Homeಮುಖಪುಟದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ಈ ವಿಮಾನ, ಲಾರ್ಜ್ ಏರ್ಕ್ರಾಫ್ಟ್ ಇನ್ಫ್ರಾರೆಡ್ ಕೌಂಟರ್ ಮೆಶರ್ಸ್ ಎಂಬ ಅತ್ಯಾಧುನಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಹಾಗೂ ಸ್ವಯಂ ರಕ್ಷಣಾ ಸೂಟ್‌ಗಳನ್ನು ಒಳಗೊಂಡಿದೆ.

- Advertisement -
- Advertisement -

ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಯಂತಹ ಗಣ್ಯವಕ್ತಿಗಳು ಪ್ರಯಾಣಿಸಲೆಂದೇ ವಿಶೇಷವಾಗಿ ತಯಾರಿಸಲಾಗಿರುವ B777(ಏರ್​ ಇಂಡಿಯಾ ಒನ್) ವಿಮಾನ ಇಂದು ಅಮೆರಿಕಾದಿಂದ ದೆಹಲಿಗೆ ಬಂದಿಳಿದಿದೆ.

ಏರ್‌ಕ್ರಾಪ್ಟ್‌ ಚಿಹ್ನೆ ಎಂದೇ ಗುರುತಿಸಿರುವ ಈ ಏರ್‌ ಇಂಡಿಯಾ ಒನ್ ವಿಮಾನ ಅಮೆರಿಕದ ಟೆಕ್ಸಾಸ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ವಿಮಾನ ತಯಾರಕ ಕಂಪನಿ ಬೋಯಿಂಗ್​​ ಕಳೆದ ಆಗಸ್ಟ್​ನಲ್ಲೇ ಏರ್​ ಇಂಡಿಯಾಗೆ ವಿಮಾನವನ್ನ ಹಸ್ತಾಂತರಿಸಬೇಕಿತ್ತು.ಆದರೆ ತಾಂತ್ರಿಕ ಕಾರಣ, ಕೊರೊನಾ ಲಾಕ್‌ಡೌನ್ ಕಾರಣದಿಂದ ವಿಮಾನದ ಆಗಮನ ತಡವಾಗಿದೆ. ಗಣ್ಯವ್ಯಕ್ತಿಗಳು ಪ್ರಯಾಣಿಸಲು ವಿಶೇಷವಾಗಿ ನಿರ್ಮಿಸಲಾದ ಇಂಥದ್ದೇ ಮತ್ತೊಂದು ಬಿ 777 ವಿಮಾನವೂ ಮುಂದಿನ ದಿನಗಳಲ್ಲಿ ಭಾರತಕ್ಕೆ ಬರಲಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ಪ್ರಸ್ತುತ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಗಳು  ಏರ್​ ಇಂಡಿಯಾದ ಬಿ747 ವಿಮಾನವನ್ನ ಪ್ರಯಾಣಕ್ಕಾಗಿ ಬಳಸುತ್ತಿದ್ದು, ಇದನ್ನ ಏರ್​ ಇಂಡಿಯಾ ಪೈಲಟ್​ಗಳೇ ಚಾಲನೆ ಮಾಡುತ್ತಾರೆ. ಆದರೆ ಹೊಸದಾಗಿ ಆಗಮಿಸಿರುವ ವಿಶೇಷ ವಿಮಾನವನ್ನ ಏರ್​ ಇಂಡಿಯಾ ಪೈಲಟ್​ಗಳ ಬದಲಾಗಿ ಭಾರತೀಯ ವಾಯುಸೇನೆಯ ಪೈಲಟ್​​ಗಳು ಚಾಲನೆ ಮಾಡಲಿದ್ದಾರೆ.

ಈ ವಿಮಾನ, ಲಾರ್ಜ್ ಏರ್ಕ್ರಾಫ್ಟ್ ಇನ್ಫ್ರಾರೆಡ್ ಕೌಂಟರ್ ಮೆಶರ್ಸ್ ಎಂಬ ಅತ್ಯಾಧುನಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಹಾಗೂ ಸ್ವಯಂ ರಕ್ಷಣಾ ಸೂಟ್‌ಗಳನ್ನು ಒಳಗೊಂಡಿದೆ. ಹೊಸ ವಿಮಾನವು ಇಂಧನ ತುಂಬಲು ನಡುವೆ ಎಲ್ಲೂ ಇಳಿಯದೆ 17 ಗಂಟೆಗಳ ಕಾಲ ನಿರಂತರವಾಗಿ ಹಾರಬಲ್ಲದು.

ಈ ಎರಡೂ ವಿಮಾನಗಳು ವಿವಿಐಪಿಗಳು ಸಂಚರಿಸುವ ಸುಸಜ್ಜಿತ ವಿಮಾನಗಳನ್ನಾಗಿಸಿ ಮಾರ್ಪಡಿಸುವ ಮುನ್ನ 2018 ರಲ್ಲಿ ಏರ್ ಇಂಡಿಯಾದ ವಾಣಿಜ್ಯ ವಿಭಾಗದಲ್ಲಿದ್ದವು. ಈ ಎರಡು ವಿಮಾನಗಳ ಬೆಲೆ ₹ 8600 ಕೋಟಿ.

ವಿಮಾನದಲ್ಲಿ ಅಳವಡಿಸಲಾಗಿರುವ ಸುಧಾರಿತ ಸಂವಹನ ವ್ಯವಸ್ಥೆಯಿಂದಾಗಿ, ಪ್ರಧಾನಿ ಅಥವಾ ರಾಷ್ಟ್ರಪತಿಗಳು ಹ್ಯಾಕ್ ಆಗುವ ಚಿಂತೆ ಇಲ್ಲದೆ ಸಿಬ್ಬಂದಿಯೊಂದಿಗೆ ವಿಡಿಯೋ ಅಥವಾ ಆಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸಲು ಸಾಧ್ಯವಾಗುತ್ತದೆ.


ಇದನ್ನೂ ಓದಿ: ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...