Homeಕರ್ನಾಟಕನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆಯುತ್ತಿದೆ. ಮತ್ತೊಂದೆಡೆ ನಾಳೆ (ಸೋಮವಾರ) 16ನೇ ವಿಧಾನಸಭೆಯ ಮೊದಲ ಜಂಟಿ ಅಧಿವೇಶನದ ಆರಂಭವಾಗುತ್ತಿದೆ. ಆದರೂ ಈ ವರೆಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿ ಆಯ್ಕೆ ಮಾಡಿಲ್ಲ. ಸಮರ್ಥ ವಿಪಕ್ಷ ನಾಯಕನ ಆಯ್ಕೆಯಲ್ಲಿ ಗೊಂದಲದಲ್ಲಿದೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲು ಇಂದು (ಭಾನುವಾರ, ಜು.2) ಮಧ್ಯಾಹ್ನದ ಬಳಿಕ ಬಿಜೆಪಿ ನಾಯಕರು ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ಬಸವರಾಜ ಬೊಮ್ಮಾಯಿ ಅವರನ್ನು ನಾಯಕರಾಗಿ ಆಯ್ಕೆ ಮಾಡುವ ಸಂಭವ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ. ಯಡಿಯೂರಪ್ಪ ಅವರು ಬೊಮ್ಮಾಯಿ ಅವರ ಮೇಲೆ ಒಲವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಬಸನಗೌಡ ಪಾಟೀಲ್ ಯತ್ನಾಳ ಅವರು ಪ್ರಭಲ ಪೈಪೋಟಿ ನೀಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಈ ಬಗ್ಗೆ ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾತನಾಡಿದ್ದು. ”ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಯಾರಾಗಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಬಂದಿಲ್ಲ. ಹಾಗಾಗಿ, ಭಾನುವಾರ ಸಭೆ ನಡೆಯುವುದು ಅನುಮಾನ. ಸೋಮವಾರ ಬೆಳಿಗ್ಗೆ ಕಲಾಪ ಆರಂಭವಾಗುವುದಕ್ಕೆ ಮುನ್ನ, ನಾಯಕನ ಆಯ್ಕೆಗೆ ವರಿಷ್ಠರು ಸೂಚನೆ ನೀಡುವ ಸಾಧ್ಯತೆ ಇದೆ” ಎಂದು ಹೇಳಿದರು.

ಪಕ್ಷದ ರಾಷ್ಟ್ರೀ ಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ವರಿಷ್ಠರು ಸಂದೇಶ ಕಳುಹಿಸಿದ್ದಾರೆ. ಭಾನುವಾರ ಮಧ್ಯಾಹ್ನ 2ಗಂಟೆಗೆ ಅವರು ದೆಹಲಿ ತಲುಪಲಿದ್ದಾರೆ. ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ, ನಾಯಕನ ಆಯ್ಕೆಯ ಸೂತ್ರ ಹೊರಬೀಳಲಿದೆ. ಅದಾದ ಬಳಿಕ, ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬರಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಯಡಿಯೂರಪ್ಪ ಅವರು ದೆಹಲಿ ನಾಯಕರ ಭೇಟಿ ವೇಳೆ, ಕೇಂದ್ರ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲಿದ್ದಾರೆ. ರಾಜ್ಯದಿಂದ ಯಾರನ್ನು ಕೈಬಿಟ್ಟು, ಮತ್ತೆ ಯಾರನ್ನು ಸೇರ್ಪಡೆ ಮಾಡಬೇಕು ಎಂಬ ವಿಷಯದ ಕುರಿತು ವರಿಷ್ಠರು ಯಡಿಯೂರಪ್ಪನವರ ಜತೆ ಚರ್ಚೆ ನಡೆಸಲಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಸನಗೌಡ ಪಾಟೀಲ ಯತ್ನಾಳ ತೀವ್ರಯತ್ನ ನಡೆಸಿದ್ದಾರೆ. ಆದರೆ ತಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸಿಕೊಂಡು ಬಂದು, ಸರ್ಕಾರದ ವರ್ಚಸ್ಸು ಕೆಡಲು ಯತ್ನಾಳ ಕಾರಣ ಎಂದು ವಾದಿಸುತ್ತಿರುವ ಯಡಿಯೂರಪ್ಪ ಅವರು, ಯತ್ನಾಳ ಆಯ್ಕೆಗೆ ಸುತರಾಂ ಒಪ್ಪುವುದಿಲ್ಲ. ಹೀಗಾಗಿ, ಬಸವರಾಜ ಬೊಮ್ಮಾಯಿ ಆಯ್ಕೆ ಸಾಧ್ಯತೆ ಹೆಚ್ಚು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್: ಕಾಂಗ್ರೆಸ್

‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್‌ನ ಟ್ವಿಟರ್‌ ಘಟಕ ಶನಿವಾರ ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಹಂಚಿಕೊಂಡಿದೆ. ಈ ಮೂಲಕ ವಿಧಾನಸಭೆ ಚುನಾವಣೆ ನಡೆದು ಇದುವರೆಗೆ ಬಿಜೆಪಿ ವಿರೋಧಪಕ್ಷದ ನಾಯಕನನ್ನು ನೇಮಿಸದಿದ್ದಕ್ಕೆ ವ್ಯಂಗ್ಯವಾಡಿದೆ.

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ, ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಬರೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...