Homeಕರ್ನಾಟಕವಿಧಾನಸೌಧದ ಆವರಣದಲ್ಲಿ ಚೊಚ್ಚಲ 'ಪುಸ್ತಕ ಮೇಳ' ಆರಂಭ

ವಿಧಾನಸೌಧದ ಆವರಣದಲ್ಲಿ ಚೊಚ್ಚಲ ‘ಪುಸ್ತಕ ಮೇಳ’ ಆರಂಭ

- Advertisement -
- Advertisement -

ಮೊಟ್ಟ ಮೊದಲ ಬಾರಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಗುರುವಾರ (ಫೆ.27) ಸಂಜೆ ಉದ್ಘಾಟನೆಗೊಂಡಿದೆ.

ಇಂದಿನಿಂದ (ಫೆ.28) ಮಾರ್ಚ್ 3ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸುಮಾರು 150ಕ್ಕೂ ಹೆಚ್ಚು ಮಳಿಗೆಗಳಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಇದರ ಜೊತೆಗೆ ಸಂವಾದ, ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ.

ವಿವಿಧ ಪ್ರಕಾಶನ ಸಂಸ್ಥೆಗಳ ಮಳಿಗೆಗಳ ಜೊತೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ವಿವಿಧ ಅಕಾಡೆಮಿಗಳಿಗೆ ಸಂಬಂಧಿಸಿದ ಮಳಿಗೆಗಳೂ ಮೇಳದಲ್ಲಿ ಇದ್ದು, ಕನ್ನಡ ಹಾಗೂ ಇತರೆ ಎಲ್ಲ ಭಾಷೆಗಳ ಪುಸ್ತಕಗಳ ಮಾರಾಟವೂ ಇರಲಿದೆ. ಸಾಹಿತ್ಯ, ಕಲೆ, ಸಂಗೀತ, ರಾಜಕೀಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳ ಪ್ರಮುಖರು ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಮೇಳದಲ್ಲಿ ಒಂದು ಮಳಿಗೆ ಇರಲಿದೆ. ಇಲ್ಲಿ ವಿವಿಧ ಲೇಖಕರ ಪುಸ್ತಕಗಳು ಬಿಡುಗಡೆಯಾಗಲಿದೆ. ಮೇಳದಲ್ಲಿ ಪ್ರತಿದಿನ ಸಂಜೆ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಆಹಾರ ಮೇಳವೂ ಇರಲಿದೆ ಎಂದು ಸರ್ಕಾರ ಹೇಳಿದೆ.

ವಿವಿಧ ವಿಷಯಗಳಲ್ಲಿ ಸಂವಾದಗೋಷ್ಠಿ

ಎರಡು ವೇದಿಕೆಗಳಲ್ಲಿ ಸಂವಾದ ಗೋಷ್ಠಿಗಳು ನಡೆಯಲಿವೆ. ಎರಡನೇ ದಿನವಾದ ಶುಕ್ರವಾರ (ಫೆ.28) ನಾಲ್ಕು ಸಂವಾದಗಳು ನಡೆಯಲಿವೆ. ‘ದೃಶ್ಯ ಮತ್ತು ಮುದ್ರಣ ಮಾಧ್ಯಮಗಳ ಜವಾಬ್ದಾರಿ’, ‘ಸಮಕಾಲೀನ ಪ್ರಕಾಶನ ಕ್ಷೇತ್ರದ ಸವಾಲುಗಳು’, ‘ನಾಯಕತ್ವ–ಇಂದು ಮತ್ತು ನಾಳೆ ಹಾಗೂ ‘ನೆಲಮೂಲದಿಂದ ಅಂತರಿಕ್ಷದವರೆಗೆ’ ವಿಷಯದ ಮೇಲೆ ಸಂವಾದ ಹಮ್ಮಿಕೊಳ್ಳಲಾಗಿದೆ. ಸಂಜೆ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಶನಿವಾರ (ಮಾ.1) ನಾಲ್ಕು ಸಂವಾದ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ‘ಪರಿಸರದ ಅಳಿವು–ಉಳಿವು’, ‘ಸಂವಿಧಾನದ ಹಿರಿಮೆ ಗರಿಮೆ ಹಾಗೂ ಅರಿವು’, ‘ಕ್ರೀಡೆ ಮತ್ತು ಸಾಹಿತ್ಯ’, ‘ಕೃತಕ ಬುದ್ಧಿಮತ್ತೆ/ ಸೈಬರ್ ಭದ್ರತೆ’ ವಿಷಯಗಳ ಮೇಲೆ ಸಂವಾದ ನಡೆಯಲಿದೆ.

ಭಾನುವಾರ (ಮಾ.2) ‘ಕನ್ನಡ ಸಾಹಿತ್ಯದಲ್ಲಿ ಸರ್ವ ಸಮಭಾವದ ಚಿಂತನೆಗಳು’, ‘ಮಕ್ಕಳ ಸಾಹಿತ್ಯ’, ‘ಅಂಗಾಂಗ ದಾನದ ಅರಿವು’, ‘ಸಾಹಿತ್ಯ ಮತ್ತು ಚಲನಚಿತ್ರ’ ಹಾಗೂ ‘ಓದಿನ ಸುಖ’ ವಿಷಯದ ಮೇಲೆ ಸಂವಾದಗಳು ನಡೆಯಲಿವೆ. ಬಳಿಕ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಸಂಜೆ 5 ಗಂಟೆಯಿಂದ ಅರ್ಜುನ್ ಜನ್ಯ, ಸಾಧುಕೋಕಿಲ ಹಾಗೂ ಸಂಗಡಿಗರಿಂದ ಸಂಗೀತ ಸಂಜೆ ನಡೆಯಲಿದೆ.

