Homeಕರ್ನಾಟಕಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

- Advertisement -
- Advertisement -

ಈ ವರ್ಷದ ಸೆಪ್ಟೆಂಬರ್ 30ರಂದು ಅಧಿಸೂಚನೆ ಹೊರಡಿಸಲಾದ ‘ಮತಾಂತರ ವಿರೋಧಿ ಕಾನೂನು’ ಎಂದೇ ಕರೆಯಲ್ಪಡುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯಡಿ ರಾಜ್ಯ ಪೊಲೀಸರು ಮೊದಲ ಪ್ರಕರಣವನ್ನು ದಾಖಲಿಸಿದ್ದಾರೆ.

ಯಶವಂತಪುರ ಪೊಲೀಸರು ಅಕ್ಟೋಬರ್ 13ರಂದು ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಬೆಂಗಳೂರಿನ ಬಿ.ಕೆ.ನಗರದ ನಿವಾಸಿ ಸೈಯದ್ ಮುಯಿನ್ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕನ್ ಸ್ಟಾಲ್ ನಡೆಸುತ್ತಿರುವ ಮುಯಿನ್, 18 ವರ್ಷದ ಖುಷ್ಬೂ ಎಂಬವರನ್ನು ಮದುವೆಯಾಗುವುದಾಗಿ ಆಮಿಷವೊಡ್ಡಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಯುವತಿಯು ಬಲವಂತದ ಮತಾಂತರವನ್ನು ನಿರಾಕರಿಸಿದ್ದಾಳೆ.

ಖುಷ್ಬೂ ಕುಟುಂಬ ಉತ್ತರ ಪ್ರದೇಶದ ಗೋರಖ್‌ಪುರ ಮೂಲದ್ದಾಗಿದ್ದು, ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಆಕೆಯ ತಂದೆ ಸುರೇಂದ್ರ ಯಾದವ್ ವೃತ್ತಿಯಲ್ಲಿ ಪೇಂಟರ್. ತಾಯಿ ಜ್ಞಾನಿದೇವಿ ಗೃಹಿಣಿ. ದಂಪತಿಗೆ ಇನ್ನೂ ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ.

ಖುಷ್ಬೂ ನಾಪತ್ತೆಯಾದ ಕೆಲವೇ ಗಂಟೆಗಳ ನಂತರ ಜ್ಞಾನಿದೇವಿಯವರು ಅಕ್ಟೋಬರ್ 5 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಆರು ತಿಂಗಳಿಂದ ಖುಷ್ಬೂಳನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಮುಯಿನ್‌ನೊಂದಿಗೆ ಮಗಳು ಓಡಿಹೋಗಿದ್ದಾಳೆ ಎಂದು ಜ್ಞಾನಿದೇವಿ ಶಂಕೆ ವ್ಯಕ್ತಪಡಿಸಿದ್ದರು.

ಈ ದೂರಿನಲ್ಲಿ ಧಾರ್ಮಿಕ ಮತಾಂತರವನ್ನು ಆರೋಪಿಸಿರಲಿಲ್ಲ. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಖುಷ್ಬೂಗಾಗಿ ಹುಡುಕಾಟ ಆರಂಭಿಸಿದ್ದರು. ಮೂರು ದಿನಗಳ ನಂತರ ಅಕ್ಟೋಬರ್ 8ರಂದು ಖುಷ್ಬೂ ಹಿಂತಿರುಗಿದ್ದರು. ತಾನು ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಕುಟುಂಬಕ್ಕೆ ತಿಳಿಸಿದ್ದರು.

