Homeಕ್ರೀಡೆಒಲಂಪಿಕ್ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ.

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಒಂದಾದರೂ ಚಿನ್ನ ಗೆಲ್ಲಲಿ ಎಂದು ಬಹಳಷ್ಟು ಮಂದಿ ಹಂಬಲಿಸುತ್ತಿದ್ದಾರೆ. ಆದರೆ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಟೋಕಿಯೋ ಒಲಂಪಿಕ್ಸ್‌ ಒಂದರಲ್ಲೇ ಬರೋಬ್ಬರಿ 4 ಚಿನ್ನ ಮತ್ತು 3 ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾಳೆ.

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್ “ಮಹಿಳೆಯರ 50 ಮೀಟರ್ ಮತ್ತು 100 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಹಾಗೂ ಮಹಿಳೆಯರ 4×100 ಫ್ರೀಸ್ಟೈಲ್ ರಿಲೇ ಮತ್ತು ಮೆಡ್ಲೆ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಅದೇ ರೀತಿಯಲ್ಲಿ ಮಹಿಳೆಯರ 100 ಮೀಟರ್ ಬಟರ್‌ಫ್ಲೈ, ಮಹಿಳೆಯರ 4×100 ಮೀಟರ್ ಮೆಡ್ಲೆ ರಿಲೇ, ಮಹಿಳೆಯರ 4×200 ಫ್ರೀಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಈಸ್ಟ್ ಜರ್ಮನ್‌ನ ಕ್ರಿಸ್ಟಿನ್ ಒಟ್ಟೊ ಅವರು 1952 ರ ಒಲಂಪಿಕ್ಸ್‌ನಲ್ಲಿ ಆರು ಪದಕಗಳನ್ನು ಗೆದ್ದಿದ್ದರು. ಇದನ್ನು 2008 ರಲ್ಲಿ ಅಮೇರಿಕನ್ ನಟಾಲಿ ಕಗ್ಲಿನ್ ಸರಿಗಟ್ಟಿದ್ದರು. ಆದರೆ ಈ ಭಾರಿ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಅವರಿಬ್ಬರ ದಾಖಲೆಯನ್ನು ಮುರಿದಿದ್ದಾರೆ.

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ. 2004ರ ಒಲಂಪಿಕ್ಸ್‌ನಲ್ಲಿ ಅವರು ಆರು ಚಿನ್ನ ಮತ್ತು ಎರಡು ಕಂಚಿನ ಪದಕ ಗೆದ್ದಿದ್ದರೆ, 2008 ರಲ್ಲಿ ಬರೋಬ್ಬರಿ 8 ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ವಿಭಾಗದಲ್ಲಿ ಅಮೆರಿಕದವರೆ ಆದ ಮಾರ್ಕ್ ಸ್ಪಿಟ್ಜ್, ವಿಲ್ಲೀಸ್ ಎ. ಲೀ ಮತ್ತು ಮ್ಯಾಥ್ಯು ಬಿಯಾಂಡಿ ಒಂದೆ ಒಲಂಪಿಕ್ಸ್‌ನಲ್ಲಿ ತಲಾ 7 ಪದಕಗಳನ್ನು ಗೆದ್ದು ನಂತರದ ಸ್ಥಾನದಲ್ಲಿದ್ದಾರೆ.

ಒಟ್ಟಾರೆ ಒಲಂಪಿಕ್ಸ್‌ ಆಟಗಳಲ್ಲಿ ಅತಿ ಹೆಚ್ಚು ಪದಕ ಗೆದ್ದ ದಾಖಲೆ ಕೂಡ ಮೆಕಲ್ ಫೆಲ್ಪ್ಸ್ ಹೆಸರಿನಲ್ಲಿದೆ. ಅವರು ಒಟ್ಟು ನಾಲ್ಕು ಒಲಂಪಿಕ್ಸ್‌ನಲ್ಲಿ ಭಾಗವಹಿಸಿ 28 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 23 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕಗಳು ಅದರಲ್ಲಿ ಸೇರಿವೆ.


ಇದನ್ನೂ ಓದಿ: ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...