Homeಅಂತರಾಷ್ಟ್ರೀಯಶ್ರೀಲಂಕಾ ವಿರುದ್ಧ ಮೊದಲ ಟಿ20 ಕ್ರಿಕೆಟ್ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಶ್ರೀಲಂಕಾ ವಿರುದ್ಧ ಮೊದಲ ಟಿ20 ಕ್ರಿಕೆಟ್ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಇಂದು ಭಾರತದಿಂದ ಕಣಕ್ಕಿಳಿಯುವ ಹನ್ನೊಂದರ ಬಳಗದ ವಿವರ ಇಲ್ಲಿದೆ.

- Advertisement -
- Advertisement -

ಭಾರತ ಶ್ರೀಲಂಕಾ ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲೇ ಭಾರತ ಗೆಲುವಿನೊಂದಿಗೆ ಸರಣಿ ಆರಂಭಿಸುವ ಗುರಿಯನ್ನು ಹೊಂದಿದೆ. ಆದರೆ, ವಿರಾಟ್‌ ಕೊಹ್ಲಿ, ರಿಷಭ್ ಪಂತ್ ಮತ್ತು ದೀಪಕ್‌ ಚಹರ್‌ ಅನುಪಸ್ಥಿತಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ನಾಯಕ ರೋಹಿತ್‌ ಶರ್ಮಾ ಯಾರಿಗೆಲ್ಲಾ ಸ್ಥಾನ ನೀಡಲಿದ್ದಾರೆ? ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಈಗಾಗಲೇ ವೆಸ್ಟ್‌ ಇಂಡೀಸ್‌ ವಿರುದ್ಧ ತವರಿನಲ್ಲಿ ನಡೆದ ಏಕದಿನ ಮತ್ತು ಟಿ20 ಸರಣಿಯಲ್ಲಿ ಕ್ಲೀನ್‌ ಸ್ವೀಪ್ ಸಾಧಿಸಿದೆ. ಹೀಗಾಗಿ ಇಂದಿನಿಂದ ಆರಂಭವಾಗಲಿರುವ ಸರಣಿಯ ಮೇಲೂ ಸಾಕಷ್ಟು ನಿರೀಕ್ಷೆಗಳು ಇವೆ. ಆದರೆ, ವಿಂಡೀಸ್‌ ವಿರುದ್ಧದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಆಟಗಾರರ ಅಲಭ್ಯತೆಯಲ್ಲಿ ಶ್ರೀಲಂಕಾ ವಿರುದ್ಧ ಬಿಸಿಸಿಐ ಆಯ್ಕೆ ಸಮಿತಿ ಹೊಸ ಯುವಕರ ತಂಡವನ್ನು ಘೋಷಿಸಿದ್ದು, ಯುವಕರ ಮೇಲೆ ಸಾಕಷ್ಟು ನಿರೀಕ್ಷೆಗಳು ಮೂಡಿವೆ.

ಹೀಗಿರಲಿದೆ ಭಾರತದ ಹನ್ನೊಂದರ ಬಳಗ

ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ನಾಯಕ ರೋಹಿತ್‌ ಶರ್ಮಾ ಮತ್ತು ಇಶಾನ್ ಕಿಶನ್‌ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಒಂದು ವೇಳೆ ಋತುರಾಜ್ ಗಾಯಕ್ವಾ‌ಡ್ ತಂಡದಲ್ಲಿ ಅವಕಾಶ ಪಡೆದರೆ ರೋಹಿತ್‌ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌, ಸಂಜು ಸ್ಯಾಮ್ಸನ್, ವೆಂಕಟೇಶ್ ಅಯ್ಯರ್‌, ದೀಪಲ್ ಹೂಡಾ ಮತ್ತು ರವೀಂದ್ರ ಜಡೇಜಾ ತಂಡಕ್ಕೆ ಬಲ ತುಂಬಲಿದ್ದಾರೆ.

ಇನ್ನೂ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್‌ ಬುಮ್ರಾ ತಂಡಕ್ಕೆ ಮರಳಿರುವುದು ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ತುಂಬಲಿದೆ. ಬುಮ್ರಾ ಜೊತೆಗೆ ಭುವನೇಶ್ವರ್‌ ಕುಮಾರ್‌, ಹರ್ಷಲ್ ಪಟೇಲ್, ಮಹಮ್ಮದ್ ಸಿರಾಜ್ ಮತ್ತು ರವಿ ಬಿಷ್ಣೋಯ್ ಸಾಥ್ ನೀಡಲಿದ್ದಾರೆ.

ಇದನ್ನೂ ಓದಿ:ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ:…

ಗೆಲುವಿನ ಭರವಸೆಯಲ್ಲಿ ಶ್ರೀಲಂಕಾ

ಸತತ ಸೋಲಿನಿಂದ ಕಂಗೆಟ್ಟಿರುವ ಶ್ರೀಲಂಕಾ ತಂಡ ಸರಣಿ ಗೆಲುವಿನ ಹುಡುಕಾಟದಲ್ಲಿದೆ. ಕಳೆದ ವಾರ ಮುಕ್ತಾಯವಾದ ಆಸ್ಟ್ರೇಲಿಯಾ ಪ್ರವಾಸದಲ್ಲಿ 3-2 ಅಂತರದಲ್ಲಿ ಟಿ20 ಸರಣಿಯನ್ನು ಶ್ರೀಲಂಕಾ ಸೋತಿತ್ತು. ಆದರೆ, ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ತಂಡದಲ್ಲಿ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಾಗಲು ಕಾರಣವಾಗಿದೆ. ಆದರೆ, ತಂಡದ ಬ್ಯಾಟಿಂಗ್ ವಿಭಾಗದ ಕಳಪೆ ಪ್ರದರ್ಶನ ಶ್ರೀಲಂಕಾ ನಾಯಕ ದಾಸುನ್ ಶನಕ ತಲೆ ನೋವಿಗೆ ಕಾರಣವಾಗಿದೆ.

 

ತಂಡಗಳು ಹೀಗಿದೆ

ಭಾರತದ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಚರಿತ್ ಅಸಲಂಕಾ (ಉಪನಾಯಕ), ದಿನೇಶ್ ಚಂಡಿಮಲ್, ದನುಷ್ಕ ಗುಣತಿಲಕ, ಕಮಿಲ್ ಮಿಶ್ರಾ, ಜನಿತ್ ಲಿಯಾನಗೆ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ದುಷ್ಮಂತ ಚಮೀರ, ಲಹಿರು ಕುಮಾರ, ಭಿರುರನ್, ಬಿನುರ ಫೆರ್ನಾಂಡೋ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಆಶಿಯನ್ ಡೇನಿಯಲ್.


ಇದನ್ನೂ ಓದಿ; ಉದ್ಯಮವಾಗಿ ರೂಪುಗೊಳ್ಳುತ್ತಿರುವ ಕ್ರಿಕೆಟ್ ಮೈದಾನಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...