ಜ್ಞಾನಿದೇವಿ ಮತ್ತು ಸುರೇಂದ್ರ ಯಾದವ್‌ ತನ್ನ ಮಗಳೊಂದಿಗೆ ಚರ್ಚೆಗಿಳಿದರು. ಪೋಷಕರ ಮಾತಿಗೆ ಖುಷ್ಬೂ ಅಸಮ್ಮತಿ ಸೂಚಿಸಿದರು. ಬಲವಂತದ ಮತಾಂತರವನ್ನು ಆರೋಪಿಸಿ ಜ್ಞಾನಿದೇವಿ ಅಕ್ಟೋಬರ್ 13ರಂದು ಮತ್ತೊಂದು ಪೊಲೀಸ್ ದೂರು ದಾಖಲಿಸಿದ್ದಾರೆ. ಹೊಸ ದೂರಿನ ಅನ್ವಯ ಪೊಲೀಸರು ಹೊಸ ಕಾಯ್ದೆಯ ಸೆಕ್ಷನ್ 5ಅನ್ನು ಪ್ರಯೋಗಿಸಿ ಪ್ರಕರಣ ದಾಖಲಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ (ಉತ್ತರ) ವಿನಾಯಕ ಪಾಟೀಲ್ ಡೆಕ್ಕನ್‌ ಹೆರಾಲ್ಡ್‌ಗೆ ಪ್ರತಿಕ್ರಿಯಿಸಿ, “ನಾವು ಹೊಸ ಕಾನೂನಿನ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಇದು ಮದುವೆಯ ಭರವಸೆಯ ಮೇಲೆ ಧಾರ್ಮಿಕ ಮತಾಂತರ ಮಾಡಿದ ಪ್ರಕರಣವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಹುಡುಗಿ ತನ್ನ ಸ್ವಂತ ಇಚ್ಛೆಯ ಮೇರೆಗೆ ಇಸ್ಲಾಂಗೆ ಮತಾಂತರಗೊಂಡಂತೆ ತೋರುತ್ತಿದೆ. ಆದರೆ ಹೊಸ ಕಾನೂನಿನ ಅಡಿಯಲ್ಲಿ ನಿಗದಿಪಡಿಸಿದ ವಿಧಾನವನ್ನು ಮತಾಂತರಕ್ಕೂ ಮುನ್ನ ಅನುಸರಿಸಲಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿರುವುದುದಾಗಿ ‘ಡಿಎಚ್‌’ ಉಲ್ಲೇಖಿಸಿದೆ.

ಹೊಸ ಕಾನೂನಿನ ಪ್ರಕಾರ, ”ಧರ್ಮವನ್ನು ಬದಲಾಯಿಸಲು ಬಯಸುವ ಯಾವುದೇ ವ್ಯಕ್ತಿ ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್-1ರಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ನೀಡಬೇಕಾಗುತ್ತದೆ.”

ಮತಾಂತರವಾಗುವ ವ್ಯಕ್ತಿಯು ಕನಿಷ್ಠ 30 ದಿನಗಳ ಮುಂಚಿತವಾಗಿ ಫಾರ್ಮ್ II ಅನ್ನು ಸಲ್ಲಿಸಬೇಕು. ಪ್ರಸ್ತಾವಿತ ಧಾರ್ಮಿಕ ಮತಾಂತರಕ್ಕೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕರೆ ಮಾಡಬೇಕಿರುತ್ತದೆ.

30 ದಿನಗಳೊಳಗೆ ಆಕ್ಷೇಪಣೆಗಳು ಬಂದಲ್ಲಿ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಚಾರಣೆ ನಡೆಸಬೇಕು. ಈ ವಿಚಾರಣೆಯು ಉದ್ದೇಶಿತ ಪರಿವರ್ತನೆಯ ನಿಜವಾದ ಉದ್ದೇಶ ಮತ್ತು ಕಾರಣವನ್ನು ಪರಿಶೀಲಿಸುತ್ತದೆ.

