Homeಮುಖಪುಟ18ನೇ ಲೋಕಸಭೆ| ಇಂದಿನಿಂದ ಮೊದಲ ಅಧಿವೇಶನ: ಜೂ.26ರಂದು ಸ್ಪೀಕರ್ ಆಯ್ಕೆ

18ನೇ ಲೋಕಸಭೆ| ಇಂದಿನಿಂದ ಮೊದಲ ಅಧಿವೇಶನ: ಜೂ.26ರಂದು ಸ್ಪೀಕರ್ ಆಯ್ಕೆ

- Advertisement -
- Advertisement -

ಇಂದಿನಿಂದ (ಜೂನ್ 24) 18ನೇ ಲೋಕಸಭೆ ಯ ಮೊದಲ ಅಧಿವೇಶನ ಪ್ರಾರಂಭವಾಗಲಿದ್ದು, ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿಜೆಪಿ ನಾಯಕ ಮತ್ತು ಏಳು ಬಾರಿ ಸಂಸದರಾಗಿ ಅನುಭವ ಹೊಂದಿರುವ ಭರ್ತೃಹರಿ ಮಹತಾಬ್‌ ಅವರನ್ನು ಪ್ರಸ್ತುತ ಹಂಗಾಮಿ ಸ್ಪೀಕರ್‌ ಆಗಿ ನೇಮಿಸಲಾಗಿದೆ.

ರಾಷ್ಟ್ರಪತಿ ಶಿಷ್ಟಾಚಾರ ಮೀರಿ ಮಹತಾಬ್‌ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿರುವ ಆರೋಪ ಕೇಳಿ ಬಂದಿದೆ. ಈ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ಸದಸ್ಯ ಕೆ. ಸುರೇಶ್‌ ಅವರ ಹೆಸರನ್ನು ಸೂಚಿಸಲಾಗಿದ್ದರೂ, ಸರ್ಕಾರ ಕಡೆಗಣಿಸಿದೆ ಎಂದು ಹೇಳಲಾಗ್ತಿದೆ. ಈ ಸಂಬಂಧ ಸೃಷ್ಟಿಯಾಗಿರುವ ವಿವಾದವು ಅಧಿವೇಶನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರತಿಪಕ್ಷಗಳು ರಾಷ್ಟ್ರಪತಿ ಮತ್ತು ಕೇಂದ್ರದ ನಡೆಯನ್ನು ಟೀಕಿಸಿವೆ.

ಮಹತಾಬ್‌ ಅವರು ಸತತವಾಗಿ ಏಳು ಬಾರಿ ಲೋಕಸಭೆ ಸದಸ್ಯರಾಗಿದ್ದು, ಹಂಗಾಮಿ ಸ್ಪೀಕರ್‌ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಪ್ರತಿಪಾದಿಸಿದ್ದಾರೆ. ಸುರೇಶ್‌ ಅವರು 1998 ಮತ್ತು 2004ರ ಚುನಾವಣೆಯಲ್ಲಿ ಸೋತಿದ್ದರು ಎಂದೂ ಅವರು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಮಹತಾಬ್‌ ಅವರಿಗೆ ಇಂದು ಬೆಳಿಗ್ಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಬಳಿಕ ಮಹತಾಬ್‌ ಅವರು ಸಂಸತ್‌ ಭವನ ತಲುಪಿ, ಬೆಳಿಗ್ಗೆ 11 ಗಂಟೆಗೆ ಲೋಕಸಭೆ ಅಧಿವೇಶನ ಆರಂಭಿಸಲಿದ್ದಾರೆ.

ಅಗಲಿದ ಗಣ್ಯರ ಗೌರವ ನಮನ ಸಲ್ಲಿಸುವ ಮೂಲಕ ಕಲಾಪ ಆರಂಭವಾಗಲಿದೆ. ಮೊದಲಿಗೆ ಲೋಕಸಭೆಯ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಹಂಗಾಮಿ ಸ್ಪೀಕರ್‌ ಕರೆ ನೀಡಲಿದ್ದಾರೆ.

ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್‌ಗೆ ನೆರವಾಗಲು ಸದಸ್ಯರಾದ ಕೆ. ಸುರೇಶ್‌ (ಕಾಂಗ್ರೆಸ್‌), ಟಿ.ಆರ್‌.ಬಾಲು (ಡಿಎಂಕೆ), ರಾಧಾ ಮೋಹನ್‌ ಸಿಂಗ್‌, ಫಗ್ಗನ್‌ ಸಿಂಗ್‌ ಕುಲಸ್ತೆ (ಇಬ್ಬರೂ ಬಿಜೆಪಿ) ಹಾಗೂ ಸುದೀಪ್‌ ಬಂದ್ಯೋಪಾಧ್ಯಾಯ (ಟಿಎಂಸಿ) ಅವರನ್ನು ರಾಷ್ಟ್ರಪತಿ ನೇಮಿಸಿದ್ದಾರೆ.

ನರೇಂದ್ರ ಮೋದಿಯ ಬಳಿಕ, ಮಂತ್ರಿ ಪರಿಷತ್ತಿನ ಸದಸ್ಯರು ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ನಂತರ ಎರಡು ದಿನಗಳವರೆಗೆ ಉಳಿದ ಸದಸ್ಯರ ಪ್ರಮಾಣವಚನ ಪ್ರಕ್ರಿಯೆ ನಡೆಯಲಿದೆ.

ರಾಷ್ಟ್ರಪತಿಯವರ ಭಾಷಣದ ಮೇಲಿನ ಚರ್ಚೆಯು ಜೂನ್ 28ರಂದು ಪ್ರಾರಂಭವಾಗಲಿದ್ದು, ಜುಲೈ 2 ಅಥವಾ 3ರಂದು ಪ್ರಧಾನಿ ಚರ್ಚೆಗೆ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ನಂತರ ಎರಡೂ ಸದನಗಳನ್ನು ಸಂಕ್ಷಿಪ್ತ ಅವಧಿಗೆ ಮುಂದೂಡಲಾಗುತ್ತದೆ. ಕೇಂದ್ರ ಬಜೆಟ್‌ ಮಂಡನೆಗಾಗಿ ಜುಲೈ 22ರಂದು ಮತ್ತೆ ಸದನದ ಕಲಾಪ ನಡೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ : ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣ: ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಆರಂಭಿಸಿದ ಸಿಬಿಐ, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...