Homeಮುಖಪುಟಉದ್ಯೋಗದಲ್ಲಿ 75% ಸ್ಥಳೀಯರಿಗೆ ಆದ್ಯತೆ: ಹರಿಯಾಣ ಸರ್ಕಾರದ ನಿರ್ಧಾರಕ್ಕೆ ವಿರೋಧ..

ಉದ್ಯೋಗದಲ್ಲಿ 75% ಸ್ಥಳೀಯರಿಗೆ ಆದ್ಯತೆ: ಹರಿಯಾಣ ಸರ್ಕಾರದ ನಿರ್ಧಾರಕ್ಕೆ ವಿರೋಧ..

ಖಾಸಗಿ ವಲಯದಲ್ಲಿನ ನೇಮಕಾತಿಗಳಲ್ಲಿ 75% ಸ್ಥಳೀಯ ಆದ್ಯತೆ ಮತ್ತು 50,000 ಕ್ಕೆ ಕಡಿಮೆ ಇಲ್ಲದಂತೆ ವೇತನ ನೀಡುವ ‘ಸ್ಥಳೀಯ ಅಭ್ಯರ್ಥಿಗಳ ಹರಿಯಾಣ ರಾಜ್ಯ ಉದ್ಯೋಗ 2020’ನ್ನು ರೂಪಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.

- Advertisement -
- Advertisement -

ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣದ ಬಿಜೆಪಿ ಸರ್ಕಾರದ ಸ್ಥಳೀಯರಿಗೆ 75% ಹೊಸ ಉದ್ಯೋಗಗಳನ್ನು ಕಾಯ್ದಿರಿಸುವ ಪ್ರಸ್ತಾಪಕ್ಕೆ ಕೈಗಾರಿಕಾ ಸಂಸ್ಥೆಗಳು, ಟ್ರೇಡ್ ಯೂನಿಯನ್ ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಖಾಸಗಿ ವಲಯದಲ್ಲಿನ ನೇಮಕಾತಿಗಳಲ್ಲಿ 75% ಸ್ಥಳೀಯರಿಗೆ ಆದ್ಯತೆ ಮತ್ತು 50,000 ಕ್ಕೆ ಕಡಿಮೆ ಇಲ್ಲದಂತೆ ವೇತನ ನೀಡುವ ‘ಸ್ಥಳೀಯ ಅಭ್ಯರ್ಥಿಗಳ ಹರಿಯಾಣ ರಾಜ್ಯ ಉದ್ಯೋಗ ನೀತಿ 2020’ನ್ನು ರೂಪಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.

ಸುಗ್ರೀವಾಜ್ಞೆಯ ಕರಡನ್ನು ಅದರ ಮುಂದಿನ ಸಭೆಯಲ್ಲಿ ಸಚಿವರ ಪರಿಷತ್ತಿನ ಮುಂದೆ ಇಡಲು ನಿರ್ಧರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆ ಅಗತ್ಯವಾಗಿರುತ್ತದೆ.

ಕಳೆದ ವರ್ಷ ಆಂಧ್ರಪ್ರದೇಶ ಸರ್ಕಾರವು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮತ್ತು ಮುಂಬರುವ ಕೈಗಾರಿಕೆಗಳು ಸ್ಥಳೀಯರಿಗೆ ಉದ್ಯೋಗವನ್ನು ಕಾಯ್ದಿರಿಸುವುದನ್ನು ಕಡ್ಡಾಯಗೊಳಿಸಿತು. ಅಂತೆಯೇ, ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವೂ ಕೈಗಾರಿಕೆಗಳಲ್ಲಿ ಇದೇ ರೀತಿಯ ಸ್ಥಳೀಯರಿಗೆ ಆದ್ಯತೆ ನೀಡುವ ಕಾಯ್ದೆಯನ್ನು ಘೋಷಿಸಿತ್ತು.

“ಇಂತಹ ನೀತಿಗಳು ಹಲವಾರು ರಾಜ್ಯಗಳಲ್ಲಿನ ಕಾರ್ಮಿಕರ ಪೂರೈಕೆ ಮತ್ತು ಬೇಡಿಕೆಯ ನಡುವೆ ಕಂದಕವನ್ನು ಉಂಟು ಮಾಡುತ್ತವೆ” ಎಂದು ಐಐಟಿ-ದೆಹಲಿಯ ಸಹಾಯಕ ಪ್ರಾಧ್ಯಾಪಕ ಜೈನ್ ಜೋಸ್ ಥಾಮಸ್ ಹೇಳಿದರು. “ಕಾರ್ಮಿಕರು ಮತ್ತು ಕೈಗಾರಿಕೀಕರಣ” ಎಂಬುದು ಇವರ ಸಂಶೋಧನಾ ವಿಷಯವಾಗಿದೆ.

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಮಾನೇಸರ್ ಘಟಕದ ಪ್ರಧಾನ ಕಾರ್ಯದರ್ಶಿ ಸತ್‌ಬಿರ್ ಸಿಂಗ್ ಹರಿಯಾಣ ಸರ್ಕಾರದ ಕ್ರಮವನ್ನು “ಪೊಲಿಟಿಕಲ್ ಗಿಮಿಕ್” ಎಂದು ಕರೆದಿದ್ದಾರೆ. “ರಾಜ್ಯದಲ್ಲಿ ಸಾಕಷ್ಟು ಉದ್ಯೋಗಗಳು ಇಲ್ಲದಿದ್ದಾಗ ಮೀಸಲಾತಿಯನ್ನು ಘೋಷಿಸುವ ಮೂಲಕ ಸ್ಥಳೀಯರನ್ನು ಮರುಳು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದ್ದಾರೆ. ಸ್ಥಳೀಯರು ಮತ್ತು ವಲಸೆ ಕಾರ್ಮಿಕರ ನಡುವೆ ಬಿರುಕು ಮೂಡಿಸುವುದು ಮತ್ತು ಕಾರ್ಮಿಕ ವರ್ಗವನ್ನು ವಿಭಜಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಾನೇಸರ್ ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ್ ಗೇನ್ಡ್ ಇದನ್ನು ಕಠಿಣ ನಡೆ ಎಂದು ಕರೆದಿದ್ದಾರೆ. ಇದು ಲಂಚ ಮತ್ತು ದಂಡಕ್ಕೆ ಆಹ್ವಾನ ನೀಡುತ್ತದೆ. ಮಾನೇಸರ್ ನಲ್ಲಿ 80% ಕಾರ್ಮಿಕರು ವಲಸಿಗರು. ಇವರನ್ನು ತೆಗೆದು ಹಾಕಿ ಈಗ ಸ್ಥಳೀಯರಿಗೆ ಅವಕಾಶ ನೀಡುವುದು ಅಸಾಧ್ಯವಾಗಿದೆ. ಈಗಾಗಲೇ ಕೈಗಾರಿಕೆಗಳು ಹಿನ್ನಡೆಯುತ್ತಿರುವಾಗ, ಇಂತಹ ಕ್ರಮವನ್ನು ತರುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...