Homeಮುಖಪುಟಉದ್ಯೋಗದಲ್ಲಿ 75% ಸ್ಥಳೀಯರಿಗೆ ಆದ್ಯತೆ: ಹರಿಯಾಣ ಸರ್ಕಾರದ ನಿರ್ಧಾರಕ್ಕೆ ವಿರೋಧ..

ಉದ್ಯೋಗದಲ್ಲಿ 75% ಸ್ಥಳೀಯರಿಗೆ ಆದ್ಯತೆ: ಹರಿಯಾಣ ಸರ್ಕಾರದ ನಿರ್ಧಾರಕ್ಕೆ ವಿರೋಧ..

ಖಾಸಗಿ ವಲಯದಲ್ಲಿನ ನೇಮಕಾತಿಗಳಲ್ಲಿ 75% ಸ್ಥಳೀಯ ಆದ್ಯತೆ ಮತ್ತು 50,000 ಕ್ಕೆ ಕಡಿಮೆ ಇಲ್ಲದಂತೆ ವೇತನ ನೀಡುವ ‘ಸ್ಥಳೀಯ ಅಭ್ಯರ್ಥಿಗಳ ಹರಿಯಾಣ ರಾಜ್ಯ ಉದ್ಯೋಗ 2020’ನ್ನು ರೂಪಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.

- Advertisement -
- Advertisement -

ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣದ ಬಿಜೆಪಿ ಸರ್ಕಾರದ ಸ್ಥಳೀಯರಿಗೆ 75% ಹೊಸ ಉದ್ಯೋಗಗಳನ್ನು ಕಾಯ್ದಿರಿಸುವ ಪ್ರಸ್ತಾಪಕ್ಕೆ ಕೈಗಾರಿಕಾ ಸಂಸ್ಥೆಗಳು, ಟ್ರೇಡ್ ಯೂನಿಯನ್ ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಖಾಸಗಿ ವಲಯದಲ್ಲಿನ ನೇಮಕಾತಿಗಳಲ್ಲಿ 75% ಸ್ಥಳೀಯರಿಗೆ ಆದ್ಯತೆ ಮತ್ತು 50,000 ಕ್ಕೆ ಕಡಿಮೆ ಇಲ್ಲದಂತೆ ವೇತನ ನೀಡುವ ‘ಸ್ಥಳೀಯ ಅಭ್ಯರ್ಥಿಗಳ ಹರಿಯಾಣ ರಾಜ್ಯ ಉದ್ಯೋಗ ನೀತಿ 2020’ನ್ನು ರೂಪಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.

ಸುಗ್ರೀವಾಜ್ಞೆಯ ಕರಡನ್ನು ಅದರ ಮುಂದಿನ ಸಭೆಯಲ್ಲಿ ಸಚಿವರ ಪರಿಷತ್ತಿನ ಮುಂದೆ ಇಡಲು ನಿರ್ಧರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆ ಅಗತ್ಯವಾಗಿರುತ್ತದೆ.

ಕಳೆದ ವರ್ಷ ಆಂಧ್ರಪ್ರದೇಶ ಸರ್ಕಾರವು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮತ್ತು ಮುಂಬರುವ ಕೈಗಾರಿಕೆಗಳು ಸ್ಥಳೀಯರಿಗೆ ಉದ್ಯೋಗವನ್ನು ಕಾಯ್ದಿರಿಸುವುದನ್ನು ಕಡ್ಡಾಯಗೊಳಿಸಿತು. ಅಂತೆಯೇ, ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವೂ ಕೈಗಾರಿಕೆಗಳಲ್ಲಿ ಇದೇ ರೀತಿಯ ಸ್ಥಳೀಯರಿಗೆ ಆದ್ಯತೆ ನೀಡುವ ಕಾಯ್ದೆಯನ್ನು ಘೋಷಿಸಿತ್ತು.

“ಇಂತಹ ನೀತಿಗಳು ಹಲವಾರು ರಾಜ್ಯಗಳಲ್ಲಿನ ಕಾರ್ಮಿಕರ ಪೂರೈಕೆ ಮತ್ತು ಬೇಡಿಕೆಯ ನಡುವೆ ಕಂದಕವನ್ನು ಉಂಟು ಮಾಡುತ್ತವೆ” ಎಂದು ಐಐಟಿ-ದೆಹಲಿಯ ಸಹಾಯಕ ಪ್ರಾಧ್ಯಾಪಕ ಜೈನ್ ಜೋಸ್ ಥಾಮಸ್ ಹೇಳಿದರು. “ಕಾರ್ಮಿಕರು ಮತ್ತು ಕೈಗಾರಿಕೀಕರಣ” ಎಂಬುದು ಇವರ ಸಂಶೋಧನಾ ವಿಷಯವಾಗಿದೆ.

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಮಾನೇಸರ್ ಘಟಕದ ಪ್ರಧಾನ ಕಾರ್ಯದರ್ಶಿ ಸತ್‌ಬಿರ್ ಸಿಂಗ್ ಹರಿಯಾಣ ಸರ್ಕಾರದ ಕ್ರಮವನ್ನು “ಪೊಲಿಟಿಕಲ್ ಗಿಮಿಕ್” ಎಂದು ಕರೆದಿದ್ದಾರೆ. “ರಾಜ್ಯದಲ್ಲಿ ಸಾಕಷ್ಟು ಉದ್ಯೋಗಗಳು ಇಲ್ಲದಿದ್ದಾಗ ಮೀಸಲಾತಿಯನ್ನು ಘೋಷಿಸುವ ಮೂಲಕ ಸ್ಥಳೀಯರನ್ನು ಮರುಳು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದ್ದಾರೆ. ಸ್ಥಳೀಯರು ಮತ್ತು ವಲಸೆ ಕಾರ್ಮಿಕರ ನಡುವೆ ಬಿರುಕು ಮೂಡಿಸುವುದು ಮತ್ತು ಕಾರ್ಮಿಕ ವರ್ಗವನ್ನು ವಿಭಜಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಾನೇಸರ್ ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ್ ಗೇನ್ಡ್ ಇದನ್ನು ಕಠಿಣ ನಡೆ ಎಂದು ಕರೆದಿದ್ದಾರೆ. ಇದು ಲಂಚ ಮತ್ತು ದಂಡಕ್ಕೆ ಆಹ್ವಾನ ನೀಡುತ್ತದೆ. ಮಾನೇಸರ್ ನಲ್ಲಿ 80% ಕಾರ್ಮಿಕರು ವಲಸಿಗರು. ಇವರನ್ನು ತೆಗೆದು ಹಾಕಿ ಈಗ ಸ್ಥಳೀಯರಿಗೆ ಅವಕಾಶ ನೀಡುವುದು ಅಸಾಧ್ಯವಾಗಿದೆ. ಈಗಾಗಲೇ ಕೈಗಾರಿಕೆಗಳು ಹಿನ್ನಡೆಯುತ್ತಿರುವಾಗ, ಇಂತಹ ಕ್ರಮವನ್ನು ತರುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...