Homeಕರ್ನಾಟಕವಿಧಾನಸೌಧದ ಆವರಣದಲ್ಲಿ ಚೊಚ್ಚಲ 'ಪುಸ್ತಕ ಮೇಳ' ಆರಂಭ

ವಿಧಾನಸೌಧದ ಆವರಣದಲ್ಲಿ ಚೊಚ್ಚಲ ‘ಪುಸ್ತಕ ಮೇಳ’ ಆರಂಭ

- Advertisement -
- Advertisement -

ಮೊಟ್ಟ ಮೊದಲ ಬಾರಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಗುರುವಾರ (ಫೆ.27) ಸಂಜೆ ಉದ್ಘಾಟನೆಗೊಂಡಿದೆ.

ಇಂದಿನಿಂದ (ಫೆ.28) ಮಾರ್ಚ್ 3ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸುಮಾರು 150ಕ್ಕೂ ಹೆಚ್ಚು ಮಳಿಗೆಗಳಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಇದರ ಜೊತೆಗೆ ಸಂವಾದ, ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ.

ವಿವಿಧ ಪ್ರಕಾಶನ ಸಂಸ್ಥೆಗಳ ಮಳಿಗೆಗಳ ಜೊತೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ವಿವಿಧ ಅಕಾಡೆಮಿಗಳಿಗೆ ಸಂಬಂಧಿಸಿದ ಮಳಿಗೆಗಳೂ ಮೇಳದಲ್ಲಿ ಇದ್ದು, ಕನ್ನಡ ಹಾಗೂ ಇತರೆ ಎಲ್ಲ ಭಾಷೆಗಳ ಪುಸ್ತಕಗಳ ಮಾರಾಟವೂ ಇರಲಿದೆ. ಸಾಹಿತ್ಯ, ಕಲೆ, ಸಂಗೀತ, ರಾಜಕೀಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳ ಪ್ರಮುಖರು ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಮೇಳದಲ್ಲಿ ಒಂದು ಮಳಿಗೆ ಇರಲಿದೆ. ಇಲ್ಲಿ ವಿವಿಧ ಲೇಖಕರ ಪುಸ್ತಕಗಳು ಬಿಡುಗಡೆಯಾಗಲಿದೆ. ಮೇಳದಲ್ಲಿ ಪ್ರತಿದಿನ ಸಂಜೆ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಆಹಾರ ಮೇಳವೂ ಇರಲಿದೆ ಎಂದು ಸರ್ಕಾರ ಹೇಳಿದೆ.

ವಿವಿಧ ವಿಷಯಗಳಲ್ಲಿ ಸಂವಾದಗೋಷ್ಠಿ

ಎರಡು ವೇದಿಕೆಗಳಲ್ಲಿ ಸಂವಾದ ಗೋಷ್ಠಿಗಳು ನಡೆಯಲಿವೆ. ಎರಡನೇ ದಿನವಾದ ಶುಕ್ರವಾರ (ಫೆ.28) ನಾಲ್ಕು ಸಂವಾದಗಳು ನಡೆಯಲಿವೆ. ‘ದೃಶ್ಯ ಮತ್ತು ಮುದ್ರಣ ಮಾಧ್ಯಮಗಳ ಜವಾಬ್ದಾರಿ’, ‘ಸಮಕಾಲೀನ ಪ್ರಕಾಶನ ಕ್ಷೇತ್ರದ ಸವಾಲುಗಳು’, ‘ನಾಯಕತ್ವ–ಇಂದು ಮತ್ತು ನಾಳೆ ಹಾಗೂ ‘ನೆಲಮೂಲದಿಂದ ಅಂತರಿಕ್ಷದವರೆಗೆ’ ವಿಷಯದ ಮೇಲೆ ಸಂವಾದ ಹಮ್ಮಿಕೊಳ್ಳಲಾಗಿದೆ. ಸಂಜೆ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಶನಿವಾರ (ಮಾ.1) ನಾಲ್ಕು ಸಂವಾದ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ‘ಪರಿಸರದ ಅಳಿವು–ಉಳಿವು’, ‘ಸಂವಿಧಾನದ ಹಿರಿಮೆ ಗರಿಮೆ ಹಾಗೂ ಅರಿವು’, ‘ಕ್ರೀಡೆ ಮತ್ತು ಸಾಹಿತ್ಯ’, ‘ಕೃತಕ ಬುದ್ಧಿಮತ್ತೆ/ ಸೈಬರ್ ಭದ್ರತೆ’ ವಿಷಯಗಳ ಮೇಲೆ ಸಂವಾದ ನಡೆಯಲಿದೆ.

ಭಾನುವಾರ (ಮಾ.2) ‘ಕನ್ನಡ ಸಾಹಿತ್ಯದಲ್ಲಿ ಸರ್ವ ಸಮಭಾವದ ಚಿಂತನೆಗಳು’, ‘ಮಕ್ಕಳ ಸಾಹಿತ್ಯ’, ‘ಅಂಗಾಂಗ ದಾನದ ಅರಿವು’, ‘ಸಾಹಿತ್ಯ ಮತ್ತು ಚಲನಚಿತ್ರ’ ಹಾಗೂ ‘ಓದಿನ ಸುಖ’ ವಿಷಯದ ಮೇಲೆ ಸಂವಾದಗಳು ನಡೆಯಲಿವೆ. ಬಳಿಕ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಸಂಜೆ 5 ಗಂಟೆಯಿಂದ ಅರ್ಜುನ್ ಜನ್ಯ, ಸಾಧುಕೋಕಿಲ ಹಾಗೂ ಸಂಗಡಿಗರಿಂದ ಸಂಗೀತ ಸಂಜೆ ನಡೆಯಲಿದೆ.