ವಿಚಾರಣೆಯು ಈ ಕಾಯಿದೆಯಡಿ ಪ್ರಕರಣವನ್ನು ಗುರುತಿಸಿದರೆ, ಜಿಲ್ಲಾಧಿಕಾರಿಗಳು ಕ್ರಿಮಿನಲ್ ಕ್ರಮವನ್ನು ಪ್ರಾರಂಭಿಸಲು ಪೊಲೀಸರಿಗೆ ಸೂಚಿಸುತ್ತಾರೆ. ಪ್ರಸ್ತುತ ಪ್ರಕರಣದಲ್ಲಿ ಮತಾಂತರಗೊಳ್ಳುವ ಮೊದಲು ದಂಪತಿ ಮದುವೆಯಾಗಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿರಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ಮುಯಿನ್ ಹುಡುಗಿಯನ್ನು ಆಂಧ್ರಪ್ರದೇಶದ ಪೆನುಕೊಂಡ ದರ್ಗಾಕ್ಕೆ ಕರೆದೊಯ್ದಿದ್ದು, ಅಲ್ಲಿ ಧಾರ್ಮಿಕ ಮತಾಂತರ ಸಮಾರಂಭ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಧರ್ಮವನ್ನು ಬದಲಿಸಿರುವುದು ಏತಕ್ಕೆ ಎಂದು ಪೊಲೀಸರು ಯುವತಿಯನ್ನು ಪ್ರಶ್ನಿಸಿದ್ದಾರೆ. ಆಕೆ ಬಲವಂತದ ಮತಾಂತರ ಆರೋಪವನ್ನು ನಿರಾಕರಿಸಿದ್ದಾಳೆ. ಯುವಕನ ಪೋಷಕರು ಪೊಲೀಸರಿಗೆ, “ಹೊಸ ಕಾನೂನಿನ ಬಗ್ಗೆ ತಿಳಿದಿಲ್ಲ ಮತ್ತು ಘಟನೆ ವಿಷಾದನೀಯ” ಎಂದಿದ್ದಾರೆ.

ಹೊಸ ಕಾನೂನಿನ ಸೆಕ್ಷನ್ 5 ರ ಪ್ರಕಾರ ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡವನ್ನು ವಿಧಿಸಲಾಗುತ್ತದೆ. ನ್ಯಾಯಾಲಯವು ಮುಯಿನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರವಾಗಿಲ್ಲವೇ ಕರ್ನಾಟಕ ಪೊಲೀಸ್ ಎಚ್ಚರದಿಂದ ಇದ್ದಾರೆ.. ಆದರೆ ಅವರಿಗೆ ಒಂದು ಸಾಮಾನ್ಯ ಜ್ಞಾನ ಇಲ್ಲ ಅನ್ನೋದು ತಿಳಿಯಿತು. ಸರ್ಕಾರದ ಈ ಕಾಯ್ದೆ ಏಷ್ಟು ಜನ ಸಾಮಾನ್ಯರಿಗೆ ಗೊತ್ತಿದೆ. ಅಂತ ಕೇಳಿ ಅವರಲ್ಲಿ ಉತ್ತರ ಇಲ್ಲ.. ಈ ಕಾಯ್ದೆ ಕೇವಲ ಒಮ್ಮೆ ಟಿವಿ ಅಲ್ಲಿ ಪ್ರಸಾರಕ್ಕೆ ಸೀಮಿತ. ಕಾಯ್ದೆ ಬಗ್ಗೆ ಜನ ಸಾಮಾನ್ಯರಲ್ಲಿ ಏಷ್ಟು ಅರಿವು ಮೂಡಿಸಿದರೆ ಎಂದು ತಿಳಿಯಬೇಕಿದೆ. ಮಾನ್ಯ ಗೌರಿ. ಕಾಂ ಸಂಸ್ಥೆ ಅವರೇ ದಯಮಾಡಿ ಒಮ್ಮೆ ನಮ್ಮ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂದರ್ಶನ ಮಾಡಿ ಈ ಮತಾಂತರ ಕಾಯ್ದೆ ಬಗ್ಗೆ ಸಾಮಾನ್ಯರಲ್ಲಿ ಎಷ್ಟರ ಮಟ್ಟಿಗೆ ಅರಿವು, ಮಾಹಿತಿ, ಜ್ಞಾನ ನೀಡಿದ್ದಾರೆ ಎಂದು ಪ್ರಶ್ನಿಸಿ ದಯವಿಟ್ಟು ತಿಳಿಸಲು ಕೇಳಿ ನನ್ನ ಒಂದು ಪುಟ್ಟ ಮನವಿ 🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...