Homeಚಳವಳಿಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

ಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

- Advertisement -
- Advertisement -

ಕಳೆದ ಬಾರಿಯಂತೆ ಈ ಸಾರಿಯೂ ಗೌರಿ ಸ್ಮಾರಕ ಟ್ರಸ್ಟ್ ಗೌರಿ ನೆನಪಿನ ದಿನವನ್ನು ಸಾಂವಿಧಾನಿಕ ಮೌಲ್ಯಗಳಾದ ವಾಕ್ ಸ್ವಾತಂತ್ಯ ಮತ್ತು ಭಿನ್ನಮತದ ಹಕ್ಕನ್ನು ಎತ್ತಿಹಿಡಿಯುವ, ತನ್ಮೂಲಕ ಪ್ರಜಾತಂತ್ರವನ್ನು ಪೊರೆಯುವ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಅಲ್ಲದೆ ಪ್ರಭುತ್ವಕ್ಕೆ ಎದಿರಾಗಿ ಸತ್ಯವನ್ನು ಸಾರಿ ಹೇಳುವುದರ ಪ್ರಾಮುಖ್ಯತೆಯನ್ನೂ, ಅನಿವಾರ್ಯತೆಯನ್ನೂ ಈ ದಿನ ಪ್ರತಿನಿಧಿಸುತ್ತದೆ. ಈ ಆಶಯಕ್ಕೆ ಅನುಗುಣವಾಗಿ ಟ್ರಸ್ಟ್ ಗೌರಿ ಲಂಕೇಶ್ ಹೆಸರಿನಲ್ಲಿ ಒಂದು ವಾರ್ಷಿಕ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಪತ್ರಿಕೋದ್ಯಮಕ್ಕೆ ಘನತೆ ತರುವಂಥ, ಸಂಕಷ್ಟದ ಸಮಯದಲ್ಲೂ ತಮ್ಮ ವೃತ್ತಿಗೆ ಬದ್ಧತೆಯಿಂದ ದುಡಿವ, ನಿರ್ಭಿಡೆಯಿಂದ ವರದಿಮಾಡುವ ಪತ್ರಕರ್ತರಿಗೆ ನೀಡಬೇಕೆಂಬುದು ಟ್ರಸ್ಟಿನ ಆಶಯವಾಗಿದೆ ಎಂದು ಅಧ್ಯಕ್ಷರಾದ ಎಚ್.ಎಸ್.ದೊರೆಸ್ವಾಮಿ ಮತ್ತು ಕಾರ್ಯದರ್ಶಿಗಳಾದ ಕೆ.ಎಲ್.ಅಶೋಕ್ ತಿಳಿಸಿದರು.

ಟ್ರಸ್ಟ್ ನ ಹಿರಿಯ ಪತ್ರಕರ್ತರಾದ ಸಿದ್ಧಾರ್ಥ ವರದರಾಜನ್, ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ ವಾಡ್, ಹಾಗೂ ಕನ್ನಡದ ಖ್ಯಾತ ಚಿಂತಕ ಪ್ರೊ.ರಹಮತ್ ತರೀಕೆರೆಯವರು ಸದಸ್ಯರಾಗಿರುವ ಸಮಿತಿಯ ಸರ್ವಾನುಮತದ ನಿರ್ಧಾರದಂತೆ ನಾಡಿನ ಖ್ಯಾತ ಪತ್ರಕರ್ತ ಹಿಂದಿ ಎನ್.ಡಿ.ಟಿ.ವಿಯ ಹಿರಿಯ ವರದಿಗಾರರಾದ ಶ್ರೀಯುತ ರವೀಶ್ ಕುಮಾರ್ ಅವರನ್ನು ‘ಗೌರಿ ಪ್ರಶಸ್ತಿ’ಗೆ ಆಯ್ಕೆಮಾಡಲಾಗಿದೆ. ಇದಾದ ನಂತರ ರವೀಶ್ ಕುಮಾರ್ ಅವರಿಗೆ ಪ್ರತಿಷ್ಟಿತ ಮ್ಯಾಗಸೆಸೆ ಪ್ರಶಸ್ತಿಯೂ ಲಭಿಸಿದ್ದು ನಮಗೆ ಹೆಮ್ಮೆ ಎನಿಸಿದೆ ಎಂದರು.

