Homeಚಳವಳಿಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

ಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

- Advertisement -
- Advertisement -

ಕಳೆದ ಬಾರಿಯಂತೆ ಈ ಸಾರಿಯೂ ಗೌರಿ ಸ್ಮಾರಕ ಟ್ರಸ್ಟ್ ಗೌರಿ ನೆನಪಿನ ದಿನವನ್ನು ಸಾಂವಿಧಾನಿಕ ಮೌಲ್ಯಗಳಾದ ವಾಕ್ ಸ್ವಾತಂತ್ಯ ಮತ್ತು ಭಿನ್ನಮತದ ಹಕ್ಕನ್ನು ಎತ್ತಿಹಿಡಿಯುವ, ತನ್ಮೂಲಕ ಪ್ರಜಾತಂತ್ರವನ್ನು ಪೊರೆಯುವ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಅಲ್ಲದೆ ಪ್ರಭುತ್ವಕ್ಕೆ ಎದಿರಾಗಿ ಸತ್ಯವನ್ನು ಸಾರಿ ಹೇಳುವುದರ ಪ್ರಾಮುಖ್ಯತೆಯನ್ನೂ, ಅನಿವಾರ್ಯತೆಯನ್ನೂ ಈ ದಿನ ಪ್ರತಿನಿಧಿಸುತ್ತದೆ. ಈ ಆಶಯಕ್ಕೆ ಅನುಗುಣವಾಗಿ ಟ್ರಸ್ಟ್ ಗೌರಿ ಲಂಕೇಶ್ ಹೆಸರಿನಲ್ಲಿ ಒಂದು ವಾರ್ಷಿಕ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಪತ್ರಿಕೋದ್ಯಮಕ್ಕೆ ಘನತೆ ತರುವಂಥ, ಸಂಕಷ್ಟದ ಸಮಯದಲ್ಲೂ ತಮ್ಮ ವೃತ್ತಿಗೆ ಬದ್ಧತೆಯಿಂದ ದುಡಿವ, ನಿರ್ಭಿಡೆಯಿಂದ ವರದಿಮಾಡುವ ಪತ್ರಕರ್ತರಿಗೆ ನೀಡಬೇಕೆಂಬುದು ಟ್ರಸ್ಟಿನ ಆಶಯವಾಗಿದೆ ಎಂದು ಅಧ್ಯಕ್ಷರಾದ ಎಚ್.ಎಸ್.ದೊರೆಸ್ವಾಮಿ ಮತ್ತು ಕಾರ್ಯದರ್ಶಿಗಳಾದ ಕೆ.ಎಲ್.ಅಶೋಕ್ ತಿಳಿಸಿದರು.

ಟ್ರಸ್ಟ್ ನ ಹಿರಿಯ ಪತ್ರಕರ್ತರಾದ ಸಿದ್ಧಾರ್ಥ ವರದರಾಜನ್, ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ ವಾಡ್, ಹಾಗೂ ಕನ್ನಡದ ಖ್ಯಾತ ಚಿಂತಕ ಪ್ರೊ.ರಹಮತ್ ತರೀಕೆರೆಯವರು ಸದಸ್ಯರಾಗಿರುವ ಸಮಿತಿಯ ಸರ್ವಾನುಮತದ ನಿರ್ಧಾರದಂತೆ ನಾಡಿನ ಖ್ಯಾತ ಪತ್ರಕರ್ತ ಹಿಂದಿ ಎನ್.ಡಿ.ಟಿ.ವಿಯ ಹಿರಿಯ ವರದಿಗಾರರಾದ ಶ್ರೀಯುತ ರವೀಶ್ ಕುಮಾರ್ ಅವರನ್ನು ‘ಗೌರಿ ಪ್ರಶಸ್ತಿ’ಗೆ ಆಯ್ಕೆಮಾಡಲಾಗಿದೆ. ಇದಾದ ನಂತರ ರವೀಶ್ ಕುಮಾರ್ ಅವರಿಗೆ ಪ್ರತಿಷ್ಟಿತ ಮ್ಯಾಗಸೆಸೆ ಪ್ರಶಸ್ತಿಯೂ ಲಭಿಸಿದ್ದು ನಮಗೆ ಹೆಮ್ಮೆ ಎನಿಸಿದೆ ಎಂದರು.

