಂದ ಖುಷ್ಬೂಳನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಮುಯಿನ್‌ನೊಂದಿಗೆ ಮಗಳು ಓಡಿಹೋಗಿದ್ದಾಳೆ ಎಂದು ಜ್ಞಾನಿದೇವಿ ಶಂಕೆ ವ್ಯಕ್ತಪಡಿಸಿದ್ದರು.

ಈ ದೂರಿನಲ್ಲಿ ಧಾರ್ಮಿಕ ಮತಾಂತರವನ್ನು ಆರೋಪಿಸಿರಲಿಲ್ಲ. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಖುಷ್ಬೂಗಾಗಿ ಹುಡುಕಾಟ ಆರಂಭಿಸಿದ್ದರು. ಮೂರು ದಿನಗಳ ನಂತರ ಅಕ್ಟೋಬರ್ 8ರಂದು ಖುಷ್ಬೂ ಹಿಂತಿರುಗಿದ್ದರು. ತಾನು ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಕುಟುಂಬಕ್ಕೆ ತಿಳಿಸಿದ್ದರು.

ಜ್ಞಾನಿದೇವಿ ಮತ್ತು ಸುರೇಂದ್ರ ಯಾದವ್‌ ತನ್ನ ಮಗಳೊಂದಿಗೆ ಚರ್ಚೆಗಿಳಿದರು. ಪೋಷಕರ ಮಾತಿಗೆ ಖುಷ್ಬೂ ಅಸಮ್ಮತಿ ಸೂಚಿಸಿದರು. ಬಲವಂತದ ಮತಾಂತರವನ್ನು ಆರೋಪಿಸಿ ಜ್ಞಾನಿದೇವಿ ಅಕ್ಟೋಬರ್ 13ರಂದು ಮತ್ತೊಂದು ಪೊಲೀಸ್ ದೂರು ದಾಖಲಿಸಿದ್ದಾರೆ. ಹೊಸ ದೂರಿನ ಅನ್ವಯ ಪೊಲೀಸರು ಹೊಸ ಕಾಯ್ದೆಯ ಸೆಕ್ಷನ್ 5ಅನ್ನು ಪ್ರಯೋಗಿಸಿ ಪ್ರಕರಣ ದಾಖಲಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಉತ್ತರ) ವಿನಾಯಕ ಪಾಟೀಲ್ ಡೆಕ್ಕನ್‌ ಹೆರಾಲ್ಡ್‌ಗೆ ಪ್ರತಿಕ್ರಿಯಿಸಿ, “ನಾವು ಹೊಸ ಕಾನೂನಿನ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಇದು ಮದುವೆಯ ಭರವಸೆಯ ಮೇಲೆ ಧಾರ್ಮಿಕ ಮತಾಂತರ ಮಾಡಿದ ಪ್ರಕರಣವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಹುಡುಗಿ ತನ್ನ ಸ್ವಂತ ಇಚ್ಛೆಯ ಮೇರೆಗೆ ಇಸ್ಲಾಂಗೆ ಮತಾಂತರಗೊಂಡಂತೆ ತೋರುತ್ತಿದೆ. ಆದರೆ ಹೊಸ ಕಾನೂನಿನ ಅಡಿಯಲ್ಲಿ ನಿಗದಿಪಡಿಸಿದ ವಿಧಾನವನ್ನು ಮತಾಂತರಕ್ಕೂ ಮುನ್ನ ಅನುಸರಿಸಲಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿರುವುದುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

ಹೊಸ ಕಾನೂನಿನ ಪ್ರಕಾರ, ”ಧರ್ಮವನ್ನು ಬದಲಾಯಿಸಲು ಬಯಸುವ ಯಾವುದೇ ವ್ಯಕ್ತಿ ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್-1ರಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ನೀಡಬೇಕಾಗುತ್ತದೆ.”

ಮತಾಂತರವಾಗುವ ವ್ಯಕ್ತಿಯು ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್ II ಅನ್ನು ಸಲ್ಲಿಸಬೇಕು. ಪ್ರಸ್ತಾವಿತ ಧಾರ್ಮಿಕ ಮತಾಂತರಕ್ಕೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕರೆ ಮಾಡಬೇಕಿರುತ್ತದೆ.

30 ದಿನಗಳೊಳಗೆ ಆಕ್ಷೇಪಣೆಗಳು ಬಂದಲ್ಲಿ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಬೇಕು. ಈ ವಿಚಾರಣೆಯು ಉದ್ದೇಶಿತ ಪರಿವರ್ತನೆಯ ನಿಜವಾದ ಉದ್ದೇಶ ಮತ್ತು ಕಾರಣವನ್ನು ಪರಿಶೀಲಿಸುತ್ತದೆ.