ಸಾರ್ವಜನಿಕರಿಗೆ ಮುಕ್ತ ಪ್ರವೇಶ

ಪುಸ್ತಕ ಮೇಳದ ಪ್ರಯುಕ್ತ ಇದೇ ಮೊದಲ ಬಾರಿಗೆ ವಿಧಾನಸೌಧದ ಆವರಣಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ವಿಧಾನಸೌಧದ ಎಲ್ಲಾ ಗೇಟ್‌ಗಳಿಂದ ಸಾರ್ವಜನಿಕರು ಒಳಗೆ ಹೋಗಬಹುದು. ಫ್ರೀಡಂ ಪಾರ್ಕ್ ಮತ್ತು ಸರ್ಕಾರಿ ಕಾಲೇಜು (ಗ್ಯಾಸ್ ಕಾಲೇಜು) ಆವರಣದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ : ಸಿಎಂ ಘೋಷಣೆ

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಗುರುವಾರ ಸಂಜೆ ಮೇಳ ಉದ್ಘಾಟಿಸಿ ಮಾತನಾಡಿದ ಅವರು, “ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ” ಎಂದು ಕರೆ ನೀಡಿದ್ದಾರೆ.

“ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ. ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು” ಎಂದು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಹೊಸ ಕಾರ್ಯಕ್ರಮ ಏರ್ಪಡಿಸಿದ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಮತ್ತು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಭಿನಂದಿಸಿದ್ದಾರೆ.

“ತಂತ್ರಜ್ಞಾನವು ಬಹಳಷ್ಟು ಮುಂದುವರೆದಿದೆ. ಈಗ ChatGPTಯಂತಹ ತಂತ್ರಜಾಗಳಲ್ಲಿ ತಕ್ಷಣವೇ ಬಹಳಷ್ಟು ಮಾಹಿತಿಗಳನ್ನು ಪಡೆಯಬಹುದು. ಆದರೂ, ನಾವು ನಮ್ಮ ಬೇರುಗಳನ್ನು ಮರೆತರೆ, ನಮಗೆ ಫಲ ಸಿಗುವುದಿಲ್ಲ ಎಂಬ ಮಾತಿದೆ. ಪುಸ್ತಕಗಳು ನಮ್ಮ ಬೇರುಗಳು. ಐತಿಹಾಸಿಕ ವಿಷಯಗಳನ್ನು ಅವುಗಳ ಮೂಲಕ ಮಾತ್ರ ಕಲಿಯಬಹುದು” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಪುಸ್ತಕ ಮೇಳ ಏರ್ಪಡಿಸಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಮತ್ತು ಸರ್ಕಾರವನ್ನು ಶ್ಲಾಘಿಸಿದಿ ಸಾಹಿತಿ ಬೋಲ್ವಾರ್ ಮೊಹಮ್ಮದ್ ಕುಂಞಿ ಅವರು ಸರ್ಕಾರ ಓದುವ ಸಂಸ್ಕೃತಿಯನ್ನು ಉತ್ತೇಜಿಸುವಂತೆ ಸಲಹೆ ನೀಡಿದ್ದಾರೆ.

“2021ರ ನಂತರ 3-4 ವರ್ಷಗಳಿಂದ, ಸರ್ಕಾರ ಪುಸ್ತಕಗಳನ್ನು ಖರೀದಿಸದ ಕಾರಣ ಕನ್ನಡ ಪ್ರಕಾಶಕರು ಕಷ್ಟಪಡುತ್ತಿದ್ದಾರೆ. ಸರ್ಕಾರ ಅವರ ಪುಸ್ತಕಗಳನ್ನು ಖರೀದಿಸಬೇಕು. ಸ್ಪೀಕರ್ ಯು ಟಿ ಖಾದರ್ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಖರೀದಿಸಲು ನಿರ್ದೇಶಿಸಬೇಕು” ಎಂದು ಮೊಹಮ್ಮದ್ ಕುಂಞಿ ಮನವಿ ಮಾಡಿದ್ದಾರೆ.

ಕನ್ನಡದ ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ, ಗೋವಾದ ಸಾಹಿತಿ ದಾಮೋಧರ್ ಮೌಜೊ ಹಾಗೂ ಸಾಹಿತಿಗಳಾದ ಪ್ರಶಾಂತ್ ಮಾರ್ತಾ, ವಸುದೇಂದ್ರ, ಬೊಳ್ವಾರ್ ಮಹಮ್ಮದ್ ಕುಂಞಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

ಪುಸ್ತಕ ಮೇಳದಲ್ಲಿ ಗೌರಿ ಮೀಡಿಯಾ ಟ್ರಸ್ಟ್‌ ಮಳಿಗೆ ಸಂಖ್ಯೆ -142

ವಿಧಾನಸೌಧದ ಪುಸ್ತಕ ಮೇಳದಲ್ಲಿ ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಾಶನದ ಪುಸ್ತಕಗಳು ಮತ್ತು ಗೌರಿ ಲಂಕೇಶ್ ನ್ಯಾಯಪಥ ಪಾಕ್ಷಿಕ, ಇತರ ಪ್ರಕಾಶನಗಳ ಪುಸ್ತಕಗಳು ಮಳಿಗೆ ಸಂಖ್ಯೆ 142ರಲ್ಲಿ ಲಭ್ಯವಿದೆ. ಭೇಟಿ ಕೊಡಿ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಿ ನಮ್ಮನ್ನು ಬೆಂಬಲಿಸಿ  

ರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...