Homeಮುಖಪುಟಅಮೆರಿಕದ ಇತಿಹಾಸದಲ್ಲಿ ಮೊದಲ ಪ್ರಕರಣ: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ಅಮೆರಿಕದ ಇತಿಹಾಸದಲ್ಲಿ ಮೊದಲ ಪ್ರಕರಣ: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

- Advertisement -
- Advertisement -

2020ರ ಜಾರ್ಜಿಯಾ ಚುನಾವಣಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ. ಆದರೆ ಕೂಡಲೇ 200,000 ಡಾಲರ್ ಬಾಂಡ್ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.

ಅಮೆರಿಕದ 2020ರ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ತಲೆಕೆಳಗಾಗಿಸಲು ಇತರೆ 18 ಜನರೊಂದಿಗೆ ಸೇರಿಕೊಂಡು ಪಿತೂರಿ ನಡೆಸಿದ್ದರು ಎಂಬ ಆರೋಪ ಟ್ರಂಪ್ ಮೇಲಿದೆ. ಅವರು ಅಟ್ಲಾಂಟಾದ ಫುಲ್ಟೋನ್ ಕೌಂಟಿ ಜೈಲಿನ ಒಳಗೆ ಸರಿಸುಮಾರು 30 ನಿಮಿಷ ಕಳೆದರು. ಬಳಿಕ ಬಿಡುಗಡೆಯಾಗಿ ಬೆಂಗಾವಲು ವಾಹನದಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು.

ಈ ಪ್ರಕರಣದಲ್ಲಿ ಉಳಿದ ಆರೋಪಿಗಳಂತೆಯೇ ಶರಣಾಗತರಾದ 77 ವರ್ಷದ ಟ್ರಂಪ್, ಬಂಧನ ಪ್ರಕ್ರಿಯೆ ವೇಳೆ ಮಗ್ ಶಾಟ್ (ಭುಜದ ಮೇಲಿನ ಮುಖದ ಚಿತ್ರ) ಫೋಟೋ ತೆಗೆಸಿಕೊಳ್ಳುವಂತಾಗಿದೆ.

ಅಟ್ಲಾಂಟಾ ಜೈಲಿನಲ್ಲಿನ ಟ್ರಂಪ್ ಅವರ ಚಿತ್ರವನ್ನು ಜಾರ್ಜಿಯಾದ ಫುಲ್ಫಾನ್ ಕೌಂಟಿಯ ಮೆಫ್ ಕಚೇರಿ ಬಿಡುಗಡೆ ಮಾಡಿದೆ. ಪೆರಿಫ್ ಕಚೇರಿ ಬಿಡುಗಡೆ ಮಾಡಿರುವ ಚಿತ್ರದಲ್ಲಿ ಕಡು ನೀಲಿ ಸೂಟ್, ಬಿಳಿ ಅಂಗಿ ಮತ್ತು ಕೆಂಪು ಟೈ ತೊಟ್ಟಿದ್ದ ಟ್ರಂಪ್, ಕ್ಯಾಮೆರಾ ಕಡೆ ಮುಖ ಗಂಟಿಕ್ಕಿಕೊಂಡಿರುವುದನ್ನು ನೋಡಬಹುದು. ಅಮೆರಿಕದ ಇತಿಹಾಸದಲ್ಲಿ ಹಾಲಿ ಅಥವಾ ಯಾವುದೇ ಮಾಜಿ ಅಧ್ಯಕ್ಷರು ಈ ರೀತಿ ಜೈಲಿಗೆ ಹೋಗಿದ್ದು ಇದು ಮೊದಲ ನಿದರ್ಶನವಾಗಿದೆ.

ಕಳೆದ ಮಾರ್ಚ್‌ನಿಂದ ಟ್ರಂಪ್‌ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳಲ್ಲಿ ಇದು ನಾಲ್ಕನೆಯದಾಗಿದೆ. ಫಾರಿಡಾ, ವಾಷಿಂಗ್ಟನ್‌ನಲ್ಲಿಯೂ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಟ್ರಂಪ್

ಶರಣಾಗುತ್ತೇನೆ ಎಂದಿದ್ದ ಟ್ರಂಪ್

ತಮ್ಮ ಬಂಧನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ”ಇದು ಅಮೆರಿಕಕ್ಕೆ ದುಃಖದ ದಿನ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ”ಇಲ್ಲಿ ನಡೆದಿರುವುದು ನ್ಯಾಯದ ಅಣಕ. ನಾನು ಯಾವ ತಪ್ಪೂ ಮಾಡಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಸ್ವಂತ ಟ್ರುತ್ ಸಾಮಾಜಿಕ ಜಾಲತಾಣದಲ್ಲಿ ಮಗ್ ಶಾಟ್ ಫೋಟೋ ಹಂಚಿಕೊಂಡಿರುವ ಟ್ರಂಪ್, ‘ಚುನಾವಣೆಯಲ್ಲಿ ಹಸ್ತಕ್ಷೇಪ’ ಎಂಬ ಅಡಿ ಶೀರ್ಷಿಕೆ ನೀಡಿದ್ದಾರೆ. ಅದರ ಜತೆ ತಮ್ಮ ಪ್ರಚಾರದ ವೆಬ್‌ಸೈಟ್‌ನ ಕೊಂಡಿ ಪೋಸ್ಟ್ ಮಾಡಿದ್ದಾರೆ. 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ನಾಮನಿರ್ದೇಶನಕ್ಕೆ ಟ್ರಂಪ್ ಮುಂಚೂಣಿಯಲ್ಲಿದ್ದಾರೆ.

ಫುಲ್ಟೋನ್ ಕೌಂಟಿ ಜೈಲಿನಲ್ಲಿ ಟ್ರಂಪ್ ಅವರಿಗೆ ಕೈದಿ ಸಂಖ್ಯೆ ”PO1135809” ನೀಡಲಾಗಿತ್ತು. ಅವರ ಎತ್ತರ 6.3 ಅಡಿ, ತೂಕ 97 ಕೆಜಿ ಎಂದು ನಮೂದಿಸಲಾಗಿದ್ದು, ಅವರ ಕೂದಲಿನ ಬಣ್ಣವನ್ನು ಹೊಂಬಣ್ಣ ಅಥವಾ ಸ್ಟ್ರಾಬೆರ್ರಿ ಎಂದು ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...