Homeಕರ್ನಾಟಕಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ, ಆಮೇಲೆ ಆಪರೇಶನ್ ಮಾಡಲಿ: ಬಿ.ಎಲ್. ಸಂತೋಷ್‌ಗೆ ಶೆಟ್ಟರ್ ತಿರುಗೇಟು

ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ, ಆಮೇಲೆ ಆಪರೇಶನ್ ಮಾಡಲಿ: ಬಿ.ಎಲ್. ಸಂತೋಷ್‌ಗೆ ಶೆಟ್ಟರ್ ತಿರುಗೇಟು

- Advertisement -
- Advertisement -

ಬಿ. ಎಲ್ ಸಂತೋಷ್ ಅವರು ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ, ಆಮೇಲೆ ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇತ್ತೀಚೆಗೆ ಬಿಎಲ್ ಸಂತೋಷ್ ಅವರು, ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ”ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ. ಪಕ್ಷದಲ್ಲಿರುವ ಶಾಸಕರನ್ನು,ಮಾಜಿ ಶಾಸಕರನ್ನು‌ ಉಳಿಸಿಕೊಳ್ಳಲಿ. ಬಿಜೆಪಿ ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕು” ಎಂದು ತಿರುಗೇಟು ನೀಡಿದ್ದಾರೆ.

”ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ? ಬೆಳಗ್ಗೆಯಿಂದ ಸಾಯಂಕಾಲದ ವರೆಗೂ ಆಪರೇಶನ್ ‌ಮಾಡುವುದೇ ಬಿಜೆಪಿಯ ಕೆಲಸ. ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡೋದು. ನಮ್ಮ ರಾಜ್ಯದಲ್ಲಿಯೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ. ಕಾಂಗ್ರೆಸ್‌ಗೆ 136 ಸೀಟ್ ಬಂದಿದೆ. ರಾಜ್ಯದಲ್ಲಿ ಗಟ್ಟಿ ಮುಟ್ಟಾದ ಸರ್ಕಾರವಿದೆ. ಯಾರು ರಾಜೀನಾಮೆ ಕೊಟ್ಟು ಹೋಗುತ್ತಾರೆ” ಎಂದರು.

”ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಬಾರಿಯೂ ಬಹುಮತ ಬರಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ದಿನದಿಂದ ದಿನಕ್ಕೆ ಅಧೋಗತಿಗೆ ಹೋಗುತ್ತಿರುವ ಬಿಜೆಪಿ, ಮುಳುಗುತ್ತಿರುವ ಹಡಗಿನಂತಾಗಿದೆ. ಇದಕ್ಕೆ ಕಾರಣ ಬಿಜೆಪಿ‌ ಕೆಲವೇ ಜನರ ಕೈಯಲ್ಲಿರೋದು. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ಬಿಜೆಪಿಯ ಕೆಲಸವಾಗಿದೆ. ರಾಜ್ಯ ಬಿಜೆಪಿ ನಾಯಕರ ಪರಸ್ಥಿತಿ ಇಡೀ ಜಗತ್ತಿಗೆ ಗೊತ್ತಾಗಿದೆ. ಬಿ.ಎಲ್. ಸಂತೋಷ್ ಅವರ ಬಗ್ಗೆ ದೆಹಲಿಯಲ್ಲಿ ಕೂತ ಬಿಜೆಪಿ ನಾಯಕರು ಯೋಚನೆ ಮಾಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...