Homeಮುಖಪುಟಭಾರತಕ್ಕೆ ಬಂತು ಮೊದಲ ಪದಕ: ವೇಟ್ ಲಿಫ್ಟಿಂಗ್‌ನಲ್ಲಿ ಸಂಕೇತ್ ಸರ್ಗರ್‌ಗೆ ಬೆಳ್ಳಿ

ಭಾರತಕ್ಕೆ ಬಂತು ಮೊದಲ ಪದಕ: ವೇಟ್ ಲಿಫ್ಟಿಂಗ್‌ನಲ್ಲಿ ಸಂಕೇತ್ ಸರ್ಗರ್‌ಗೆ ಬೆಳ್ಳಿ

- Advertisement -
- Advertisement -

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಎರಡನೇ ದಿನವಾದ ಇಂದು ಭಾರತ ಪದಕದ ಖಾತೆ ತೆರೆದಿದೆ. 55 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ 113 ಕೆಜಿ ಭಾರ ಎತ್ತಿರುವ ಭಾರತದ ಸ್ಪರ್ಧೆಯಲ್ಲಿ ಸಂಕೇತ್ ಸರ್ಗರ್ ಕ್ಲೀನ್ ಅಂಡ್ ಜರ್ಕ್‌ನಲ್ಲಿ ಒಟ್ಟು 135 ಕೆಜಿ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಭಾಜನರಾದರು.

ಮಲೇಷ್ಯಾದ ಮೊಹಮ್ಮದ್ ಅನಿಕ್ ಕ್ಲೀನ್ ಮತ್ತು ಜರ್ಕ್‌ನಲ್ಲಿ 142 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಸಂಕೇತ್ ಸರ್ಗರ್ 139 ಕೆಜಿ ಭಾರ ಎತ್ತುವಾಗ ಸತತವಾಗಿ ಎರಡು ಬಾರಿ ಪೌಲ್ ಆದರು ಮತ್ತು ಗಾಯಕ್ಕೊಳಗಾಗಿದ್ದರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

22 ವರ್ಷದ ಸಂಕೇತ್ ಸರ್ಗರ್ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯವರು. ಬಹುಶಿಸ್ತೀನಿ ಸ್ಪರ್ಧೆಯಲ್ಲಿ ಇದು ಅವರ ಮೊದಲ ಪದಕವಾಗಿದೆ.

ಇಂದು ಸ್ಟಾರ್ ವೇಟ್ ಲಿಫ್ಟರ್ ಮೀರಾಭಾಯಿ ಚಾನು ರವರು ಭಾರತದ ಪರವಾಗಿ ಕಣಕ್ಕಿಳಿದಿದ್ದಾರೆ. ಟೋಕಿಯೋ ಒಲಂಪಿಕ್ಸ್ ನ ಬೆಳ್ಳಿ ವಿಜೇತೆ ಆಗಿರುವ ಚಾನು ಕಾಮನ್ ವೆಲ್ತ್ ನ ಪದಕವನ್ನು ಗೆಲ್ಲುವ ಫೆವರೀಟ್‌ಗಳಲ್ಲಿ ಒಬ್ಬರಾಗಿದ್ದಾರೆ.

ಭಾರತದ ಶ್ರೀ ಹರಿ ನಟರಾಜ್ ಪುರುಷರ ವಿಭಾಗದ 100 ಮೀ ಬ್ಯಾಕ್ ಸ್ಟ್ರೋಕ್ ಈಜು ಸ್ಪರ್ಧೆಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು ಪದಕದ ಭರವಸೆ ಮೂಡಿಸಿದ್ದಾರೆ. ಶುಕ್ರವಾರದ ಪಂದ್ಯದಲ್ಲಿ 54.68. ಸೆ.ಗಳೊಂದಿಗೆ 3 ನೇ ಸ್ಥಾನ ಹಾಗೂ ಪಂದ್ಯದಲ್ಲಿ ಒಟ್ಟಾರೆ 5 ನೇ ಸ್ಥಾನ ಪಡೆದು ಸೆಮಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಮಹಿಳಾ ಬಾಕ್ಸರ್ ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚು ಮತ್ತು 2018 ಮತ್ತು 2019 ರ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ಪಡೆದಿರುವ ಲವ್ಲೀನಾ ಬೊರ್ಗೊಹೈನ್ ಕಾಮನ್ ವೆಲ್ತ್ ಗೇಮ್ಸ್ ನ ಬಾಕ್ಸಿಂಗ್ ತಂಡದ ನೇತೃತ್ವ ವಹಿಸಿಕೊಂಡಿದ್ದು ಸ್ವರ್ಣ ಪದಕ ಗೆದ್ದುಕೊಡಬಲ್ಲ ನಿರೀಕ್ಷೆ ಹುಟ್ಟಿಸಿದ್ದಾರೆ.

ಇದನ್ನೂ ಓದಿ: ಟಿ20ಯಲ್ಲಿ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ: ವೆಸ್ಟ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...