Homeಕ್ರೀಡೆಒಲಂಪಿಕ್ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ.

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಒಂದಾದರೂ ಚಿನ್ನ ಗೆಲ್ಲಲಿ ಎಂದು ಬಹಳಷ್ಟು ಮಂದಿ ಹಂಬಲಿಸುತ್ತಿದ್ದಾರೆ. ಆದರೆ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಟೋಕಿಯೋ ಒಲಂಪಿಕ್ಸ್‌ ಒಂದರಲ್ಲೇ ಬರೋಬ್ಬರಿ 4 ಚಿನ್ನ ಮತ್ತು 3 ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾಳೆ.

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್ “ಮಹಿಳೆಯರ 50 ಮೀಟರ್ ಮತ್ತು 100 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಹಾಗೂ ಮಹಿಳೆಯರ 4×100 ಫ್ರೀಸ್ಟೈಲ್ ರಿಲೇ ಮತ್ತು ಮೆಡ್ಲೆ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಅದೇ ರೀತಿಯಲ್ಲಿ ಮಹಿಳೆಯರ 100 ಮೀಟರ್ ಬಟರ್‌ಫ್ಲೈ, ಮಹಿಳೆಯರ 4×100 ಮೀಟರ್ ಮೆಡ್ಲೆ ರಿಲೇ, ಮಹಿಳೆಯರ 4×200 ಫ್ರೀಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಈಸ್ಟ್ ಜರ್ಮನ್‌ನ ಕ್ರಿಸ್ಟಿನ್ ಒಟ್ಟೊ ಅವರು 1952 ರ ಒಲಂಪಿಕ್ಸ್‌ನಲ್ಲಿ ಆರು ಪದಕಗಳನ್ನು ಗೆದ್ದಿದ್ದರು. ಇದನ್ನು 2008 ರಲ್ಲಿ ಅಮೇರಿಕನ್ ನಟಾಲಿ ಕಗ್ಲಿನ್ ಸರಿಗಟ್ಟಿದ್ದರು. ಆದರೆ ಈ ಭಾರಿ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಅವರಿಬ್ಬರ ದಾಖಲೆಯನ್ನು ಮುರಿದಿದ್ದಾರೆ.

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ. 2004ರ ಒಲಂಪಿಕ್ಸ್‌ನಲ್ಲಿ ಅವರು ಆರು ಚಿನ್ನ ಮತ್ತು ಎರಡು ಕಂಚಿನ ಪದಕ ಗೆದ್ದಿದ್ದರೆ, 2008 ರಲ್ಲಿ ಬರೋಬ್ಬರಿ 8 ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ವಿಭಾಗದಲ್ಲಿ ಅಮೆರಿಕದವರೆ ಆದ ಮಾರ್ಕ್ ಸ್ಪಿಟ್ಜ್, ವಿಲ್ಲೀಸ್ ಎ. ಲೀ ಮತ್ತು ಮ್ಯಾಥ್ಯು ಬಿಯಾಂಡಿ ಒಂದೆ ಒಲಂಪಿಕ್ಸ್‌ನಲ್ಲಿ ತಲಾ 7 ಪದಕಗಳನ್ನು ಗೆದ್ದು ನಂತರದ ಸ್ಥಾನದಲ್ಲಿದ್ದಾರೆ.

ಒಟ್ಟಾರೆ ಒಲಂಪಿಕ್ಸ್‌ ಆಟಗಳಲ್ಲಿ ಅತಿ ಹೆಚ್ಚು ಪದಕ ಗೆದ್ದ ದಾಖಲೆ ಕೂಡ ಮೆಕಲ್ ಫೆಲ್ಪ್ಸ್ ಹೆಸರಿನಲ್ಲಿದೆ. ಅವರು ಒಟ್ಟು ನಾಲ್ಕು ಒಲಂಪಿಕ್ಸ್‌ನಲ್ಲಿ ಭಾಗವಹಿಸಿ 28 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 23 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕಗಳು ಅದರಲ್ಲಿ ಸೇರಿವೆ.


ಇದನ್ನೂ ಓದಿ: ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...