Homeಚಳವಳಿಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

ಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

- Advertisement -
- Advertisement -

ಕಳೆದ ಬಾರಿಯಂತೆ ಈ ಸಾರಿಯೂ ಗೌರಿ ಸ್ಮಾರಕ ಟ್ರಸ್ಟ್ ಗೌರಿ ನೆನಪಿನ ದಿನವನ್ನು ಸಾಂವಿಧಾನಿಕ ಮೌಲ್ಯಗಳಾದ ವಾಕ್ ಸ್ವಾತಂತ್ಯ ಮತ್ತು ಭಿನ್ನಮತದ ಹಕ್ಕನ್ನು ಎತ್ತಿಹಿಡಿಯುವ, ತನ್ಮೂಲಕ ಪ್ರಜಾತಂತ್ರವನ್ನು ಪೊರೆಯುವ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಅಲ್ಲದೆ ಪ್ರಭುತ್ವಕ್ಕೆ ಎದಿರಾಗಿ ಸತ್ಯವನ್ನು ಸಾರಿ ಹೇಳುವುದರ ಪ್ರಾಮುಖ್ಯತೆಯನ್ನೂ, ಅನಿವಾರ್ಯತೆಯನ್ನೂ ಈ ದಿನ ಪ್ರತಿನಿಧಿಸುತ್ತದೆ. ಈ ಆಶಯಕ್ಕೆ ಅನುಗುಣವಾಗಿ ಟ್ರಸ್ಟ್ ಗೌರಿ ಲಂಕೇಶ್ ಹೆಸರಿನಲ್ಲಿ ಒಂದು ವಾರ್ಷಿಕ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಪತ್ರಿಕೋದ್ಯಮಕ್ಕೆ ಘನತೆ ತರುವಂಥ, ಸಂಕಷ್ಟದ ಸಮಯದಲ್ಲೂ ತಮ್ಮ ವೃತ್ತಿಗೆ ಬದ್ಧತೆಯಿಂದ ದುಡಿವ, ನಿರ್ಭಿಡೆಯಿಂದ ವರದಿಮಾಡುವ ಪತ್ರಕರ್ತರಿಗೆ ನೀಡಬೇಕೆಂಬುದು ಟ್ರಸ್ಟಿನ ಆಶಯವಾಗಿದೆ ಎಂದು ಅಧ್ಯಕ್ಷರಾದ ಎಚ್.ಎಸ್.ದೊರೆಸ್ವಾಮಿ ಮತ್ತು ಕಾರ್ಯದರ್ಶಿಗಳಾದ ಕೆ.ಎಲ್.ಅಶೋಕ್ ತಿಳಿಸಿದರು.

ಟ್ರಸ್ಟ್ ನ ಹಿರಿಯ ಪತ್ರಕರ್ತರಾದ ಸಿದ್ಧಾರ್ಥ ವರದರಾಜನ್, ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ ವಾಡ್, ಹಾಗೂ ಕನ್ನಡದ ಖ್ಯಾತ ಚಿಂತಕ ಪ್ರೊ.ರಹಮತ್ ತರೀಕೆರೆಯವರು ಸದಸ್ಯರಾಗಿರುವ ಸಮಿತಿಯ ಸರ್ವಾನುಮತದ ನಿರ್ಧಾರದಂತೆ ನಾಡಿನ ಖ್ಯಾತ ಪತ್ರಕರ್ತ ಹಿಂದಿ ಎನ್.ಡಿ.ಟಿ.ವಿಯ ಹಿರಿಯ ವರದಿಗಾರರಾದ ಶ್ರೀಯುತ ರವೀಶ್ ಕುಮಾರ್ ಅವರನ್ನು ‘ಗೌರಿ ಪ್ರಶಸ್ತಿ’ಗೆ ಆಯ್ಕೆಮಾಡಲಾಗಿದೆ. ಇದಾದ ನಂತರ ರವೀಶ್ ಕುಮಾರ್ ಅವರಿಗೆ ಪ್ರತಿಷ್ಟಿತ ಮ್ಯಾಗಸೆಸೆ ಪ್ರಶಸ್ತಿಯೂ ಲಭಿಸಿದ್ದು ನಮಗೆ ಹೆಮ್ಮೆ ಎನಿಸಿದೆ ಎಂದರು.

