Homeಕ್ರೀಡೆಒಲಂಪಿಕ್ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ.

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಒಂದಾದರೂ ಚಿನ್ನ ಗೆಲ್ಲಲಿ ಎಂದು ಬಹಳಷ್ಟು ಮಂದಿ ಹಂಬಲಿಸುತ್ತಿದ್ದಾರೆ. ಆದರೆ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಟೋಕಿಯೋ ಒಲಂಪಿಕ್ಸ್‌ ಒಂದರಲ್ಲೇ ಬರೋಬ್ಬರಿ 4 ಚಿನ್ನ ಮತ್ತು 3 ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾಳೆ.

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್ “ಮಹಿಳೆಯರ 50 ಮೀಟರ್ ಮತ್ತು 100 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಹಾಗೂ ಮಹಿಳೆಯರ 4×100 ಫ್ರೀಸ್ಟೈಲ್ ರಿಲೇ ಮತ್ತು ಮೆಡ್ಲೆ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಅದೇ ರೀತಿಯಲ್ಲಿ ಮಹಿಳೆಯರ 100 ಮೀಟರ್ ಬಟರ್‌ಫ್ಲೈ, ಮಹಿಳೆಯರ 4×100 ಮೀಟರ್ ಮೆಡ್ಲೆ ರಿಲೇ, ಮಹಿಳೆಯರ 4×200 ಫ್ರೀಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಈಸ್ಟ್ ಜರ್ಮನ್‌ನ ಕ್ರಿಸ್ಟಿನ್ ಒಟ್ಟೊ ಅವರು 1952 ರ ಒಲಂಪಿಕ್ಸ್‌ನಲ್ಲಿ ಆರು ಪದಕಗಳನ್ನು ಗೆದ್ದಿದ್ದರು. ಇದನ್ನು 2008 ರಲ್ಲಿ ಅಮೇರಿಕನ್ ನಟಾಲಿ ಕಗ್ಲಿನ್ ಸರಿಗಟ್ಟಿದ್ದರು. ಆದರೆ ಈ ಭಾರಿ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಅವರಿಬ್ಬರ ದಾಖಲೆಯನ್ನು ಮುರಿದಿದ್ದಾರೆ.

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ. 2004ರ ಒಲಂಪಿಕ್ಸ್‌ನಲ್ಲಿ ಅವರು ಆರು ಚಿನ್ನ ಮತ್ತು ಎರಡು ಕಂಚಿನ ಪದಕ ಗೆದ್ದಿದ್ದರೆ, 2008 ರಲ್ಲಿ ಬರೋಬ್ಬರಿ 8 ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ವಿಭಾಗದಲ್ಲಿ ಅಮೆರಿಕದವರೆ ಆದ ಮಾರ್ಕ್ ಸ್ಪಿಟ್ಜ್, ವಿಲ್ಲೀಸ್ ಎ. ಲೀ ಮತ್ತು ಮ್ಯಾಥ್ಯು ಬಿಯಾಂಡಿ ಒಂದೆ ಒಲಂಪಿಕ್ಸ್‌ನಲ್ಲಿ ತಲಾ 7 ಪದಕಗಳನ್ನು ಗೆದ್ದು ನಂತರದ ಸ್ಥಾನದಲ್ಲಿದ್ದಾರೆ.

ಒಟ್ಟಾರೆ ಒಲಂಪಿಕ್ಸ್‌ ಆಟಗಳಲ್ಲಿ ಅತಿ ಹೆಚ್ಚು ಪದಕ ಗೆದ್ದ ದಾಖಲೆ ಕೂಡ ಮೆಕಲ್ ಫೆಲ್ಪ್ಸ್ ಹೆಸರಿನಲ್ಲಿದೆ. ಅವರು ಒಟ್ಟು ನಾಲ್ಕು ಒಲಂಪಿಕ್ಸ್‌ನಲ್ಲಿ ಭಾಗವಹಿಸಿ 28 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 23 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕಗಳು ಅದರಲ್ಲಿ ಸೇರಿವೆ.


ಇದನ್ನೂ ಓದಿ: ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...