Homeಮುಖಪುಟಉದ್ಯೋಗದಲ್ಲಿ 75% ಸ್ಥಳೀಯರಿಗೆ ಆದ್ಯತೆ: ಹರಿಯಾಣ ಸರ್ಕಾರದ ನಿರ್ಧಾರಕ್ಕೆ ವಿರೋಧ..

ಉದ್ಯೋಗದಲ್ಲಿ 75% ಸ್ಥಳೀಯರಿಗೆ ಆದ್ಯತೆ: ಹರಿಯಾಣ ಸರ್ಕಾರದ ನಿರ್ಧಾರಕ್ಕೆ ವಿರೋಧ..

ಖಾಸಗಿ ವಲಯದಲ್ಲಿನ ನೇಮಕಾತಿಗಳಲ್ಲಿ 75% ಸ್ಥಳೀಯ ಆದ್ಯತೆ ಮತ್ತು 50,000 ಕ್ಕೆ ಕಡಿಮೆ ಇಲ್ಲದಂತೆ ವೇತನ ನೀಡುವ ‘ಸ್ಥಳೀಯ ಅಭ್ಯರ್ಥಿಗಳ ಹರಿಯಾಣ ರಾಜ್ಯ ಉದ್ಯೋಗ 2020’ನ್ನು ರೂಪಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.

- Advertisement -
- Advertisement -

ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣದ ಬಿಜೆಪಿ ಸರ್ಕಾರದ ಸ್ಥಳೀಯರಿಗೆ 75% ಹೊಸ ಉದ್ಯೋಗಗಳನ್ನು ಕಾಯ್ದಿರಿಸುವ ಪ್ರಸ್ತಾಪಕ್ಕೆ ಕೈಗಾರಿಕಾ ಸಂಸ್ಥೆಗಳು, ಟ್ರೇಡ್ ಯೂನಿಯನ್ ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಖಾಸಗಿ ವಲಯದಲ್ಲಿನ ನೇಮಕಾತಿಗಳಲ್ಲಿ 75% ಸ್ಥಳೀಯರಿಗೆ ಆದ್ಯತೆ ಮತ್ತು 50,000 ಕ್ಕೆ ಕಡಿಮೆ ಇಲ್ಲದಂತೆ ವೇತನ ನೀಡುವ ‘ಸ್ಥಳೀಯ ಅಭ್ಯರ್ಥಿಗಳ ಹರಿಯಾಣ ರಾಜ್ಯ ಉದ್ಯೋಗ ನೀತಿ 2020’ನ್ನು ರೂಪಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.

ಸುಗ್ರೀವಾಜ್ಞೆಯ ಕರಡನ್ನು ಅದರ ಮುಂದಿನ ಸಭೆಯಲ್ಲಿ ಸಚಿವರ ಪರಿಷತ್ತಿನ ಮುಂದೆ ಇಡಲು ನಿರ್ಧರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆ ಅಗತ್ಯವಾಗಿರುತ್ತದೆ.

ಕಳೆದ ವರ್ಷ ಆಂಧ್ರಪ್ರದೇಶ ಸರ್ಕಾರವು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮತ್ತು ಮುಂಬರುವ ಕೈಗಾರಿಕೆಗಳು ಸ್ಥಳೀಯರಿಗೆ ಉದ್ಯೋಗವನ್ನು ಕಾಯ್ದಿರಿಸುವುದನ್ನು ಕಡ್ಡಾಯಗೊಳಿಸಿತು. ಅಂತೆಯೇ, ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವೂ ಕೈಗಾರಿಕೆಗಳಲ್ಲಿ ಇದೇ ರೀತಿಯ ಸ್ಥಳೀಯರಿಗೆ ಆದ್ಯತೆ ನೀಡುವ ಕಾಯ್ದೆಯನ್ನು ಘೋಷಿಸಿತ್ತು.

“ಇಂತಹ ನೀತಿಗಳು ಹಲವಾರು ರಾಜ್ಯಗಳಲ್ಲಿನ ಕಾರ್ಮಿಕರ ಪೂರೈಕೆ ಮತ್ತು ಬೇಡಿಕೆಯ ನಡುವೆ ಕಂದಕವನ್ನು ಉಂಟು ಮಾಡುತ್ತವೆ” ಎಂದು ಐಐಟಿ-ದೆಹಲಿಯ ಸಹಾಯಕ ಪ್ರಾಧ್ಯಾಪಕ ಜೈನ್ ಜೋಸ್ ಥಾಮಸ್ ಹೇಳಿದರು. “ಕಾರ್ಮಿಕರು ಮತ್ತು ಕೈಗಾರಿಕೀಕರಣ” ಎಂಬುದು ಇವರ ಸಂಶೋಧನಾ ವಿಷಯವಾಗಿದೆ.

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಮಾನೇಸರ್ ಘಟಕದ ಪ್ರಧಾನ ಕಾರ್ಯದರ್ಶಿ ಸತ್‌ಬಿರ್ ಸಿಂಗ್ ಹರಿಯಾಣ ಸರ್ಕಾರದ ಕ್ರಮವನ್ನು “ಪೊಲಿಟಿಕಲ್ ಗಿಮಿಕ್” ಎಂದು ಕರೆದಿದ್ದಾರೆ. “ರಾಜ್ಯದಲ್ಲಿ ಸಾಕಷ್ಟು ಉದ್ಯೋಗಗಳು ಇಲ್ಲದಿದ್ದಾಗ ಮೀಸಲಾತಿಯನ್ನು ಘೋಷಿಸುವ ಮೂಲಕ ಸ್ಥಳೀಯರನ್ನು ಮರುಳು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದ್ದಾರೆ. ಸ್ಥಳೀಯರು ಮತ್ತು ವಲಸೆ ಕಾರ್ಮಿಕರ ನಡುವೆ ಬಿರುಕು ಮೂಡಿಸುವುದು ಮತ್ತು ಕಾರ್ಮಿಕ ವರ್ಗವನ್ನು ವಿಭಜಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಾನೇಸರ್ ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ್ ಗೇನ್ಡ್ ಇದನ್ನು ಕಠಿಣ ನಡೆ ಎಂದು ಕರೆದಿದ್ದಾರೆ. ಇದು ಲಂಚ ಮತ್ತು ದಂಡಕ್ಕೆ ಆಹ್ವಾನ ನೀಡುತ್ತದೆ. ಮಾನೇಸರ್ ನಲ್ಲಿ 80% ಕಾರ್ಮಿಕರು ವಲಸಿಗರು. ಇವರನ್ನು ತೆಗೆದು ಹಾಕಿ ಈಗ ಸ್ಥಳೀಯರಿಗೆ ಅವಕಾಶ ನೀಡುವುದು ಅಸಾಧ್ಯವಾಗಿದೆ. ಈಗಾಗಲೇ ಕೈಗಾರಿಕೆಗಳು ಹಿನ್ನಡೆಯುತ್ತಿರುವಾಗ, ಇಂತಹ ಕ್ರಮವನ್ನು ತರುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...