Homeಮುಖಪುಟ18ನೇ ಲೋಕಸಭೆ| ಇಂದಿನಿಂದ ಮೊದಲ ಅಧಿವೇಶನ: ಜೂ.26ರಂದು ಸ್ಪೀಕರ್ ಆಯ್ಕೆ

18ನೇ ಲೋಕಸಭೆ| ಇಂದಿನಿಂದ ಮೊದಲ ಅಧಿವೇಶನ: ಜೂ.26ರಂದು ಸ್ಪೀಕರ್ ಆಯ್ಕೆ

- Advertisement -
- Advertisement -

ಇಂದಿನಿಂದ (ಜೂನ್ 24) 18ನೇ ಲೋಕಸಭೆ ಯ ಮೊದಲ ಅಧಿವೇಶನ ಪ್ರಾರಂಭವಾಗಲಿದ್ದು, ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿಜೆಪಿ ನಾಯಕ ಮತ್ತು ಏಳು ಬಾರಿ ಸಂಸದರಾಗಿ ಅನುಭವ ಹೊಂದಿರುವ ಭರ್ತೃಹರಿ ಮಹತಾಬ್‌ ಅವರನ್ನು ಪ್ರಸ್ತುತ ಹಂಗಾಮಿ ಸ್ಪೀಕರ್‌ ಆಗಿ ನೇಮಿಸಲಾಗಿದೆ.

ರಾಷ್ಟ್ರಪತಿ ಶಿಷ್ಟಾಚಾರ ಮೀರಿ ಮಹತಾಬ್‌ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿರುವ ಆರೋಪ ಕೇಳಿ ಬಂದಿದೆ. ಈ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ಸದಸ್ಯ ಕೆ. ಸುರೇಶ್‌ ಅವರ ಹೆಸರನ್ನು ಸೂಚಿಸಲಾಗಿದ್ದರೂ, ಸರ್ಕಾರ ಕಡೆಗಣಿಸಿದೆ ಎಂದು ಹೇಳಲಾಗ್ತಿದೆ. ಈ ಸಂಬಂಧ ಸೃಷ್ಟಿಯಾಗಿರುವ ವಿವಾದವು ಅಧಿವೇಶನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರತಿಪಕ್ಷಗಳು ರಾಷ್ಟ್ರಪತಿ ಮತ್ತು ಕೇಂದ್ರದ ನಡೆಯನ್ನು ಟೀಕಿಸಿವೆ.

ಮಹತಾಬ್‌ ಅವರು ಸತತವಾಗಿ ಏಳು ಬಾರಿ ಲೋಕಸಭೆ ಸದಸ್ಯರಾಗಿದ್ದು, ಹಂಗಾಮಿ ಸ್ಪೀಕರ್‌ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಪ್ರತಿಪಾದಿಸಿದ್ದಾರೆ. ಸುರೇಶ್‌ ಅವರು 1998 ಮತ್ತು 2004ರ ಚುನಾವಣೆಯಲ್ಲಿ ಸೋತಿದ್ದರು ಎಂದೂ ಅವರು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಮಹತಾಬ್‌ ಅವರಿಗೆ ಇಂದು ಬೆಳಿಗ್ಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಬಳಿಕ ಮಹತಾಬ್‌ ಅವರು ಸಂಸತ್‌ ಭವನ ತಲುಪಿ, ಬೆಳಿಗ್ಗೆ 11 ಗಂಟೆಗೆ ಲೋಕಸಭೆ ಅಧಿವೇಶನ ಆರಂಭಿಸಲಿದ್ದಾರೆ.

ಅಗಲಿದ ಗಣ್ಯರ ಗೌರವ ನಮನ ಸಲ್ಲಿಸುವ ಮೂಲಕ ಕಲಾಪ ಆರಂಭವಾಗಲಿದೆ. ಮೊದಲಿಗೆ ಲೋಕಸಭೆಯ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಹಂಗಾಮಿ ಸ್ಪೀಕರ್‌ ಕರೆ ನೀಡಲಿದ್ದಾರೆ.

ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್‌ಗೆ ನೆರವಾಗಲು ಸದಸ್ಯರಾದ ಕೆ. ಸುರೇಶ್‌ (ಕಾಂಗ್ರೆಸ್‌), ಟಿ.ಆರ್‌.ಬಾಲು (ಡಿಎಂಕೆ), ರಾಧಾ ಮೋಹನ್‌ ಸಿಂಗ್‌, ಫಗ್ಗನ್‌ ಸಿಂಗ್‌ ಕುಲಸ್ತೆ (ಇಬ್ಬರೂ ಬಿಜೆಪಿ) ಹಾಗೂ ಸುದೀಪ್‌ ಬಂದ್ಯೋಪಾಧ್ಯಾಯ (ಟಿಎಂಸಿ) ಅವರನ್ನು ರಾಷ್ಟ್ರಪತಿ ನೇಮಿಸಿದ್ದಾರೆ.

ನರೇಂದ್ರ ಮೋದಿಯ ಬಳಿಕ, ಮಂತ್ರಿ ಪರಿಷತ್ತಿನ ಸದಸ್ಯರು ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ನಂತರ ಎರಡು ದಿನಗಳವರೆಗೆ ಉಳಿದ ಸದಸ್ಯರ ಪ್ರಮಾಣವಚನ ಪ್ರಕ್ರಿಯೆ ನಡೆಯಲಿದೆ.

ರಾಷ್ಟ್ರಪತಿಯವರ ಭಾಷಣದ ಮೇಲಿನ ಚರ್ಚೆಯು ಜೂನ್ 28ರಂದು ಪ್ರಾರಂಭವಾಗಲಿದ್ದು, ಜುಲೈ 2 ಅಥವಾ 3ರಂದು ಪ್ರಧಾನಿ ಚರ್ಚೆಗೆ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ನಂತರ ಎರಡೂ ಸದನಗಳನ್ನು ಸಂಕ್ಷಿಪ್ತ ಅವಧಿಗೆ ಮುಂದೂಡಲಾಗುತ್ತದೆ. ಕೇಂದ್ರ ಬಜೆಟ್‌ ಮಂಡನೆಗಾಗಿ ಜುಲೈ 22ರಂದು ಮತ್ತೆ ಸದನದ ಕಲಾಪ ನಡೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ : ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣ: ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಆರಂಭಿಸಿದ ಸಿಬಿಐ, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...