Homeಚಳವಳಿಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

ಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

- Advertisement -
- Advertisement -

ಕಳೆದ ಬಾರಿಯಂತೆ ಈ ಸಾರಿಯೂ ಗೌರಿ ಸ್ಮಾರಕ ಟ್ರಸ್ಟ್ ಗೌರಿ ನೆನಪಿನ ದಿನವನ್ನು ಸಾಂವಿಧಾನಿಕ ಮೌಲ್ಯಗಳಾದ ವಾಕ್ ಸ್ವಾತಂತ್ಯ ಮತ್ತು ಭಿನ್ನಮತದ ಹಕ್ಕನ್ನು ಎತ್ತಿಹಿಡಿಯುವ, ತನ್ಮೂಲಕ ಪ್ರಜಾತಂತ್ರವನ್ನು ಪೊರೆಯುವ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಅಲ್ಲದೆ ಪ್ರಭುತ್ವಕ್ಕೆ ಎದಿರಾಗಿ ಸತ್ಯವನ್ನು ಸಾರಿ ಹೇಳುವುದರ ಪ್ರಾಮುಖ್ಯತೆಯನ್ನೂ, ಅನಿವಾರ್ಯತೆಯನ್ನೂ ಈ ದಿನ ಪ್ರತಿನಿಧಿಸುತ್ತದೆ. ಈ ಆಶಯಕ್ಕೆ ಅನುಗುಣವಾಗಿ ಟ್ರಸ್ಟ್ ಗೌರಿ ಲಂಕೇಶ್ ಹೆಸರಿನಲ್ಲಿ ಒಂದು ವಾರ್ಷಿಕ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಪತ್ರಿಕೋದ್ಯಮಕ್ಕೆ ಘನತೆ ತರುವಂಥ, ಸಂಕಷ್ಟದ ಸಮಯದಲ್ಲೂ ತಮ್ಮ ವೃತ್ತಿಗೆ ಬದ್ಧತೆಯಿಂದ ದುಡಿವ, ನಿರ್ಭಿಡೆಯಿಂದ ವರದಿಮಾಡುವ ಪತ್ರಕರ್ತರಿಗೆ ನೀಡಬೇಕೆಂಬುದು ಟ್ರಸ್ಟಿನ ಆಶಯವಾಗಿದೆ ಎಂದು ಅಧ್ಯಕ್ಷರಾದ ಎಚ್.ಎಸ್.ದೊರೆಸ್ವಾಮಿ ಮತ್ತು ಕಾರ್ಯದರ್ಶಿಗಳಾದ ಕೆ.ಎಲ್.ಅಶೋಕ್ ತಿಳಿಸಿದರು.

ಟ್ರಸ್ಟ್ ನ ಹಿರಿಯ ಪತ್ರಕರ್ತರಾದ ಸಿದ್ಧಾರ್ಥ ವರದರಾಜನ್, ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ ವಾಡ್, ಹಾಗೂ ಕನ್ನಡದ ಖ್ಯಾತ ಚಿಂತಕ ಪ್ರೊ.ರಹಮತ್ ತರೀಕೆರೆಯವರು ಸದಸ್ಯರಾಗಿರುವ ಸಮಿತಿಯ ಸರ್ವಾನುಮತದ ನಿರ್ಧಾರದಂತೆ ನಾಡಿನ ಖ್ಯಾತ ಪತ್ರಕರ್ತ ಹಿಂದಿ ಎನ್.ಡಿ.ಟಿ.ವಿಯ ಹಿರಿಯ ವರದಿಗಾರರಾದ ಶ್ರೀಯುತ ರವೀಶ್ ಕುಮಾರ್ ಅವರನ್ನು ‘ಗೌರಿ ಪ್ರಶಸ್ತಿ’ಗೆ ಆಯ್ಕೆಮಾಡಲಾಗಿದೆ. ಇದಾದ ನಂತರ ರವೀಶ್ ಕುಮಾರ್ ಅವರಿಗೆ ಪ್ರತಿಷ್ಟಿತ ಮ್ಯಾಗಸೆಸೆ ಪ್ರಶಸ್ತಿಯೂ ಲಭಿಸಿದ್ದು ನಮಗೆ ಹೆಮ್ಮೆ ಎನಿಸಿದೆ ಎಂದರು.