ರವೀಶ್ ಕುಮಾರ್ ಅವರು ತಮ್ಮ ಹರಿತವಾದ ಸುದ್ದಿ ವಿಶ್ಲೇಷಣೆಗೆ ಮತ್ತು ರಾಜಿ ಇಲ್ಲದ ಸೆಕ್ಯುಲರ್ ನಿಲುವಿಗೆ ಬದ್ಧರಾಗಿದ್ದಾರಷ್ಟೇ ಅಲ್ಲದೆ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ವೃತ್ತಿ ಘನತೆಯನ್ನು ಎತ್ತಿಹಿಡಿಯುತ್ತಾ, ಪ್ರಜಾತಾಂತ್ರಿಕ ನಿಲುವಿಗೆ ಅಚಲವಾದ ನಿಷ್ಠಯನ್ನು ತೋರುತ್ತಾ ಬಂದಿದ್ದಾರೆ. ಇಂಥವರು ಗೌರಿ ಪ್ರಶಸ್ತಿಯ ಮೊದಲ ಪುರಸ್ಕೃತರು ಎಂಬುದು ನಮಗೆಲ್ಲಾ ಹೆಮ್ಮೆಯ ವಿಷಯ. ಪ್ರಶಸ್ತಿಯು ಗೌರವ ಫಲಕ ಮತ್ತು ಒಂದು ಲಕ್ಷ ರೂ.ಗಳ ಸನ್ಮಾನ ಧನವನ್ನು ಒಳಗೊಂಡಿರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶರ ಹತ್ಯೆಯಾಗಿ ಇಂದಿಗೆ ಎರಡು ವರ್ಷಗಳಾಗುತ್ತದೆ. ಈ ಭೀಕರ ಹತ್ಯೆ ದೇಶ ವಿದೇಶಗಳಲ್ಲಿ ತಲ್ಲಣ ಸೃಷ್ಟಿಸಿತಲ್ಲದೆ, ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣತೆ, ವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಯಾವ ಅನುಮಾನವೂ ಇಲ್ಲದಂತೆ ದೃಢೀಕರಿಸಿತು. ಗೌರಿ ಹತ್ಯೆಯನ್ನು ಕುರಿತು ವಿಚಾರಣೆ ನಡೆಸಿರುವ ವಿಶೇಷ ತನಿಖಾ ದಳ ಹಿಂದೂ ಮೂಲಭೂತವಾದಿ ಸಂಘಟನೆಯಾದ ‘ಸನಾತನ ಸಂಸ್ಥೆ’ಯ ಜತೆ ನಂಟಿರುವ ಹಲವಾರು ಮಂದಿಯನ್ನು ಆರೋಪಿಗಳನ್ನಾಗಿಸಿದೆ. ಅಲ್ಲದೆ ಇವರಿಗೂ ಮತ್ತು ಪ್ರೊ.ಕಲಬುರ್ಗಿ, ಗೋವಿಂದ ಪಾನ್ಸರೆ ಹಾಗೂ ಡಾ.ನರೇಂದ್ರ ಧಾಬೊಲ್ಕರ್ ಅವರ ಕೊಲೆಗೂ ಸಂಬಂಧವಿದೆ ಎಂಬ ಆಘಾತಕಾರಿ ಸುದ್ದಿಯನ್ನು ಹೊರಹಾಕಿದೆ. ಇದು ಸೆಕ್ಯುಲರ್ ಹಾಗೂ ವಿಚಾರವಾದದ ಮೇಲೆ ಮೂಲಭೂತವಾದಿಗಳು ನಡೆಸಿರುವ ವ್ಯವಸ್ಥಿತ ಸಂಚು ಎಂದು ತನಿಖೆ ಎತ್ತಿಹಿಡಿದಿದೆ; ಅಲ್ಲದೆ ಭಾರತ ಫ್ಯಾಸಿಸಂ ಕಡೆ ವಾಲುತ್ತಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ. ಕೋರ್ಟಿನಲ್ಲಿ ನಡೆಯುತ್ತಿರುವ ವಿಚಾರಣೆ ಒಂದು ತಾರ್ಕಿಕ ಘಟ್ಟವನ್ನು ಆದಷ್ಟು ಬೇಗ ತಲುಪಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಗೌರಿ ಸ್ಮಾರಕ ಟ್ರಸ್ಟ್ ಈ ಸಂದರ್ಭದಲ್ಲಿ ಒತ್ತಾಯಿಸುತ್ತದೆ ಎಂದು ಕೆ.ಎಲ್ ಅಶೋಕ್ ತಿಳಿಸಿದರು.

ಗೌರಿ ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 22ರ ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರು ನಗರದ ಟೌನ್ ಹಾಲ್ ನಲ್ಲಿ ನಡೆಯಲಿದೆ. ಅಂದು ಟ್ರಸ್ಟಿನ ಗೌರವ ಕಾರ್ಯದರ್ಶಿಗಳೂ, ಹಿರಿಯ ಭಾಷಾ ಶಾಸ್ತ್ರಜ್ಞರೂ ಆಗಿರುವ ಪ್ರೊ. ಗಣೇಶ ದೇವಿಯವರು ಗೌರಿ ನೆನಪಿನ ಉಪನ್ಯಾಸವನ್ನು ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರಿಯಾದ ಆಯ್ಕೆ. ಆಯ್ಕೆ ಸಮಿತಿಯಲ್ಲಿರುವವರೂ ಪ್ರಶಸ್ತಿಗೆ ಅರ್ಹರು. ಮುಖ್ಯವಾಗಿ ತೀಸ್ತಾ ಮತ್ತು ವರದರಾಜನ್! ರಹಮತ್ ತರಿಕೆರೆ ಅವರಿಗೆ ಸಾಹಿತ್ಯ ಪ್ರಶಸ್ತಿ ಕೊಡೋಣ,,?

  2. ನಿಜವಾಗಿಯೂ ರವಿಷ ಕುಮಾರ್ ಒಳ್ಳೆಯ ನಿರ್ಭಯ ಪತ್ರಕರ್ತರ ಪಾತ್ರ ವಹಿಸಿದ್ದಾರೆ, ಕೇವಲ ಅವರೊಬರೆ ನಿಜವಾದ ಸುದ್ದಿ ಹಾಗೂ ವೀಷಲ್ಲೆಶಣೆ ಕೊಡುವ ವೇಕ್ತಿ ಆಗಿದ್ದಾರೆ. ಅವರಿಗೆ ಆವರಿಸಿರುವುದರಿಂದ ತುಂಬಾ ಸಂತೋಷವಾಯಿತು

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...