Homeಮುಖಪುಟದೇಶದ ಮೊಟ್ಟಮೊದಲ ಶ್ರೀಗಂಧದ ವಸ್ತು ಸಂಗ್ರಹಾಲಯ ಮೈಸೂರು ಅರಮನೆಯಲ್ಲಿ!

ದೇಶದ ಮೊಟ್ಟಮೊದಲ ಶ್ರೀಗಂಧದ ವಸ್ತು ಸಂಗ್ರಹಾಲಯ ಮೈಸೂರು ಅರಮನೆಯಲ್ಲಿ!

ಮೈಸೂರು ನಗರವು ಈಗಾಗಲೇ ಶ್ರೀಗಂಧದ ಸಾಬೂನುಗಳು, ಶ್ರೀಗಂಧದ ಎಣ್ಣೆ, ಧೂಪದ್ರವ್ಯದ ಕೋಲುಗಳು ಇತ್ಯಾದಿಗಳಿಗೆ ಹೆಸರುವಾಸಿಯಾಗಿದೆ

- Advertisement -
- Advertisement -

ಭಾರತದಲ್ಲಿ ನೂರಾರು ವಸ್ತುಸಂಗ್ರಹಾಲಯಗಳಿದ್ದು ಪ್ರತಿಯೊಂದೂ ಕೂಡಾ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿದೆ. ಈ ಸಾಲಿಗೆ ಈಗ ದೇಶದ ಮೊಟ್ಟಮೊದಲ ಶ್ರೀಗಂಧದ ವಸ್ತು ಸಂಗ್ರಹಾಲಯವೂ ಸೇರಿಕೊಳ್ಳುತ್ತಿದ್ದು, ಇದು ಮೈಸೂರಿನಲ್ಲಿ ತಲೆಯೆತ್ತಲಿದೆ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಅದರಲ್ಲೂ ಈ ವಸ್ತು ಸಂಗ್ರಹಾಲಯವು ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ನಿರ್ಮಾಣವಾಗಲಿದೆ ಎನ್ನುವುದು ಈ ವಿಷಯಕ್ಕೆ ಮತ್ತಷ್ಟು ಮೆರುಗು ನೀಡಿದೆ.

ಮೈಸೂರು ನಗರವು ಈಗಾಗಲೇ ಗಂಧದ ಸಾಬೂನುಗಳು, ಗಂಧದ ಎಣ್ಣೆ, ಧೂಪದ್ರವ್ಯದ ಕೋಲುಗಳು ಇತ್ಯಾದಿಗಳಿಗೆ ಹೆಸರುವಾಸಿಯಾಗಿದೆ. ಈಗ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರು ದೇಶದ ಮೊದಲ ಶ್ರೀಗಂಧದ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸುವ ಭರವಸೆ ನೀಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ವರದಿಗಳ ಪ್ರಕಾರ ಈ ವಸ್ತುಸಂಗ್ರಹಾಲಯವನ್ನು, ಇತಿಹಾಸದ ಬಗ್ಗೆ ಮತ್ತು ಶ್ರೀಗಂಧದ ಉತ್ಪನ್ನಗಳ ಕೃಷಿಯ ಬಗ್ಗೆ ಜಾಗೃತಿ ಮೂಡಿಸಲು ಸಹಾಯ ಮಾಡುವ ರೀತಿಯಲ್ಲಿ ರಚಿಸಲು ಯೋಜನೆ ಮಾಡಲಾಗಿದೆ. ಜೊತೆಗೆಳ ಸೌಂದರ್ಯ ಮತ್ತು ವೈವಿಧ್ಯತೆಯನ್ನು ವೀಕ್ಷಿಸಲು ಇದು ಸಂದರ್ಶಕರಿಗೆ ಅವಕಾಶ ನೀಡುತ್ತದೆ.

ನವೆಂಬರ್ 25 ರ ನಂತರ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸುವ ಸಾಧ್ಯತೆಯಿದ್ದು, ನಂತರ ಇದನ್ನು ಪ್ರಸಿದ್ಧ ಮೈಸೂರು ಅರಮನೆಗೆ ಸ್ಥಳಾಂತರಿಸಲಾಗುವುದು.

ಇದನ್ನೂ ಓದಿ: ಕರ್ನಾಟಕದಲ್ಲಿ ಸಂಗೀತ ಮತ್ತು ಮೈಸೂರು ದಸರಾ – ಡಾ. ಶಶಿಕಾಂತ್ ಕೌಡೂರ್

ಪ್ರಸ್ತುತ ಈ ವಸ್ತುಸಂಗ್ರಹಾಲಯವನ್ನು ಮೈಸೂರು ಅರಣ್ಯ ವಿಭಾಗವು ತನ್ನ ಆವರಣದಲ್ಲಿ ಸ್ಥಾಪಿಸಿದೆ ಎಂದು ಅನೇಕ ವರದಿಗಳು ಉಲ್ಲೇಖಿಸಿವೆ.

ಈ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವವರಿಗೆ ಶ್ರೀ ಗಂಧದ ವರ್ಗೀಕರಣ, ಶ್ರೀಗಂಧದ ಕೃಷಿ ತಂತ್ರಗಳು ಮತ್ತು ಹಲವಾರು ಬಗೆಯ ಶ್ರೀಗಂಧದ ಮರಗಳ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಇದು ಒಂದು ವೇದಿಕೆಯಾಗಿದೆ.

ಇದನ್ನೂ ಓದಿ: ಕರ್ನಾಟಕ ಸಂಗೀತ, ಕನ್ನಡ ಮತ್ತು ಕನ್ನಡಿಗರು: ಹತ್ತೊಂಬತ್ತನೇ ಶತಮಾನದ ಮೈಸೂರು ಸಂಸ್ಥಾನದ ಕೆಲವು ನೋಟಗಳು

ವಸ್ತುಸಂಗ್ರಹಾಲಯದಲ್ಲಿ ಸಭಾಂಗಣ, ಪ್ರೊಜೆಕ್ಟರ್ ಪರದೆ ಮತ್ತು ಆರಾಮದಾಯಕ ಆಸನ ವ್ಯವಸ್ಥೆ ಇರುತ್ತದೆ. ಇಲ್ಲಿ ಶ್ರೀಗಂಧದ ಮರಕ್ಕೆ ಸಂಬಂಧಿಸಿದ ಆಡಿಯೋ ಮಾಹಿತಿಯನ್ನು ಪ್ರವಾಸಿಗರಿಗೆ ನೀಡಲಾಗುವುದು.

ಹತ್ತಾರು ಕಾರಣಗಳಿಗೆ ಪ್ರವಾಸಿಗರಿಂದ ಮೆಚ್ಚುಗೆ ಪಡೆದಿರುವ ಮೈಸೂರು, ಇದೀಗ ಮತ್ತೊಂದು ವಿಶೇಷತೆಯನ್ನು ತನ್ನ ಮಡಿಲಿಗೆ ಸೇರಿಸಿಕೊಳ್ಳಲಿದೆ. ಇನ್ನುಮುಂದೆ ಪ್ರವಾಸಕ್ಕೆಂದು ಮೈಸೂರಿಗೆ ಬರುವವರು ಈ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಬಹುದು.


ಇದನ್ನೂ ಓದಿ: ಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...