ರವೀಶ್ ಕುಮಾರ್ ಅವರು ತಮ್ಮ ಹರಿತವಾದ ಸುದ್ದಿ ವಿಶ್ಲೇಷಣೆಗೆ ಮತ್ತು ರಾಜಿ ಇಲ್ಲದ ಸೆಕ್ಯುಲರ್ ನಿಲುವಿಗೆ ಬದ್ಧರಾಗಿದ್ದಾರಷ್ಟೇ ಅಲ್ಲದೆ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ವೃತ್ತಿ ಘನತೆಯನ್ನು ಎತ್ತಿಹಿಡಿಯುತ್ತಾ, ಪ್ರಜಾತಾಂತ್ರಿಕ ನಿಲುವಿಗೆ ಅಚಲವಾದ ನಿಷ್ಠಯನ್ನು ತೋರುತ್ತಾ ಬಂದಿದ್ದಾರೆ. ಇಂಥವರು ಗೌರಿ ಪ್ರಶಸ್ತಿಯ ಮೊದಲ ಪುರಸ್ಕೃತರು ಎಂಬುದು ನಮಗೆಲ್ಲಾ ಹೆಮ್ಮೆಯ ವಿಷಯ. ಪ್ರಶಸ್ತಿಯು ಗೌರವ ಫಲಕ ಮತ್ತು ಒಂದು ಲಕ್ಷ ರೂ.ಗಳ ಸನ್ಮಾನ ಧನವನ್ನು ಒಳಗೊಂಡಿರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶರ ಹತ್ಯೆಯಾಗಿ ಇಂದಿಗೆ ಎರಡು ವರ್ಷಗಳಾಗುತ್ತದೆ. ಈ ಭೀಕರ ಹತ್ಯೆ ದೇಶ ವಿದೇಶಗಳಲ್ಲಿ ತಲ್ಲಣ ಸೃಷ್ಟಿಸಿತಲ್ಲದೆ, ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣತೆ, ವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಯಾವ ಅನುಮಾನವೂ ಇಲ್ಲದಂತೆ ದೃಢೀಕರಿಸಿತು. ಗೌರಿ ಹತ್ಯೆಯನ್ನು ಕುರಿತು ವಿಚಾರಣೆ ನಡೆಸಿರುವ ವಿಶೇಷ ತನಿಖಾ ದಳ ಹಿಂದೂ ಮೂಲಭೂತವಾದಿ ಸಂಘಟನೆಯಾದ ‘ಸನಾತನ ಸಂಸ್ಥೆ’ಯ ಜತೆ ನಂಟಿರುವ ಹಲವಾರು ಮಂದಿಯನ್ನು ಆರೋಪಿಗಳನ್ನಾಗಿಸಿದೆ. ಅಲ್ಲದೆ ಇವರಿಗೂ ಮತ್ತು ಪ್ರೊ.ಕಲಬುರ್ಗಿ, ಗೋವಿಂದ ಪಾನ್ಸರೆ ಹಾಗೂ ಡಾ.ನರೇಂದ್ರ ಧಾಬೊಲ್ಕರ್ ಅವರ ಕೊಲೆಗೂ ಸಂಬಂಧವಿದೆ ಎಂಬ ಆಘಾತಕಾರಿ ಸುದ್ದಿಯನ್ನು ಹೊರಹಾಕಿದೆ. ಇದು ಸೆಕ್ಯುಲರ್ ಹಾಗೂ ವಿಚಾರವಾದದ ಮೇಲೆ ಮೂಲಭೂತವಾದಿಗಳು ನಡೆಸಿರುವ ವ್ಯವಸ್ಥಿತ ಸಂಚು ಎಂದು ತನಿಖೆ ಎತ್ತಿಹಿಡಿದಿದೆ; ಅಲ್ಲದೆ ಭಾರತ ಫ್ಯಾಸಿಸಂ ಕಡೆ ವಾಲುತ್ತಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ. ಕೋರ್ಟಿನಲ್ಲಿ ನಡೆಯುತ್ತಿರುವ ವಿಚಾರಣೆ ಒಂದು ತಾರ್ಕಿಕ ಘಟ್ಟವನ್ನು ಆದಷ್ಟು ಬೇಗ ತಲುಪಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಗೌರಿ ಸ್ಮಾರಕ ಟ್ರಸ್ಟ್ ಈ ಸಂದರ್ಭದಲ್ಲಿ ಒತ್ತಾಯಿಸುತ್ತದೆ ಎಂದು ಕೆ.ಎಲ್ ಅಶೋಕ್ ತಿಳಿಸಿದರು.

ಗೌರಿ ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 22ರ ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರು ನಗರದ ಟೌನ್ ಹಾಲ್ ನಲ್ಲಿ ನಡೆಯಲಿದೆ. ಅಂದು ಟ್ರಸ್ಟಿನ ಗೌರವ ಕಾರ್ಯದರ್ಶಿಗಳೂ, ಹಿರಿಯ ಭಾಷಾ ಶಾಸ್ತ್ರಜ್ಞರೂ ಆಗಿರುವ ಪ್ರೊ. ಗಣೇಶ ದೇವಿಯವರು ಗೌರಿ ನೆನಪಿನ ಉಪನ್ಯಾಸವನ್ನು ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರಿಯಾದ ಆಯ್ಕೆ. ಆಯ್ಕೆ ಸಮಿತಿಯಲ್ಲಿರುವವರೂ ಪ್ರಶಸ್ತಿಗೆ ಅರ್ಹರು. ಮುಖ್ಯವಾಗಿ ತೀಸ್ತಾ ಮತ್ತು ವರದರಾಜನ್! ರಹಮತ್ ತರಿಕೆರೆ ಅವರಿಗೆ ಸಾಹಿತ್ಯ ಪ್ರಶಸ್ತಿ ಕೊಡೋಣ,,?

  2. ನಿಜವಾಗಿಯೂ ರವಿಷ ಕುಮಾರ್ ಒಳ್ಳೆಯ ನಿರ್ಭಯ ಪತ್ರಕರ್ತರ ಪಾತ್ರ ವಹಿಸಿದ್ದಾರೆ, ಕೇವಲ ಅವರೊಬರೆ ನಿಜವಾದ ಸುದ್ದಿ ಹಾಗೂ ವೀಷಲ್ಲೆಶಣೆ ಕೊಡುವ ವೇಕ್ತಿ ಆಗಿದ್ದಾರೆ. ಅವರಿಗೆ ಆವರಿಸಿರುವುದರಿಂದ ತುಂಬಾ ಸಂತೋಷವಾಯಿತು

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...