Homeಚಳವಳಿಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

ಚೊಚ್ಚಲ ‘ಗೌರಿ ಲಂಕೇಶ್’ ಪ್ರಶಸ್ತಿ ನೈಜ ಪತ್ರಕರ್ತ ರವೀಶ್‍ಕುಮಾರ್ ಮಡಿಲಿಗೆ: ಸೆಪ್ಟೆಂಬರ್ 22ರಂದು ಬೆಂಗಳೂರಿನಲ್ಲಿ ಪ್ರದಾನ

- Advertisement -
- Advertisement -

ಕಳೆದ ಬಾರಿಯಂತೆ ಈ ಸಾರಿಯೂ ಗೌರಿ ಸ್ಮಾರಕ ಟ್ರಸ್ಟ್ ಗೌರಿ ನೆನಪಿನ ದಿನವನ್ನು ಸಾಂವಿಧಾನಿಕ ಮೌಲ್ಯಗಳಾದ ವಾಕ್ ಸ್ವಾತಂತ್ಯ ಮತ್ತು ಭಿನ್ನಮತದ ಹಕ್ಕನ್ನು ಎತ್ತಿಹಿಡಿಯುವ, ತನ್ಮೂಲಕ ಪ್ರಜಾತಂತ್ರವನ್ನು ಪೊರೆಯುವ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಅಲ್ಲದೆ ಪ್ರಭುತ್ವಕ್ಕೆ ಎದಿರಾಗಿ ಸತ್ಯವನ್ನು ಸಾರಿ ಹೇಳುವುದರ ಪ್ರಾಮುಖ್ಯತೆಯನ್ನೂ, ಅನಿವಾರ್ಯತೆಯನ್ನೂ ಈ ದಿನ ಪ್ರತಿನಿಧಿಸುತ್ತದೆ. ಈ ಆಶಯಕ್ಕೆ ಅನುಗುಣವಾಗಿ ಟ್ರಸ್ಟ್ ಗೌರಿ ಲಂಕೇಶ್ ಹೆಸರಿನಲ್ಲಿ ಒಂದು ವಾರ್ಷಿಕ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಪತ್ರಿಕೋದ್ಯಮಕ್ಕೆ ಘನತೆ ತರುವಂಥ, ಸಂಕಷ್ಟದ ಸಮಯದಲ್ಲೂ ತಮ್ಮ ವೃತ್ತಿಗೆ ಬದ್ಧತೆಯಿಂದ ದುಡಿವ, ನಿರ್ಭಿಡೆಯಿಂದ ವರದಿಮಾಡುವ ಪತ್ರಕರ್ತರಿಗೆ ನೀಡಬೇಕೆಂಬುದು ಟ್ರಸ್ಟಿನ ಆಶಯವಾಗಿದೆ ಎಂದು ಅಧ್ಯಕ್ಷರಾದ ಎಚ್.ಎಸ್.ದೊರೆಸ್ವಾಮಿ ಮತ್ತು ಕಾರ್ಯದರ್ಶಿಗಳಾದ ಕೆ.ಎಲ್.ಅಶೋಕ್ ತಿಳಿಸಿದರು.

ಟ್ರಸ್ಟ್ ನ ಹಿರಿಯ ಪತ್ರಕರ್ತರಾದ ಸಿದ್ಧಾರ್ಥ ವರದರಾಜನ್, ಮಾನವಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ ವಾಡ್, ಹಾಗೂ ಕನ್ನಡದ ಖ್ಯಾತ ಚಿಂತಕ ಪ್ರೊ.ರಹಮತ್ ತರೀಕೆರೆಯವರು ಸದಸ್ಯರಾಗಿರುವ ಸಮಿತಿಯ ಸರ್ವಾನುಮತದ ನಿರ್ಧಾರದಂತೆ ನಾಡಿನ ಖ್ಯಾತ ಪತ್ರಕರ್ತ ಹಿಂದಿ ಎನ್.ಡಿ.ಟಿ.ವಿಯ ಹಿರಿಯ ವರದಿಗಾರರಾದ ಶ್ರೀಯುತ ರವೀಶ್ ಕುಮಾರ್ ಅವರನ್ನು ‘ಗೌರಿ ಪ್ರಶಸ್ತಿ’ಗೆ ಆಯ್ಕೆಮಾಡಲಾಗಿದೆ. ಇದಾದ ನಂತರ ರವೀಶ್ ಕುಮಾರ್ ಅವರಿಗೆ ಪ್ರತಿಷ್ಟಿತ ಮ್ಯಾಗಸೆಸೆ ಪ್ರಶಸ್ತಿಯೂ ಲಭಿಸಿದ್ದು ನಮಗೆ ಹೆಮ್ಮೆ ಎನಿಸಿದೆ ಎಂದರು.