ರವೀಶ್ ಕುಮಾರ್ ಅವರು ತಮ್ಮ ಹರಿತವಾದ ಸುದ್ದಿ ವಿಶ್ಲೇಷಣೆಗೆ ಮತ್ತು ರಾಜಿ ಇಲ್ಲದ ಸೆಕ್ಯುಲರ್ ನಿಲುವಿಗೆ ಬದ್ಧರಾಗಿದ್ದಾರಷ್ಟೇ ಅಲ್ಲದೆ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ವೃತ್ತಿ ಘನತೆಯನ್ನು ಎತ್ತಿಹಿಡಿಯುತ್ತಾ, ಪ್ರಜಾತಾಂತ್ರಿಕ ನಿಲುವಿಗೆ ಅಚಲವಾದ ನಿಷ್ಠಯನ್ನು ತೋರುತ್ತಾ ಬಂದಿದ್ದಾರೆ. ಇಂಥವರು ಗೌರಿ ಪ್ರಶಸ್ತಿಯ ಮೊದಲ ಪುರಸ್ಕೃತರು ಎಂಬುದು ನಮಗೆಲ್ಲಾ ಹೆಮ್ಮೆಯ ವಿಷಯ. ಪ್ರಶಸ್ತಿಯು ಗೌರವ ಫಲಕ ಮತ್ತು ಒಂದು ಲಕ್ಷ ರೂ.ಗಳ ಸನ್ಮಾನ ಧನವನ್ನು ಒಳಗೊಂಡಿರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶರ ಹತ್ಯೆಯಾಗಿ ಇಂದಿಗೆ ಎರಡು ವರ್ಷಗಳಾಗುತ್ತದೆ. ಈ ಭೀಕರ ಹತ್ಯೆ ದೇಶ ವಿದೇಶಗಳಲ್ಲಿ ತಲ್ಲಣ ಸೃಷ್ಟಿಸಿತಲ್ಲದೆ, ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣತೆ, ವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಯಾವ ಅನುಮಾನವೂ ಇಲ್ಲದಂತೆ ದೃಢೀಕರಿಸಿತು. ಗೌರಿ ಹತ್ಯೆಯನ್ನು ಕುರಿತು ವಿಚಾರಣೆ ನಡೆಸಿರುವ ವಿಶೇಷ ತನಿಖಾ ದಳ ಹಿಂದೂ ಮೂಲಭೂತವಾದಿ ಸಂಘಟನೆಯಾದ ‘ಸನಾತನ ಸಂಸ್ಥೆ’ಯ ಜತೆ ನಂಟಿರುವ ಹಲವಾರು ಮಂದಿಯನ್ನು ಆರೋಪಿಗಳನ್ನಾಗಿಸಿದೆ. ಅಲ್ಲದೆ ಇವರಿಗೂ ಮತ್ತು ಪ್ರೊ.ಕಲಬುರ್ಗಿ, ಗೋವಿಂದ ಪಾನ್ಸರೆ ಹಾಗೂ ಡಾ.ನರೇಂದ್ರ ಧಾಬೊಲ್ಕರ್ ಅವರ ಕೊಲೆಗೂ ಸಂಬಂಧವಿದೆ ಎಂಬ ಆಘಾತಕಾರಿ ಸುದ್ದಿಯನ್ನು ಹೊರಹಾಕಿದೆ. ಇದು ಸೆಕ್ಯುಲರ್ ಹಾಗೂ ವಿಚಾರವಾದದ ಮೇಲೆ ಮೂಲಭೂತವಾದಿಗಳು ನಡೆಸಿರುವ ವ್ಯವಸ್ಥಿತ ಸಂಚು ಎಂದು ತನಿಖೆ ಎತ್ತಿಹಿಡಿದಿದೆ; ಅಲ್ಲದೆ ಭಾರತ ಫ್ಯಾಸಿಸಂ ಕಡೆ ವಾಲುತ್ತಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ. ಕೋರ್ಟಿನಲ್ಲಿ ನಡೆಯುತ್ತಿರುವ ವಿಚಾರಣೆ ಒಂದು ತಾರ್ಕಿಕ ಘಟ್ಟವನ್ನು ಆದಷ್ಟು ಬೇಗ ತಲುಪಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಗೌರಿ ಸ್ಮಾರಕ ಟ್ರಸ್ಟ್ ಈ ಸಂದರ್ಭದಲ್ಲಿ ಒತ್ತಾಯಿಸುತ್ತದೆ ಎಂದು ಕೆ.ಎಲ್ ಅಶೋಕ್ ತಿಳಿಸಿದರು.

ಗೌರಿ ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 22ರ ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರು ನಗರದ ಟೌನ್ ಹಾಲ್ ನಲ್ಲಿ ನಡೆಯಲಿದೆ. ಅಂದು ಟ್ರಸ್ಟಿನ ಗೌರವ ಕಾರ್ಯದರ್ಶಿಗಳೂ, ಹಿರಿಯ ಭಾಷಾ ಶಾಸ್ತ್ರಜ್ಞರೂ ಆಗಿರುವ ಪ್ರೊ. ಗಣೇಶ ದೇವಿಯವರು ಗೌರಿ ನೆನಪಿನ ಉಪನ್ಯಾಸವನ್ನು ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರಿಯಾದ ಆಯ್ಕೆ. ಆಯ್ಕೆ ಸಮಿತಿಯಲ್ಲಿರುವವರೂ ಪ್ರಶಸ್ತಿಗೆ ಅರ್ಹರು. ಮುಖ್ಯವಾಗಿ ತೀಸ್ತಾ ಮತ್ತು ವರದರಾಜನ್! ರಹಮತ್ ತರಿಕೆರೆ ಅವರಿಗೆ ಸಾಹಿತ್ಯ ಪ್ರಶಸ್ತಿ ಕೊಡೋಣ,,?

  2. ನಿಜವಾಗಿಯೂ ರವಿಷ ಕುಮಾರ್ ಒಳ್ಳೆಯ ನಿರ್ಭಯ ಪತ್ರಕರ್ತರ ಪಾತ್ರ ವಹಿಸಿದ್ದಾರೆ, ಕೇವಲ ಅವರೊಬರೆ ನಿಜವಾದ ಸುದ್ದಿ ಹಾಗೂ ವೀಷಲ್ಲೆಶಣೆ ಕೊಡುವ ವೇಕ್ತಿ ಆಗಿದ್ದಾರೆ. ಅವರಿಗೆ ಆವರಿಸಿರುವುದರಿಂದ ತುಂಬಾ ಸಂತೋಷವಾಯಿತು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...