Homeಮುಖಪುಟಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

- Advertisement -
- Advertisement -

ವಕೀಲರು ಮತ್ತು ನ್ಯಾಯಾಧೀಶರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನೇಷನ್ ನೀಡಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ಹೂಡಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಬುಧವಾರ ಹೇಳಿದ್ದು, ಕೆಲವು ನಿರ್ಧಾರಗಳನ್ನು “ಕಾರ್ಯನಿರ್ವಾಹಕರ ಬುದ್ಧಿವಂತಿಕೆಗೆ” ಬಿಡಬೇಕು ಎಂದಿದೆ. ಮುಂಬೈ ಮೂಲದ ವಕೀಲರ ಗುಂಪೊಂದು ಈ ಪಿಐಎಲ್ ಸಲ್ಲಿಸಿದ್ದು, ಸಿಬ್ಬಂದಿ ಸೇರಿದಂತೆ ನ್ಯಾಯಾಂಗದ ಸದಸ್ಯರಿಗೆ ಮೊದಲು ಲಸಿಕೆ ಹಾಕಬೇಕು ಎಂದು ಮನವಿ ಮಾಡಿದ್ದರು.

ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರ ನ್ಯಾಯಪೀಠವು ಈ ಮನವಿಯನ್ನು ಆಲಿಸಿ, ಪೌರ ಕಾರ್ಮಿಕರು ಮತ್ತು ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳಂತಹ ಅನೇಕರು ಸಾಂಕ್ರಾಮಿಕ ರೋಗದ ಮಧ್ಯೆ ಕೆಲಸ ಮುಂದುವರಿಸಿದ್ದಾರೆ. ಡಬ್ಬಾವಾಲಾಗಳು, ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳು ಪಿಐಎಲ್ ಯಾಕೆ ಸಲ್ಲಿಸಬಾರದು? ಎಲ್ಲರೂ ಮುಂಚೂಣಿ ಕೆಲಸಗಾರರಾಗಿದ್ದಾರೆ” ಎಂದು ಹೇಳಿದೆ.

ಇದನ್ನೂ ಓದಿ: ಇಂದು ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸಲಿರುವ ಮಮತಾ ಬ್ಯಾನರ್ಜಿ; ಅವರು ಹೇಳಿದ್ದೇನು?

“ಕೆಲವೊಂದು ಕೆಲಸಗಳನ್ನು ಕಾರ್ಯನಿರ್ವಾಹಕನ ಬುದ್ಧಿವಂತಿಕೆಗೆ ಬಿಡಬೇಕು. ವ್ಯಾಕ್ಸಿನೇಷನ್‌ ನೀತಿಯಲ್ಲಿ ಏನು ತಪ್ಪಾಗಿದೆ ಎಂದು ನಮಗೆ ತಿಳಿಸಿ? ತಪ್ಪುಗಳಿಲ್ಲದ ನೀತಿ ನಿರ್ಧಾರದಲ್ಲಿ ನ್ಯಾಯಾಲಯವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ಅದು ಹೇಳಿದೆ.

“ನೀವು ‘ಟೈಟಾನಿಕ್’ ಚಲನಚಿತ್ರವನ್ನು ನೋಡಿದ್ದೀರಾ? ಹಡಗಿನ ಕ್ಯಾಪ್ಟನ್ ಅನ್ನು ನೀವು ನೆನಪಿಸಿಕೊಳ್ಳಿ? ಇತರೆ ಪ್ರಯಾಣಿಕರನ್ನು ಸ್ಥಳಾಂತರಿಸುವವರೆಗೂ ಅವನು ಕಾದಿರುತ್ತಾನೆ. ಮೊದಲು, ಪ್ರತಿಯೊಬ್ಬರೂ ಲಸಿಕೆಯನ್ನು ಪಡೆಯಲಿ ನಂತರದ ಆದ್ಯತೆ ನ್ಯಾಯಾಂಗಕ್ಕೆ. ನಾನು ಇಲ್ಲಿ ನಾಯಕನಾಗಿದ್ದೇನೆ” ಎಂದು ಮುಖ್ಯ ನ್ಯಾಯಮೂರ್ತಿ ದತ್ತಾ ಹೇಳಿದ್ದಾರೆ.

ಭಾರತದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಜನವರಿ 16 ರಂದು ಪ್ರಾರಂಭವಾಗಿದ್ದು, ಆರೋಗ್ಯ ಕಾರ್ಯಕರ್ತರು, ಪುರಸಭೆಯ ಕಾರ್ಮಿಕರು, ಪೊಲೀಸ್, ರಕ್ಷಣಾ ಸಿಬ್ಬಂದಿ ಸೇರಿದಂತೆ ಇತರ ಮುಂಚೂಣಿ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಲಾಗಿತ್ತು.

ಇದನ್ನೂ ಓದಿ: ಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...