ವಿಚಾರಣೆಯು ಈ ಕಾಯಿದೆಯಡಿ ಪ್ರಕರಣವನ್ನು ಗುರುತಿಸಿದರೆ, ಜಿಲ್ಲಾಧಿಕಾರಿಗಳು ಕ್ರಿಮಿನಲ್ ಕ್ರಮವನ್ನು ಪ್ರಾರಂಭಿಸಲು ಪೊಲೀಸರಿಗೆ ಸೂಚಿಸುತ್ತಾರೆ. ಪ್ರಸ್ತುತ ಪ್ರಕರಣದಲ್ಲಿ ಮತಾಂತರಗೊಳ್ಳುವ ಮೊದಲು ದಂಪತಿ ಮದುವೆಯಾಗಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿರಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ಮುಯಿನ್ ಹುಡುಗಿಯನ್ನು ಆಂಧ್ರಪ್ರದೇಶದ ಪೆನುಕೊಂಡ ದರ್ಗಾಕ್ಕೆ ಕರೆದೊಯ್ದಿದ್ದು, ಅಲ್ಲಿ ಧಾರ್ಮಿಕ ಮತಾಂತರ ಸಮಾರಂಭ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಧರ್ಮವನ್ನು ಬದಲಿಸಿರುವುದು ಏತಕ್ಕೆ ಎಂದು ಪೊಲೀಸರು ಯುವತಿಯನ್ನು ಪ್ರಶ್ನಿಸಿದ್ದಾರೆ. ಆಕೆ ಬಲವಂತದ ಮತಾಂತರ ಆರೋಪವನ್ನು ನಿರಾಕರಿಸಿದ್ದಾಳೆ. ಯುವಕನ ಪೋಷಕರು ಪೊಲೀಸರಿಗೆ, “ಹೊಸ ಕಾನೂನಿನ ಬಗ್ಗೆ ತಿಳಿದಿಲ್ಲ ಮತ್ತು ಘಟನೆ ವಿಷಾದನೀಯ” ಎಂದಿದ್ದಾರೆ.

ಹೊಸ ಕಾನೂನಿನ ಸೆಕ್ಷನ್ 5 ರ ಪ್ರಕಾರ ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡವನ್ನು ವಿಧಿಸಲಾಗುತ್ತದೆ. ನ್ಯಾಯಾಲಯವು ಮುಯಿನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರವಾಗಿಲ್ಲವೇ ಕರ್ನಾಟಕ ಪೊಲೀಸ್ ಎಚ್ಚರದಿಂದ ಇದ್ದಾರೆ.. ಆದರೆ ಅವರಿಗೆ ಒಂದು ಸಾಮಾನ್ಯ ಜ್ಞಾನ ಇಲ್ಲ ಅನ್ನೋದು ತಿಳಿಯಿತು. ಸರ್ಕಾರದ ಈ ಕಾಯ್ದೆ ಏಷ್ಟು ಜನ ಸಾಮಾನ್ಯರಿಗೆ ಗೊತ್ತಿದೆ. ಅಂತ ಕೇಳಿ ಅವರಲ್ಲಿ ಉತ್ತರ ಇಲ್ಲ.. ಈ ಕಾಯ್ದೆ ಕೇವಲ ಒಮ್ಮೆ ಟಿವಿ ಅಲ್ಲಿ ಪ್ರಸಾರಕ್ಕೆ ಸೀಮಿತ. ಕಾಯ್ದೆ ಬಗ್ಗೆ ಜನ ಸಾಮಾನ್ಯರಲ್ಲಿ ಏಷ್ಟು ಅರಿವು ಮೂಡಿಸಿದರೆ ಎಂದು ತಿಳಿಯಬೇಕಿದೆ. ಮಾನ್ಯ ಗೌರಿ. ಕಾಂ ಸಂಸ್ಥೆ ಅವರೇ ದಯಮಾಡಿ ಒಮ್ಮೆ ನಮ್ಮ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂದರ್ಶನ ಮಾಡಿ ಈ ಮತಾಂತರ ಕಾಯ್ದೆ ಬಗ್ಗೆ ಸಾಮಾನ್ಯರಲ್ಲಿ ಎಷ್ಟರ ಮಟ್ಟಿಗೆ ಅರಿವು, ಮಾಹಿತಿ, ಜ್ಞಾನ ನೀಡಿದ್ದಾರೆ ಎಂದು ಪ್ರಶ್ನಿಸಿ ದಯವಿಟ್ಟು ತಿಳಿಸಲು ಕೇಳಿ ನನ್ನ ಒಂದು ಪುಟ್ಟ ಮನವಿ 🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...