Homeಕರ್ನಾಟಕವಿಧಾನಸೌಧದ ಆವರಣದಲ್ಲಿ ಚೊಚ್ಚಲ 'ಪುಸ್ತಕ ಮೇಳ' ಆರಂಭ

ವಿಧಾನಸೌಧದ ಆವರಣದಲ್ಲಿ ಚೊಚ್ಚಲ ‘ಪುಸ್ತಕ ಮೇಳ’ ಆರಂಭ

- Advertisement -
- Advertisement -

ಮೊಟ್ಟ ಮೊದಲ ಬಾರಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಗುರುವಾರ (ಫೆ.27) ಸಂಜೆ ಉದ್ಘಾಟನೆಗೊಂಡಿದೆ.

ಇಂದಿನಿಂದ (ಫೆ.28) ಮಾರ್ಚ್ 3ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸುಮಾರು 150ಕ್ಕೂ ಹೆಚ್ಚು ಮಳಿಗೆಗಳಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಇದರ ಜೊತೆಗೆ ಸಂವಾದ, ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ.

ವಿವಿಧ ಪ್ರಕಾಶನ ಸಂಸ್ಥೆಗಳ ಮಳಿಗೆಗಳ ಜೊತೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ವಿವಿಧ ಅಕಾಡೆಮಿಗಳಿಗೆ ಸಂಬಂಧಿಸಿದ ಮಳಿಗೆಗಳೂ ಮೇಳದಲ್ಲಿ ಇದ್ದು, ಕನ್ನಡ ಹಾಗೂ ಇತರೆ ಎಲ್ಲ ಭಾಷೆಗಳ ಪುಸ್ತಕಗಳ ಮಾರಾಟವೂ ಇರಲಿದೆ. ಸಾಹಿತ್ಯ, ಕಲೆ, ಸಂಗೀತ, ರಾಜಕೀಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳ ಪ್ರಮುಖರು ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಮೇಳದಲ್ಲಿ ಒಂದು ಮಳಿಗೆ ಇರಲಿದೆ. ಇಲ್ಲಿ ವಿವಿಧ ಲೇಖಕರ ಪುಸ್ತಕಗಳು ಬಿಡುಗಡೆಯಾಗಲಿದೆ. ಮೇಳದಲ್ಲಿ ಪ್ರತಿದಿನ ಸಂಜೆ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಆಹಾರ ಮೇಳವೂ ಇರಲಿದೆ ಎಂದು ಸರ್ಕಾರ ಹೇಳಿದೆ.

ವಿವಿಧ ವಿಷಯಗಳಲ್ಲಿ ಸಂವಾದಗೋಷ್ಠಿ

ಎರಡು ವೇದಿಕೆಗಳಲ್ಲಿ ಸಂವಾದ ಗೋಷ್ಠಿಗಳು ನಡೆಯಲಿವೆ. ಎರಡನೇ ದಿನವಾದ ಶುಕ್ರವಾರ (ಫೆ.28) ನಾಲ್ಕು ಸಂವಾದಗಳು ನಡೆಯಲಿವೆ. ‘ದೃಶ್ಯ ಮತ್ತು ಮುದ್ರಣ ಮಾಧ್ಯಮಗಳ ಜವಾಬ್ದಾರಿ’, ‘ಸಮಕಾಲೀನ ಪ್ರಕಾಶನ ಕ್ಷೇತ್ರದ ಸವಾಲುಗಳು’, ‘ನಾಯಕತ್ವ–ಇಂದು ಮತ್ತು ನಾಳೆ ಹಾಗೂ ‘ನೆಲಮೂಲದಿಂದ ಅಂತರಿಕ್ಷದವರೆಗೆ’ ವಿಷಯದ ಮೇಲೆ ಸಂವಾದ ಹಮ್ಮಿಕೊಳ್ಳಲಾಗಿದೆ. ಸಂಜೆ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಶನಿವಾರ (ಮಾ.1) ನಾಲ್ಕು ಸಂವಾದ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ‘ಪರಿಸರದ ಅಳಿವು–ಉಳಿವು’, ‘ಸಂವಿಧಾನದ ಹಿರಿಮೆ ಗರಿಮೆ ಹಾಗೂ ಅರಿವು’, ‘ಕ್ರೀಡೆ ಮತ್ತು ಸಾಹಿತ್ಯ’, ‘ಕೃತಕ ಬುದ್ಧಿಮತ್ತೆ/ ಸೈಬರ್ ಭದ್ರತೆ’ ವಿಷಯಗಳ ಮೇಲೆ ಸಂವಾದ ನಡೆಯಲಿದೆ.

ಭಾನುವಾರ (ಮಾ.2) ‘ಕನ್ನಡ ಸಾಹಿತ್ಯದಲ್ಲಿ ಸರ್ವ ಸಮಭಾವದ ಚಿಂತನೆಗಳು’, ‘ಮಕ್ಕಳ ಸಾಹಿತ್ಯ’, ‘ಅಂಗಾಂಗ ದಾನದ ಅರಿವು’, ‘ಸಾಹಿತ್ಯ ಮತ್ತು ಚಲನಚಿತ್ರ’ ಹಾಗೂ ‘ಓದಿನ ಸುಖ’ ವಿಷಯದ ಮೇಲೆ ಸಂವಾದಗಳು ನಡೆಯಲಿವೆ. ಬಳಿಕ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಸಂಜೆ 5 ಗಂಟೆಯಿಂದ ಅರ್ಜುನ್ ಜನ್ಯ, ಸಾಧುಕೋಕಿಲ ಹಾಗೂ ಸಂಗಡಿಗರಿಂದ ಸಂಗೀತ ಸಂಜೆ ನಡೆಯಲಿದೆ.

