Homeಕ್ರೀಡೆಒಲಂಪಿಕ್ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ.

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಒಂದಾದರೂ ಚಿನ್ನ ಗೆಲ್ಲಲಿ ಎಂದು ಬಹಳಷ್ಟು ಮಂದಿ ಹಂಬಲಿಸುತ್ತಿದ್ದಾರೆ. ಆದರೆ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಟೋಕಿಯೋ ಒಲಂಪಿಕ್ಸ್‌ ಒಂದರಲ್ಲೇ ಬರೋಬ್ಬರಿ 4 ಚಿನ್ನ ಮತ್ತು 3 ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾಳೆ.

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್ “ಮಹಿಳೆಯರ 50 ಮೀಟರ್ ಮತ್ತು 100 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಹಾಗೂ ಮಹಿಳೆಯರ 4×100 ಫ್ರೀಸ್ಟೈಲ್ ರಿಲೇ ಮತ್ತು ಮೆಡ್ಲೆ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಅದೇ ರೀತಿಯಲ್ಲಿ ಮಹಿಳೆಯರ 100 ಮೀಟರ್ ಬಟರ್‌ಫ್ಲೈ, ಮಹಿಳೆಯರ 4×100 ಮೀಟರ್ ಮೆಡ್ಲೆ ರಿಲೇ, ಮಹಿಳೆಯರ 4×200 ಫ್ರೀಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಈಸ್ಟ್ ಜರ್ಮನ್‌ನ ಕ್ರಿಸ್ಟಿನ್ ಒಟ್ಟೊ ಅವರು 1952 ರ ಒಲಂಪಿಕ್ಸ್‌ನಲ್ಲಿ ಆರು ಪದಕಗಳನ್ನು ಗೆದ್ದಿದ್ದರು. ಇದನ್ನು 2008 ರಲ್ಲಿ ಅಮೇರಿಕನ್ ನಟಾಲಿ ಕಗ್ಲಿನ್ ಸರಿಗಟ್ಟಿದ್ದರು. ಆದರೆ ಈ ಭಾರಿ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಅವರಿಬ್ಬರ ದಾಖಲೆಯನ್ನು ಮುರಿದಿದ್ದಾರೆ.

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ. 2004ರ ಒಲಂಪಿಕ್ಸ್‌ನಲ್ಲಿ ಅವರು ಆರು ಚಿನ್ನ ಮತ್ತು ಎರಡು ಕಂಚಿನ ಪದಕ ಗೆದ್ದಿದ್ದರೆ, 2008 ರಲ್ಲಿ ಬರೋಬ್ಬರಿ 8 ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ವಿಭಾಗದಲ್ಲಿ ಅಮೆರಿಕದವರೆ ಆದ ಮಾರ್ಕ್ ಸ್ಪಿಟ್ಜ್, ವಿಲ್ಲೀಸ್ ಎ. ಲೀ ಮತ್ತು ಮ್ಯಾಥ್ಯು ಬಿಯಾಂಡಿ ಒಂದೆ ಒಲಂಪಿಕ್ಸ್‌ನಲ್ಲಿ ತಲಾ 7 ಪದಕಗಳನ್ನು ಗೆದ್ದು ನಂತರದ ಸ್ಥಾನದಲ್ಲಿದ್ದಾರೆ.

ಒಟ್ಟಾರೆ ಒಲಂಪಿಕ್ಸ್‌ ಆಟಗಳಲ್ಲಿ ಅತಿ ಹೆಚ್ಚು ಪದಕ ಗೆದ್ದ ದಾಖಲೆ ಕೂಡ ಮೆಕಲ್ ಫೆಲ್ಪ್ಸ್ ಹೆಸರಿನಲ್ಲಿದೆ. ಅವರು ಒಟ್ಟು ನಾಲ್ಕು ಒಲಂಪಿಕ್ಸ್‌ನಲ್ಲಿ ಭಾಗವಹಿಸಿ 28 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 23 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕಗಳು ಅದರಲ್ಲಿ ಸೇರಿವೆ.


ಇದನ್ನೂ ಓದಿ: ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....