ರವೀಶ್ ಕುಮಾರ್ ಅವರು ತಮ್ಮ ಹರಿತವಾದ ಸುದ್ದಿ ವಿಶ್ಲೇಷಣೆಗೆ ಮತ್ತು ರಾಜಿ ಇಲ್ಲದ ಸೆಕ್ಯುಲರ್ ನಿಲುವಿಗೆ ಬದ್ಧರಾಗಿದ್ದಾರಷ್ಟೇ ಅಲ್ಲದೆ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ವೃತ್ತಿ ಘನತೆಯನ್ನು ಎತ್ತಿಹಿಡಿಯುತ್ತಾ, ಪ್ರಜಾತಾಂತ್ರಿಕ ನಿಲುವಿಗೆ ಅಚಲವಾದ ನಿಷ್ಠಯನ್ನು ತೋರುತ್ತಾ ಬಂದಿದ್ದಾರೆ. ಇಂಥವರು ಗೌರಿ ಪ್ರಶಸ್ತಿಯ ಮೊದಲ ಪುರಸ್ಕೃತರು ಎಂಬುದು ನಮಗೆಲ್ಲಾ ಹೆಮ್ಮೆಯ ವಿಷಯ. ಪ್ರಶಸ್ತಿಯು ಗೌರವ ಫಲಕ ಮತ್ತು ಒಂದು ಲಕ್ಷ ರೂ.ಗಳ ಸನ್ಮಾನ ಧನವನ್ನು ಒಳಗೊಂಡಿರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶರ ಹತ್ಯೆಯಾಗಿ ಇಂದಿಗೆ ಎರಡು ವರ್ಷಗಳಾಗುತ್ತದೆ. ಈ ಭೀಕರ ಹತ್ಯೆ ದೇಶ ವಿದೇಶಗಳಲ್ಲಿ ತಲ್ಲಣ ಸೃಷ್ಟಿಸಿತಲ್ಲದೆ, ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣತೆ, ವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಯಾವ ಅನುಮಾನವೂ ಇಲ್ಲದಂತೆ ದೃಢೀಕರಿಸಿತು. ಗೌರಿ ಹತ್ಯೆಯನ್ನು ಕುರಿತು ವಿಚಾರಣೆ ನಡೆಸಿರುವ ವಿಶೇಷ ತನಿಖಾ ದಳ ಹಿಂದೂ ಮೂಲಭೂತವಾದಿ ಸಂಘಟನೆಯಾದ ‘ಸನಾತನ ಸಂಸ್ಥೆ’ಯ ಜತೆ ನಂಟಿರುವ ಹಲವಾರು ಮಂದಿಯನ್ನು ಆರೋಪಿಗಳನ್ನಾಗಿಸಿದೆ. ಅಲ್ಲದೆ ಇವರಿಗೂ ಮತ್ತು ಪ್ರೊ.ಕಲಬುರ್ಗಿ, ಗೋವಿಂದ ಪಾನ್ಸರೆ ಹಾಗೂ ಡಾ.ನರೇಂದ್ರ ಧಾಬೊಲ್ಕರ್ ಅವರ ಕೊಲೆಗೂ ಸಂಬಂಧವಿದೆ ಎಂಬ ಆಘಾತಕಾರಿ ಸುದ್ದಿಯನ್ನು ಹೊರಹಾಕಿದೆ. ಇದು ಸೆಕ್ಯುಲರ್ ಹಾಗೂ ವಿಚಾರವಾದದ ಮೇಲೆ ಮೂಲಭೂತವಾದಿಗಳು ನಡೆಸಿರುವ ವ್ಯವಸ್ಥಿತ ಸಂಚು ಎಂದು ತನಿಖೆ ಎತ್ತಿಹಿಡಿದಿದೆ; ಅಲ್ಲದೆ ಭಾರತ ಫ್ಯಾಸಿಸಂ ಕಡೆ ವಾಲುತ್ತಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ. ಕೋರ್ಟಿನಲ್ಲಿ ನಡೆಯುತ್ತಿರುವ ವಿಚಾರಣೆ ಒಂದು ತಾರ್ಕಿಕ ಘಟ್ಟವನ್ನು ಆದಷ್ಟು ಬೇಗ ತಲುಪಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಗೌರಿ ಸ್ಮಾರಕ ಟ್ರಸ್ಟ್ ಈ ಸಂದರ್ಭದಲ್ಲಿ ಒತ್ತಾಯಿಸುತ್ತದೆ ಎಂದು ಕೆ.ಎಲ್ ಅಶೋಕ್ ತಿಳಿಸಿದರು.

ಗೌರಿ ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 22ರ ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರು ನಗರದ ಟೌನ್ ಹಾಲ್ ನಲ್ಲಿ ನಡೆಯಲಿದೆ. ಅಂದು ಟ್ರಸ್ಟಿನ ಗೌರವ ಕಾರ್ಯದರ್ಶಿಗಳೂ, ಹಿರಿಯ ಭಾಷಾ ಶಾಸ್ತ್ರಜ್ಞರೂ ಆಗಿರುವ ಪ್ರೊ. ಗಣೇಶ ದೇವಿಯವರು ಗೌರಿ ನೆನಪಿನ ಉಪನ್ಯಾಸವನ್ನು ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರಿಯಾದ ಆಯ್ಕೆ. ಆಯ್ಕೆ ಸಮಿತಿಯಲ್ಲಿರುವವರೂ ಪ್ರಶಸ್ತಿಗೆ ಅರ್ಹರು. ಮುಖ್ಯವಾಗಿ ತೀಸ್ತಾ ಮತ್ತು ವರದರಾಜನ್! ರಹಮತ್ ತರಿಕೆರೆ ಅವರಿಗೆ ಸಾಹಿತ್ಯ ಪ್ರಶಸ್ತಿ ಕೊಡೋಣ,,?

  2. ನಿಜವಾಗಿಯೂ ರವಿಷ ಕುಮಾರ್ ಒಳ್ಳೆಯ ನಿರ್ಭಯ ಪತ್ರಕರ್ತರ ಪಾತ್ರ ವಹಿಸಿದ್ದಾರೆ, ಕೇವಲ ಅವರೊಬರೆ ನಿಜವಾದ ಸುದ್ದಿ ಹಾಗೂ ವೀಷಲ್ಲೆಶಣೆ ಕೊಡುವ ವೇಕ್ತಿ ಆಗಿದ್ದಾರೆ. ಅವರಿಗೆ ಆವರಿಸಿರುವುದರಿಂದ ತುಂಬಾ ಸಂತೋಷವಾಯಿತು

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...