ಸಾರ್ವಜನಿಕರಿಗೆ ಮುಕ್ತ ಪ್ರವೇಶ

ಪುಸ್ತಕ ಮೇಳದ ಪ್ರಯುಕ್ತ ಇದೇ ಮೊದಲ ಬಾರಿಗೆ ವಿಧಾನಸೌಧದ ಆವರಣಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ವಿಧಾನಸೌಧದ ಎಲ್ಲಾ ಗೇಟ್‌ಗಳಿಂದ ಸಾರ್ವಜನಿಕರು ಒಳಗೆ ಹೋಗಬಹುದು. ಫ್ರೀಡಂ ಪಾರ್ಕ್ ಮತ್ತು ಸರ್ಕಾರಿ ಕಾಲೇಜು (ಗ್ಯಾಸ್ ಕಾಲೇಜು) ಆವರಣದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ : ಸಿಎಂ ಘೋಷಣೆ

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಗುರುವಾರ ಸಂಜೆ ಮೇಳ ಉದ್ಘಾಟಿಸಿ ಮಾತನಾಡಿದ ಅವರು, “ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ” ಎಂದು ಕರೆ ನೀಡಿದ್ದಾರೆ.

“ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ. ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು” ಎಂದು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಹೊಸ ಕಾರ್ಯಕ್ರಮ ಏರ್ಪಡಿಸಿದ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಮತ್ತು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಭಿನಂದಿಸಿದ್ದಾರೆ.

“ತಂತ್ರಜ್ಞಾನವು ಬಹಳಷ್ಟು ಮುಂದುವರೆದಿದೆ. ಈಗ ChatGPTಯಂತಹ ತಂತ್ರಜಾಗಳಲ್ಲಿ ತಕ್ಷಣವೇ ಬಹಳಷ್ಟು ಮಾಹಿತಿಗಳನ್ನು ಪಡೆಯಬಹುದು. ಆದರೂ, ನಾವು ನಮ್ಮ ಬೇರುಗಳನ್ನು ಮರೆತರೆ, ನಮಗೆ ಫಲ ಸಿಗುವುದಿಲ್ಲ ಎಂಬ ಮಾತಿದೆ. ಪುಸ್ತಕಗಳು ನಮ್ಮ ಬೇರುಗಳು. ಐತಿಹಾಸಿಕ ವಿಷಯಗಳನ್ನು ಅವುಗಳ ಮೂಲಕ ಮಾತ್ರ ಕಲಿಯಬಹುದು” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಪುಸ್ತಕ ಮೇಳ ಏರ್ಪಡಿಸಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಮತ್ತು ಸರ್ಕಾರವನ್ನು ಶ್ಲಾಘಿಸಿದಿ ಸಾಹಿತಿ ಬೋಲ್ವಾರ್ ಮೊಹಮ್ಮದ್ ಕುಂಞಿ ಅವರು ಸರ್ಕಾರ ಓದುವ ಸಂಸ್ಕೃತಿಯನ್ನು ಉತ್ತೇಜಿಸುವಂತೆ ಸಲಹೆ ನೀಡಿದ್ದಾರೆ.

“2021ರ ನಂತರ 3-4 ವರ್ಷಗಳಿಂದ, ಸರ್ಕಾರ ಪುಸ್ತಕಗಳನ್ನು ಖರೀದಿಸದ ಕಾರಣ ಕನ್ನಡ ಪ್ರಕಾಶಕರು ಕಷ್ಟಪಡುತ್ತಿದ್ದಾರೆ. ಸರ್ಕಾರ ಅವರ ಪುಸ್ತಕಗಳನ್ನು ಖರೀದಿಸಬೇಕು. ಸ್ಪೀಕರ್ ಯು ಟಿ ಖಾದರ್ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಖರೀದಿಸಲು ನಿರ್ದೇಶಿಸಬೇಕು” ಎಂದು ಮೊಹಮ್ಮದ್ ಕುಂಞಿ ಮನವಿ ಮಾಡಿದ್ದಾರೆ.

ಕನ್ನಡದ ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ, ಗೋವಾದ ಸಾಹಿತಿ ದಾಮೋಧರ್ ಮೌಜೊ ಹಾಗೂ ಸಾಹಿತಿಗಳಾದ ಪ್ರಶಾಂತ್ ಮಾರ್ತಾ, ವಸುದೇಂದ್ರ, ಬೊಳ್ವಾರ್ ಮಹಮ್ಮದ್ ಕುಂಞಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

ಪುಸ್ತಕ ಮೇಳದಲ್ಲಿ ಗೌರಿ ಮೀಡಿಯಾ ಟ್ರಸ್ಟ್‌ ಮಳಿಗೆ ಸಂಖ್ಯೆ -142

ವಿಧಾನಸೌಧದ ಪುಸ್ತಕ ಮೇಳದಲ್ಲಿ ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಾಶನದ ಪುಸ್ತಕಗಳು ಮತ್ತು ಗೌರಿ ಲಂಕೇಶ್ ನ್ಯಾಯಪಥ ಪಾಕ್ಷಿಕ, ಇತರ ಪ್ರಕಾಶನಗಳ ಪುಸ್ತಕಗಳು ಮಳಿಗೆ ಸಂಖ್ಯೆ 142ರಲ್ಲಿ ಲಭ್ಯವಿದೆ. ಭೇಟಿ ಕೊಡಿ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಿ ನಮ್ಮನ್ನು ಬೆಂಬಲಿಸಿ  

ರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...