ರವೀಶ್ ಕುಮಾರ್ ಅವರು ತಮ್ಮ ಹರಿತವಾದ ಸುದ್ದಿ ವಿಶ್ಲೇಷಣೆಗೆ ಮತ್ತು ರಾಜಿ ಇಲ್ಲದ ಸೆಕ್ಯುಲರ್ ನಿಲುವಿಗೆ ಬದ್ಧರಾಗಿದ್ದಾರಷ್ಟೇ ಅಲ್ಲದೆ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ವೃತ್ತಿ ಘನತೆಯನ್ನು ಎತ್ತಿಹಿಡಿಯುತ್ತಾ, ಪ್ರಜಾತಾಂತ್ರಿಕ ನಿಲುವಿಗೆ ಅಚಲವಾದ ನಿಷ್ಠಯನ್ನು ತೋರುತ್ತಾ ಬಂದಿದ್ದಾರೆ. ಇಂಥವರು ಗೌರಿ ಪ್ರಶಸ್ತಿಯ ಮೊದಲ ಪುರಸ್ಕೃತರು ಎಂಬುದು ನಮಗೆಲ್ಲಾ ಹೆಮ್ಮೆಯ ವಿಷಯ. ಪ್ರಶಸ್ತಿಯು ಗೌರವ ಫಲಕ ಮತ್ತು ಒಂದು ಲಕ್ಷ ರೂ.ಗಳ ಸನ್ಮಾನ ಧನವನ್ನು ಒಳಗೊಂಡಿರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶರ ಹತ್ಯೆಯಾಗಿ ಇಂದಿಗೆ ಎರಡು ವರ್ಷಗಳಾಗುತ್ತದೆ. ಈ ಭೀಕರ ಹತ್ಯೆ ದೇಶ ವಿದೇಶಗಳಲ್ಲಿ ತಲ್ಲಣ ಸೃಷ್ಟಿಸಿತಲ್ಲದೆ, ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣತೆ, ವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಯಾವ ಅನುಮಾನವೂ ಇಲ್ಲದಂತೆ ದೃಢೀಕರಿಸಿತು. ಗೌರಿ ಹತ್ಯೆಯನ್ನು ಕುರಿತು ವಿಚಾರಣೆ ನಡೆಸಿರುವ ವಿಶೇಷ ತನಿಖಾ ದಳ ಹಿಂದೂ ಮೂಲಭೂತವಾದಿ ಸಂಘಟನೆಯಾದ ‘ಸನಾತನ ಸಂಸ್ಥೆ’ಯ ಜತೆ ನಂಟಿರುವ ಹಲವಾರು ಮಂದಿಯನ್ನು ಆರೋಪಿಗಳನ್ನಾಗಿಸಿದೆ. ಅಲ್ಲದೆ ಇವರಿಗೂ ಮತ್ತು ಪ್ರೊ.ಕಲಬುರ್ಗಿ, ಗೋವಿಂದ ಪಾನ್ಸರೆ ಹಾಗೂ ಡಾ.ನರೇಂದ್ರ ಧಾಬೊಲ್ಕರ್ ಅವರ ಕೊಲೆಗೂ ಸಂಬಂಧವಿದೆ ಎಂಬ ಆಘಾತಕಾರಿ ಸುದ್ದಿಯನ್ನು ಹೊರಹಾಕಿದೆ. ಇದು ಸೆಕ್ಯುಲರ್ ಹಾಗೂ ವಿಚಾರವಾದದ ಮೇಲೆ ಮೂಲಭೂತವಾದಿಗಳು ನಡೆಸಿರುವ ವ್ಯವಸ್ಥಿತ ಸಂಚು ಎಂದು ತನಿಖೆ ಎತ್ತಿಹಿಡಿದಿದೆ; ಅಲ್ಲದೆ ಭಾರತ ಫ್ಯಾಸಿಸಂ ಕಡೆ ವಾಲುತ್ತಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ. ಕೋರ್ಟಿನಲ್ಲಿ ನಡೆಯುತ್ತಿರುವ ವಿಚಾರಣೆ ಒಂದು ತಾರ್ಕಿಕ ಘಟ್ಟವನ್ನು ಆದಷ್ಟು ಬೇಗ ತಲುಪಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಗೌರಿ ಸ್ಮಾರಕ ಟ್ರಸ್ಟ್ ಈ ಸಂದರ್ಭದಲ್ಲಿ ಒತ್ತಾಯಿಸುತ್ತದೆ ಎಂದು ಕೆ.ಎಲ್ ಅಶೋಕ್ ತಿಳಿಸಿದರು.

ಗೌರಿ ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 22ರ ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರು ನಗರದ ಟೌನ್ ಹಾಲ್ ನಲ್ಲಿ ನಡೆಯಲಿದೆ. ಅಂದು ಟ್ರಸ್ಟಿನ ಗೌರವ ಕಾರ್ಯದರ್ಶಿಗಳೂ, ಹಿರಿಯ ಭಾಷಾ ಶಾಸ್ತ್ರಜ್ಞರೂ ಆಗಿರುವ ಪ್ರೊ. ಗಣೇಶ ದೇವಿಯವರು ಗೌರಿ ನೆನಪಿನ ಉಪನ್ಯಾಸವನ್ನು ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರಿಯಾದ ಆಯ್ಕೆ. ಆಯ್ಕೆ ಸಮಿತಿಯಲ್ಲಿರುವವರೂ ಪ್ರಶಸ್ತಿಗೆ ಅರ್ಹರು. ಮುಖ್ಯವಾಗಿ ತೀಸ್ತಾ ಮತ್ತು ವರದರಾಜನ್! ರಹಮತ್ ತರಿಕೆರೆ ಅವರಿಗೆ ಸಾಹಿತ್ಯ ಪ್ರಶಸ್ತಿ ಕೊಡೋಣ,,?

  2. ನಿಜವಾಗಿಯೂ ರವಿಷ ಕುಮಾರ್ ಒಳ್ಳೆಯ ನಿರ್ಭಯ ಪತ್ರಕರ್ತರ ಪಾತ್ರ ವಹಿಸಿದ್ದಾರೆ, ಕೇವಲ ಅವರೊಬರೆ ನಿಜವಾದ ಸುದ್ದಿ ಹಾಗೂ ವೀಷಲ್ಲೆಶಣೆ ಕೊಡುವ ವೇಕ್ತಿ ಆಗಿದ್ದಾರೆ. ಅವರಿಗೆ ಆವರಿಸಿರುವುದರಿಂದ ತುಂಬಾ ಸಂತೋಷವಾಯಿತು

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...