Homeಮುಖಪುಟ18ನೇ ಲೋಕಸಭೆ| ಇಂದಿನಿಂದ ಮೊದಲ ಅಧಿವೇಶನ: ಜೂ.26ರಂದು ಸ್ಪೀಕರ್ ಆಯ್ಕೆ

18ನೇ ಲೋಕಸಭೆ| ಇಂದಿನಿಂದ ಮೊದಲ ಅಧಿವೇಶನ: ಜೂ.26ರಂದು ಸ್ಪೀಕರ್ ಆಯ್ಕೆ

- Advertisement -
- Advertisement -

ಇಂದಿನಿಂದ (ಜೂನ್ 24) 18ನೇ ಲೋಕಸಭೆ ಯ ಮೊದಲ ಅಧಿವೇಶನ ಪ್ರಾರಂಭವಾಗಲಿದ್ದು, ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿಜೆಪಿ ನಾಯಕ ಮತ್ತು ಏಳು ಬಾರಿ ಸಂಸದರಾಗಿ ಅನುಭವ ಹೊಂದಿರುವ ಭರ್ತೃಹರಿ ಮಹತಾಬ್‌ ಅವರನ್ನು ಪ್ರಸ್ತುತ ಹಂಗಾಮಿ ಸ್ಪೀಕರ್‌ ಆಗಿ ನೇಮಿಸಲಾಗಿದೆ.

ರಾಷ್ಟ್ರಪತಿ ಶಿಷ್ಟಾಚಾರ ಮೀರಿ ಮಹತಾಬ್‌ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿರುವ ಆರೋಪ ಕೇಳಿ ಬಂದಿದೆ. ಈ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ಸದಸ್ಯ ಕೆ. ಸುರೇಶ್‌ ಅವರ ಹೆಸರನ್ನು ಸೂಚಿಸಲಾಗಿದ್ದರೂ, ಸರ್ಕಾರ ಕಡೆಗಣಿಸಿದೆ ಎಂದು ಹೇಳಲಾಗ್ತಿದೆ. ಈ ಸಂಬಂಧ ಸೃಷ್ಟಿಯಾಗಿರುವ ವಿವಾದವು ಅಧಿವೇಶನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರತಿಪಕ್ಷಗಳು ರಾಷ್ಟ್ರಪತಿ ಮತ್ತು ಕೇಂದ್ರದ ನಡೆಯನ್ನು ಟೀಕಿಸಿವೆ.

ಮಹತಾಬ್‌ ಅವರು ಸತತವಾಗಿ ಏಳು ಬಾರಿ ಲೋಕಸಭೆ ಸದಸ್ಯರಾಗಿದ್ದು, ಹಂಗಾಮಿ ಸ್ಪೀಕರ್‌ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಪ್ರತಿಪಾದಿಸಿದ್ದಾರೆ. ಸುರೇಶ್‌ ಅವರು 1998 ಮತ್ತು 2004ರ ಚುನಾವಣೆಯಲ್ಲಿ ಸೋತಿದ್ದರು ಎಂದೂ ಅವರು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಮಹತಾಬ್‌ ಅವರಿಗೆ ಇಂದು ಬೆಳಿಗ್ಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಬಳಿಕ ಮಹತಾಬ್‌ ಅವರು ಸಂಸತ್‌ ಭವನ ತಲುಪಿ, ಬೆಳಿಗ್ಗೆ 11 ಗಂಟೆಗೆ ಲೋಕಸಭೆ ಅಧಿವೇಶನ ಆರಂಭಿಸಲಿದ್ದಾರೆ.

ಅಗಲಿದ ಗಣ್ಯರ ಗೌರವ ನಮನ ಸಲ್ಲಿಸುವ ಮೂಲಕ ಕಲಾಪ ಆರಂಭವಾಗಲಿದೆ. ಮೊದಲಿಗೆ ಲೋಕಸಭೆಯ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಹಂಗಾಮಿ ಸ್ಪೀಕರ್‌ ಕರೆ ನೀಡಲಿದ್ದಾರೆ.

ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್‌ಗೆ ನೆರವಾಗಲು ಸದಸ್ಯರಾದ ಕೆ. ಸುರೇಶ್‌ (ಕಾಂಗ್ರೆಸ್‌), ಟಿ.ಆರ್‌.ಬಾಲು (ಡಿಎಂಕೆ), ರಾಧಾ ಮೋಹನ್‌ ಸಿಂಗ್‌, ಫಗ್ಗನ್‌ ಸಿಂಗ್‌ ಕುಲಸ್ತೆ (ಇಬ್ಬರೂ ಬಿಜೆಪಿ) ಹಾಗೂ ಸುದೀಪ್‌ ಬಂದ್ಯೋಪಾಧ್ಯಾಯ (ಟಿಎಂಸಿ) ಅವರನ್ನು ರಾಷ್ಟ್ರಪತಿ ನೇಮಿಸಿದ್ದಾರೆ.

ನರೇಂದ್ರ ಮೋದಿಯ ಬಳಿಕ, ಮಂತ್ರಿ ಪರಿಷತ್ತಿನ ಸದಸ್ಯರು ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ನಂತರ ಎರಡು ದಿನಗಳವರೆಗೆ ಉಳಿದ ಸದಸ್ಯರ ಪ್ರಮಾಣವಚನ ಪ್ರಕ್ರಿಯೆ ನಡೆಯಲಿದೆ.

ರಾಷ್ಟ್ರಪತಿಯವರ ಭಾಷಣದ ಮೇಲಿನ ಚರ್ಚೆಯು ಜೂನ್ 28ರಂದು ಪ್ರಾರಂಭವಾಗಲಿದ್ದು, ಜುಲೈ 2 ಅಥವಾ 3ರಂದು ಪ್ರಧಾನಿ ಚರ್ಚೆಗೆ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ನಂತರ ಎರಡೂ ಸದನಗಳನ್ನು ಸಂಕ್ಷಿಪ್ತ ಅವಧಿಗೆ ಮುಂದೂಡಲಾಗುತ್ತದೆ. ಕೇಂದ್ರ ಬಜೆಟ್‌ ಮಂಡನೆಗಾಗಿ ಜುಲೈ 22ರಂದು ಮತ್ತೆ ಸದನದ ಕಲಾಪ ನಡೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ : ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣ: ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಆರಂಭಿಸಿದ ಸಿಬಿಐ, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...