ಸಾರ್ವಜನಿಕರಿಗೆ ಮುಕ್ತ ಪ್ರವೇಶ

ಪುಸ್ತಕ ಮೇಳದ ಪ್ರಯುಕ್ತ ಇದೇ ಮೊದಲ ಬಾರಿಗೆ ವಿಧಾನಸೌಧದ ಆವರಣಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ವಿಧಾನಸೌಧದ ಎಲ್ಲಾ ಗೇಟ್‌ಗಳಿಂದ ಸಾರ್ವಜನಿಕರು ಒಳಗೆ ಹೋಗಬಹುದು. ಫ್ರೀಡಂ ಪಾರ್ಕ್ ಮತ್ತು ಸರ್ಕಾರಿ ಕಾಲೇಜು (ಗ್ಯಾಸ್ ಕಾಲೇಜು) ಆವರಣದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ : ಸಿಎಂ ಘೋಷಣೆ

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಗುರುವಾರ ಸಂಜೆ ಮೇಳ ಉದ್ಘಾಟಿಸಿ ಮಾತನಾಡಿದ ಅವರು, “ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ” ಎಂದು ಕರೆ ನೀಡಿದ್ದಾರೆ.

“ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ. ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು” ಎಂದು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಹೊಸ ಕಾರ್ಯಕ್ರಮ ಏರ್ಪಡಿಸಿದ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಮತ್ತು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಭಿನಂದಿಸಿದ್ದಾರೆ.

“ತಂತ್ರಜ್ಞಾನವು ಬಹಳಷ್ಟು ಮುಂದುವರೆದಿದೆ. ಈಗ ChatGPTಯಂತಹ ತಂತ್ರಜಾಗಳಲ್ಲಿ ತಕ್ಷಣವೇ ಬಹಳಷ್ಟು ಮಾಹಿತಿಗಳನ್ನು ಪಡೆಯಬಹುದು. ಆದರೂ, ನಾವು ನಮ್ಮ ಬೇರುಗಳನ್ನು ಮರೆತರೆ, ನಮಗೆ ಫಲ ಸಿಗುವುದಿಲ್ಲ ಎಂಬ ಮಾತಿದೆ. ಪುಸ್ತಕಗಳು ನಮ್ಮ ಬೇರುಗಳು. ಐತಿಹಾಸಿಕ ವಿಷಯಗಳನ್ನು ಅವುಗಳ ಮೂಲಕ ಮಾತ್ರ ಕಲಿಯಬಹುದು” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಪುಸ್ತಕ ಮೇಳ ಏರ್ಪಡಿಸಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಮತ್ತು ಸರ್ಕಾರವನ್ನು ಶ್ಲಾಘಿಸಿದಿ ಸಾಹಿತಿ ಬೋಲ್ವಾರ್ ಮೊಹಮ್ಮದ್ ಕುಂಞಿ ಅವರು ಸರ್ಕಾರ ಓದುವ ಸಂಸ್ಕೃತಿಯನ್ನು ಉತ್ತೇಜಿಸುವಂತೆ ಸಲಹೆ ನೀಡಿದ್ದಾರೆ.

“2021ರ ನಂತರ 3-4 ವರ್ಷಗಳಿಂದ, ಸರ್ಕಾರ ಪುಸ್ತಕಗಳನ್ನು ಖರೀದಿಸದ ಕಾರಣ ಕನ್ನಡ ಪ್ರಕಾಶಕರು ಕಷ್ಟಪಡುತ್ತಿದ್ದಾರೆ. ಸರ್ಕಾರ ಅವರ ಪುಸ್ತಕಗಳನ್ನು ಖರೀದಿಸಬೇಕು. ಸ್ಪೀಕರ್ ಯು ಟಿ ಖಾದರ್ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಖರೀದಿಸಲು ನಿರ್ದೇಶಿಸಬೇಕು” ಎಂದು ಮೊಹಮ್ಮದ್ ಕುಂಞಿ ಮನವಿ ಮಾಡಿದ್ದಾರೆ.

ಕನ್ನಡದ ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ, ಗೋವಾದ ಸಾಹಿತಿ ದಾಮೋಧರ್ ಮೌಜೊ ಹಾಗೂ ಸಾಹಿತಿಗಳಾದ ಪ್ರಶಾಂತ್ ಮಾರ್ತಾ, ವಸುದೇಂದ್ರ, ಬೊಳ್ವಾರ್ ಮಹಮ್ಮದ್ ಕುಂಞಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

ಪುಸ್ತಕ ಮೇಳದಲ್ಲಿ ಗೌರಿ ಮೀಡಿಯಾ ಟ್ರಸ್ಟ್‌ ಮಳಿಗೆ ಸಂಖ್ಯೆ -142

ವಿಧಾನಸೌಧದ ಪುಸ್ತಕ ಮೇಳದಲ್ಲಿ ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಾಶನದ ಪುಸ್ತಕಗಳು ಮತ್ತು ಗೌರಿ ಲಂಕೇಶ್ ನ್ಯಾಯಪಥ ಪಾಕ್ಷಿಕ, ಇತರ ಪ್ರಕಾಶನಗಳ ಪುಸ್ತಕಗಳು ಮಳಿಗೆ ಸಂಖ್ಯೆ 142ರಲ್ಲಿ ಲಭ್ಯವಿದೆ. ಭೇಟಿ ಕೊಡಿ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಿ ನಮ್ಮನ್ನು ಬೆಂಬಲಿಸಿ  

ರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...