Homeಕರ್ನಾಟಕನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆಯುತ್ತಿದೆ. ಮತ್ತೊಂದೆಡೆ ನಾಳೆ (ಸೋಮವಾರ) 16ನೇ ವಿಧಾನಸಭೆಯ ಮೊದಲ ಜಂಟಿ ಅಧಿವೇಶನದ ಆರಂಭವಾಗುತ್ತಿದೆ. ಆದರೂ ಈ ವರೆಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿ ಆಯ್ಕೆ ಮಾಡಿಲ್ಲ. ಸಮರ್ಥ ವಿಪಕ್ಷ ನಾಯಕನ ಆಯ್ಕೆಯಲ್ಲಿ ಗೊಂದಲದಲ್ಲಿದೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲು ಇಂದು (ಭಾನುವಾರ, ಜು.2) ಮಧ್ಯಾಹ್ನದ ಬಳಿಕ ಬಿಜೆಪಿ ನಾಯಕರು ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ಬಸವರಾಜ ಬೊಮ್ಮಾಯಿ ಅವರನ್ನು ನಾಯಕರಾಗಿ ಆಯ್ಕೆ ಮಾಡುವ ಸಂಭವ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ. ಯಡಿಯೂರಪ್ಪ ಅವರು ಬೊಮ್ಮಾಯಿ ಅವರ ಮೇಲೆ ಒಲವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಬಸನಗೌಡ ಪಾಟೀಲ್ ಯತ್ನಾಳ ಅವರು ಪ್ರಭಲ ಪೈಪೋಟಿ ನೀಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಈ ಬಗ್ಗೆ ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾತನಾಡಿದ್ದು. ”ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಯಾರಾಗಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಬಂದಿಲ್ಲ. ಹಾಗಾಗಿ, ಭಾನುವಾರ ಸಭೆ ನಡೆಯುವುದು ಅನುಮಾನ. ಸೋಮವಾರ ಬೆಳಿಗ್ಗೆ ಕಲಾಪ ಆರಂಭವಾಗುವುದಕ್ಕೆ ಮುನ್ನ, ನಾಯಕನ ಆಯ್ಕೆಗೆ ವರಿಷ್ಠರು ಸೂಚನೆ ನೀಡುವ ಸಾಧ್ಯತೆ ಇದೆ” ಎಂದು ಹೇಳಿದರು.

ಪಕ್ಷದ ರಾಷ್ಟ್ರೀ ಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ವರಿಷ್ಠರು ಸಂದೇಶ ಕಳುಹಿಸಿದ್ದಾರೆ. ಭಾನುವಾರ ಮಧ್ಯಾಹ್ನ 2ಗಂಟೆಗೆ ಅವರು ದೆಹಲಿ ತಲುಪಲಿದ್ದಾರೆ. ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ, ನಾಯಕನ ಆಯ್ಕೆಯ ಸೂತ್ರ ಹೊರಬೀಳಲಿದೆ. ಅದಾದ ಬಳಿಕ, ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬರಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಯಡಿಯೂರಪ್ಪ ಅವರು ದೆಹಲಿ ನಾಯಕರ ಭೇಟಿ ವೇಳೆ, ಕೇಂದ್ರ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲಿದ್ದಾರೆ. ರಾಜ್ಯದಿಂದ ಯಾರನ್ನು ಕೈಬಿಟ್ಟು, ಮತ್ತೆ ಯಾರನ್ನು ಸೇರ್ಪಡೆ ಮಾಡಬೇಕು ಎಂಬ ವಿಷಯದ ಕುರಿತು ವರಿಷ್ಠರು ಯಡಿಯೂರಪ್ಪನವರ ಜತೆ ಚರ್ಚೆ ನಡೆಸಲಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಸನಗೌಡ ಪಾಟೀಲ ಯತ್ನಾಳ ತೀವ್ರಯತ್ನ ನಡೆಸಿದ್ದಾರೆ. ಆದರೆ ತಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸಿಕೊಂಡು ಬಂದು, ಸರ್ಕಾರದ ವರ್ಚಸ್ಸು ಕೆಡಲು ಯತ್ನಾಳ ಕಾರಣ ಎಂದು ವಾದಿಸುತ್ತಿರುವ ಯಡಿಯೂರಪ್ಪ ಅವರು, ಯತ್ನಾಳ ಆಯ್ಕೆಗೆ ಸುತರಾಂ ಒಪ್ಪುವುದಿಲ್ಲ. ಹೀಗಾಗಿ, ಬಸವರಾಜ ಬೊಮ್ಮಾಯಿ ಆಯ್ಕೆ ಸಾಧ್ಯತೆ ಹೆಚ್ಚು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್: ಕಾಂಗ್ರೆಸ್

‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್‌ನ ಟ್ವಿಟರ್‌ ಘಟಕ ಶನಿವಾರ ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಹಂಚಿಕೊಂಡಿದೆ. ಈ ಮೂಲಕ ವಿಧಾನಸಭೆ ಚುನಾವಣೆ ನಡೆದು ಇದುವರೆಗೆ ಬಿಜೆಪಿ ವಿರೋಧಪಕ್ಷದ ನಾಯಕನನ್ನು ನೇಮಿಸದಿದ್ದಕ್ಕೆ ವ್ಯಂಗ್ಯವಾಡಿದೆ.

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ, ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಬರೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...